ETV Bharat / city

ಮುಜರಾಯಿ ಇಲಾಖೆ: 5 ವರ್ಷದಲ್ಲಿ ಕಾಂಗ್ರೆಸ್​​ನಿಂದ 1,282 ಕೋಟಿ, ಬಿಜೆಪಿಯಿಂದ ಮೂರೇ ವರ್ಷದಲ್ಲಿ 1781 ಕೋಟಿ ಅನುದಾನ

author img

By

Published : Jul 11, 2022, 8:33 PM IST

ಕಾಂಗ್ರೆಸ್‌ ಸರ್ಕಾರ ತನ್ನ 5 ವರ್ಷಗಳ ಅಧಿಕಾರದ ಅವಧಿಯಲ್ಲಿ ಮುಜರಾಯಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿರಲಿಲ್ಲ. 5 ವರ್ಷಗಳಲ್ಲಿ ಕೇವಲ 1,289 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದರೆ, ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 1,781 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದೆ - ಸಚಿವೆ ಶಶಿಕಲಾ ಜೊಲ್ಲೆ

ಮುಜರಾಯಿ ಇಲಾಖೆ:
ಮುಜರಾಯಿ ಇಲಾಖೆ:

ಬೆಂಗಳೂರು: ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 1,781 ಕೋಟಿ ರೂಪಾಯಿಗಳಷ್ಟು ಅನುದಾನ ನೀಡುವ ಮೂಲಕ ಮುಜರಾಯಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕಳೆದ 10 ವರ್ಷಗಳಲ್ಲೇ ಅತಿಹೆಚ್ಚು ಅನುದಾನವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಜರಾಯಿ ಇಲಾಖೆಗೆ ಬಿಡುಗಡೆಗೊಳಿಸಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿಂದು ಅನುದಾನ ಹಂಚಿಕೆ ಬಗ್ಗೆ ವಿವರ ನೀಡಿ ಮಾತನಾಡಿದ ಅವರು ಹೆಚ್ಚಿನ ಅನುದಾನ ನೀಡುವ ಮೂಲಕ ಸಿಎಂ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿ ಅವರ ದೇವಾಲಯಗಳ ಸಮಗ್ರ ಅಭಿವೃದ್ಧಿಯ ಕನಸು ನನಸು ಮಾಡುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೆ ಬಲ ತುಂಬಿದ್ದಾರೆ. ಈ ವರ್ಷದ ಆಯವ್ಯಯದಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ರಾಜ್ಯದ ಹೊರಭಾಗದಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ಧಿಗಾಗಿ ಒಟ್ಟು 421 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ವಿಧಾನಸಭಾ ಕ್ಷೇತ್ರವಾರು ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಈವರೆಗೂ (ಜುಲೈ 10, 2022 ರವರೆಗೆ) ಒಟ್ಟು 272 ಕೋಟಿ ರೂಪಾಯಿಗಳ ವಿಶೇಷ ಅನುದಾನ ಒದಗಿಸಿದ್ದು, ಅದರಲ್ಲಿ ಶೇ. 50 ರಷ್ಟನ್ನು (136 ಕೋಟಿ ರೂ) ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೂ ಒಟ್ಟು ರೂ. 693 ಕೋಟಿ ಗಳಷ್ಟು (ಬಜೆಟ್‌ ಅನುದಾನ 421 ಕೋಟಿ + ವಿಶೇಷ ಅನುದಾನ ರೂ. 272 ಕೋಟಿ) ಬೃಹತ್‌ ಗಾತ್ರದ ಅನುದಾನ ಒದಗಿಸಲಾಗಿದೆ ಎಂದರು.

ಕಳೆದ ಒಂದು ವರ್ಷದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಹಲವಾರು ನೂತನ ಯೋಜನೆಗಳನ್ನ ಘೋಷಣೆ ಮಾಡಿ ಅನುಷ್ಠಾನಗೊಳಿಸಲಾಗುತ್ತಿದೆ. ದೈವ ಸಂಕಲ್ಪ (1140 ಕೋಟಿ ವೆಚ್ಚದಲ್ಲಿ 25 ಏ ದರ್ಜೆ ದೇವಾಲಯಗಳ ಸಮಗ್ರ ಅಭಿವೃದ್ದಿ), ಇಂಟಿಗ್ರೇಟೆಡ್‌ ಟೆಂಪಲ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ ಅಳವಡಿಕೆ, ಕಾಯಕಲ್ಪ (ಮುಜರಾಯಿ ಇಲಾಖೆಯ ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ), ಕಾಶಿ ಯಾತ್ರೆಗೆ ಸಹಾಯಧನ, ಕಾಶಿಗೆ ಭಾರತ್‌ ಗೌರವ್‌ ಯೋಜನೆಯ ಮೂಲಕ ರೈಲು, ಇಲಾಖೆಯ ನೌಕರರು ಹಾಗೂ ಅರ್ಚಕರಿಗೆ ವಿಮಾ ಸೌಲಭ್ಯ, ತಸ್ತಿಕ್‌ ಹಣ ಹೆಚ್ಚಳದಂತಹ ಯೋಜನೆಗಳಿಗೆ ಮುಖ್ಯಮಂತ್ರಿಗಳು ಅಗತ್ಯ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ತನ್ನ 5 ವರ್ಷಗಳ ಅಧಿಕಾರದ ಅವಧಿಯಲ್ಲಿ ಮುಜರಾಯಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿರಲಿಲ್ಲ. 5 ವರ್ಷಗಳಲ್ಲಿ ಕೇವಲ 1,289 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದರೆ, ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 1,781 ಕೋಟಿ ರೂಪಾಯಿಗಳಷ್ಟು ಅನುದಾನ ನೀಡುವ ಮೂಲಕ ಮುಜರಾಯಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿದೆ. ಕಾಂಗ್ರೆಸ್‌ ಮತ್ತು ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ದೇವಸ್ಥಾನಗಳ ಅಭಿವೃದ್ದಿಯ ನಿಟ್ಟಿನಲ್ಲಿ ನೂತನ ಯೋಜನೆಗಳ ಘೋಷಣೆಯೇ ಆಗಿರಲಿಲ್ಲ ಎನ್ನುವುದನ್ನ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯಾಗಿದೆ ಎಂದರು.

ಎಲ್ಲ ಪಕ್ಷದ ಶಾಸಕರಿಗೂ ಅನುದಾನ: ಧಾರ್ಮಿಕ ಕೇಂದ್ರಗಳ ಅನುದಾನ ಬಿಡುಗಡೆಯಲ್ಲಿ ಯಾವುದೇ ತಾರತಮ್ಯ ಮಾಡಲಾಗಿಲ್ಲ ಎಂದು ತಿಳಿಸಿದ ಸಚಿವೆ ಜೊಲ್ಲೆಯವರು, ವಿರೋಧ ಪಕ್ಷದ ಪ್ರಮುಖ ನಾಯಕರು ಹಾಗೂ ಶಾಸಕರಿಗೂ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಹಂಚಿಕೆಯಾಗಿದೆ ಎಂದು ಹೇಳಿದರು. ಆಯಾ ಕ್ಷೇತ್ರಗಳ ದೇವಸ್ಥಾನಗಳ ಅಭಿವೃದ್ಧಿಗಾಗಿ ಬೇಡಿಕೆ ಸಲ್ಲಿಸಿದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಶಾಸಕರಿಗೂ ಅನುದಾನ ಹಂಚಿಕೆ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ ಕ್ಷೇತ್ರಕ್ಕೆ 10 ಕೋಟಿ, ಡಾ.ಯತೀಂದ್ರ ಎಸ್‌ ಕ್ಷೇತ್ರಕ್ಕೆ1.50 ಕೋಟಿ, ಅನಿತಾ ಕುಮಾರಸ್ವಾಮಿ, ಆರ್‌ ವಿ ದೇಶಪಾಂಡೆ ಮತ್ತು ಈಶ್ವರ ಖಂಡ್ರೆ ಅವರ ಕ್ಷೇತ್ರಗಳಿಗೆ ತಲಾ 3 ಮೂರು ಕೋಟಿ ಅನುದಾನ ಹಂಚಿಕೆಯಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

(ಇದನ್ನೂ ಓದಿ: ಜನಸಂಖ್ಯೆ ನಿಯಂತ್ರಣದಲ್ಲಿ ರಾಜ್ಯ ಮುಂಚೂಣಿ : ಜನಸಂಖ್ಯೆ ಕುಸಿತದ ಬಗ್ಗೆ ಆರ್ಥಿಕ ಸಮೀಕ್ಷೆಯಲ್ಲಿ ಆತಂಕ!)

ಬೆಂಗಳೂರು: ರಾಜ್ಯದ ದೇವಸ್ಥಾನಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 1,781 ಕೋಟಿ ರೂಪಾಯಿಗಳಷ್ಟು ಅನುದಾನ ನೀಡುವ ಮೂಲಕ ಮುಜರಾಯಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕಳೆದ 10 ವರ್ಷಗಳಲ್ಲೇ ಅತಿಹೆಚ್ಚು ಅನುದಾನವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಜರಾಯಿ ಇಲಾಖೆಗೆ ಬಿಡುಗಡೆಗೊಳಿಸಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿಂದು ಅನುದಾನ ಹಂಚಿಕೆ ಬಗ್ಗೆ ವಿವರ ನೀಡಿ ಮಾತನಾಡಿದ ಅವರು ಹೆಚ್ಚಿನ ಅನುದಾನ ನೀಡುವ ಮೂಲಕ ಸಿಎಂ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿ ಅವರ ದೇವಾಲಯಗಳ ಸಮಗ್ರ ಅಭಿವೃದ್ಧಿಯ ಕನಸು ನನಸು ಮಾಡುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೆ ಬಲ ತುಂಬಿದ್ದಾರೆ. ಈ ವರ್ಷದ ಆಯವ್ಯಯದಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ರಾಜ್ಯದ ಹೊರಭಾಗದಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ಧಿಗಾಗಿ ಒಟ್ಟು 421 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ವಿಧಾನಸಭಾ ಕ್ಷೇತ್ರವಾರು ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಈವರೆಗೂ (ಜುಲೈ 10, 2022 ರವರೆಗೆ) ಒಟ್ಟು 272 ಕೋಟಿ ರೂಪಾಯಿಗಳ ವಿಶೇಷ ಅನುದಾನ ಒದಗಿಸಿದ್ದು, ಅದರಲ್ಲಿ ಶೇ. 50 ರಷ್ಟನ್ನು (136 ಕೋಟಿ ರೂ) ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೂ ಒಟ್ಟು ರೂ. 693 ಕೋಟಿ ಗಳಷ್ಟು (ಬಜೆಟ್‌ ಅನುದಾನ 421 ಕೋಟಿ + ವಿಶೇಷ ಅನುದಾನ ರೂ. 272 ಕೋಟಿ) ಬೃಹತ್‌ ಗಾತ್ರದ ಅನುದಾನ ಒದಗಿಸಲಾಗಿದೆ ಎಂದರು.

ಕಳೆದ ಒಂದು ವರ್ಷದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಹಲವಾರು ನೂತನ ಯೋಜನೆಗಳನ್ನ ಘೋಷಣೆ ಮಾಡಿ ಅನುಷ್ಠಾನಗೊಳಿಸಲಾಗುತ್ತಿದೆ. ದೈವ ಸಂಕಲ್ಪ (1140 ಕೋಟಿ ವೆಚ್ಚದಲ್ಲಿ 25 ಏ ದರ್ಜೆ ದೇವಾಲಯಗಳ ಸಮಗ್ರ ಅಭಿವೃದ್ದಿ), ಇಂಟಿಗ್ರೇಟೆಡ್‌ ಟೆಂಪಲ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ ಅಳವಡಿಕೆ, ಕಾಯಕಲ್ಪ (ಮುಜರಾಯಿ ಇಲಾಖೆಯ ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ), ಕಾಶಿ ಯಾತ್ರೆಗೆ ಸಹಾಯಧನ, ಕಾಶಿಗೆ ಭಾರತ್‌ ಗೌರವ್‌ ಯೋಜನೆಯ ಮೂಲಕ ರೈಲು, ಇಲಾಖೆಯ ನೌಕರರು ಹಾಗೂ ಅರ್ಚಕರಿಗೆ ವಿಮಾ ಸೌಲಭ್ಯ, ತಸ್ತಿಕ್‌ ಹಣ ಹೆಚ್ಚಳದಂತಹ ಯೋಜನೆಗಳಿಗೆ ಮುಖ್ಯಮಂತ್ರಿಗಳು ಅಗತ್ಯ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ತನ್ನ 5 ವರ್ಷಗಳ ಅಧಿಕಾರದ ಅವಧಿಯಲ್ಲಿ ಮುಜರಾಯಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿರಲಿಲ್ಲ. 5 ವರ್ಷಗಳಲ್ಲಿ ಕೇವಲ 1,289 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದರೆ, ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ 1,781 ಕೋಟಿ ರೂಪಾಯಿಗಳಷ್ಟು ಅನುದಾನ ನೀಡುವ ಮೂಲಕ ಮುಜರಾಯಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿದೆ. ಕಾಂಗ್ರೆಸ್‌ ಮತ್ತು ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ದೇವಸ್ಥಾನಗಳ ಅಭಿವೃದ್ದಿಯ ನಿಟ್ಟಿನಲ್ಲಿ ನೂತನ ಯೋಜನೆಗಳ ಘೋಷಣೆಯೇ ಆಗಿರಲಿಲ್ಲ ಎನ್ನುವುದನ್ನ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯಾಗಿದೆ ಎಂದರು.

ಎಲ್ಲ ಪಕ್ಷದ ಶಾಸಕರಿಗೂ ಅನುದಾನ: ಧಾರ್ಮಿಕ ಕೇಂದ್ರಗಳ ಅನುದಾನ ಬಿಡುಗಡೆಯಲ್ಲಿ ಯಾವುದೇ ತಾರತಮ್ಯ ಮಾಡಲಾಗಿಲ್ಲ ಎಂದು ತಿಳಿಸಿದ ಸಚಿವೆ ಜೊಲ್ಲೆಯವರು, ವಿರೋಧ ಪಕ್ಷದ ಪ್ರಮುಖ ನಾಯಕರು ಹಾಗೂ ಶಾಸಕರಿಗೂ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಹಂಚಿಕೆಯಾಗಿದೆ ಎಂದು ಹೇಳಿದರು. ಆಯಾ ಕ್ಷೇತ್ರಗಳ ದೇವಸ್ಥಾನಗಳ ಅಭಿವೃದ್ಧಿಗಾಗಿ ಬೇಡಿಕೆ ಸಲ್ಲಿಸಿದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಶಾಸಕರಿಗೂ ಅನುದಾನ ಹಂಚಿಕೆ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ ಕ್ಷೇತ್ರಕ್ಕೆ 10 ಕೋಟಿ, ಡಾ.ಯತೀಂದ್ರ ಎಸ್‌ ಕ್ಷೇತ್ರಕ್ಕೆ1.50 ಕೋಟಿ, ಅನಿತಾ ಕುಮಾರಸ್ವಾಮಿ, ಆರ್‌ ವಿ ದೇಶಪಾಂಡೆ ಮತ್ತು ಈಶ್ವರ ಖಂಡ್ರೆ ಅವರ ಕ್ಷೇತ್ರಗಳಿಗೆ ತಲಾ 3 ಮೂರು ಕೋಟಿ ಅನುದಾನ ಹಂಚಿಕೆಯಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

(ಇದನ್ನೂ ಓದಿ: ಜನಸಂಖ್ಯೆ ನಿಯಂತ್ರಣದಲ್ಲಿ ರಾಜ್ಯ ಮುಂಚೂಣಿ : ಜನಸಂಖ್ಯೆ ಕುಸಿತದ ಬಗ್ಗೆ ಆರ್ಥಿಕ ಸಮೀಕ್ಷೆಯಲ್ಲಿ ಆತಂಕ!)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.