ETV Bharat / city

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ: ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ - ವರುಣ್ ಹತ್ಯೆ ಯತ್ನ ಆರೋಪಿಗಳು ಪೊಲೀಸರ ವಶಕ್ಕೆ

ಆರ್‌ಎಸ್‌ಎಸ್‌ ಕಾರ್ಯಕರ್ತ ವರುಣ್ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಜ. 4ರವರೆಗೆ ನಾಲ್ಕು ದಿನಗಳ ಕಾಲ ಮತ್ತೆ ಪೊಲೀಸರ ವಶಕ್ಕೆ ನೀಡಿ ನಗರದ ಮ್ಯಾಜಸ್ಟ್ರೇಟ್​ ನ್ಯಾಯಾಲಯ ಆದೇಶಿಸಿದೆ. ಹೆಚ್ಚಿನ ವಿಚಾರಣೆಗಾಗಿ ಮತ್ತೆ ತಮ್ಮ ವಶಕ್ಕೆ ನೀಡಬೇಕೆಂಬ ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್​ ಆರೋಪಿಗಳನ್ನು ಮತ್ತೆ ಪೊಲೀಸರ ಸುಪರ್ದಿಗೆ ನೀಡಿದೆ.

murder-of-rss-activist-accused-return-to-police-custody
ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ
author img

By

Published : Jan 20, 2020, 8:54 PM IST

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ವರುಣ್ ಹತ್ಯೆಗೆ ಯತ್ನಿಸಿದ ಆರೋಪಿಗಳನ್ನು ಜ. 4ರವರೆಗೆ ಮತ್ತೆ ನಾಲ್ಕು ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡಿ ನಗರದ ಮ್ಯಾಜಿಸ್ಟ್ರೇಟ್​ ನ್ಯಾಯಾಲಯ ಆದೇಶ ಹೊರಡಿಸಿದೆ.

ನಗರ ಪೊಲೀಸರು ಇಂದು ಬೆಂಗಳೂರಿನ 8ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಿಗಳಾದ ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ದಿಕ್ ಅಕ್ಬರ್, ಅಕ್ಬರ್ ಪಾಷಾ, ಸನಾ ಹಾಗು ಸಾದಿಕ್ ರನ್ನು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ ತಮ್ಮ ವಶಕ್ಕೆ ನೀಡಬೇಕೆಂದು ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಗಳನ್ನು ಪೊಲೀಸರ ಸುಪರ್ದಿಗೆ ನೀಡಿದೆ.

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ: ಆರೋಪಿಗಳು ಮತ್ತೆ ಪೊಲೀಸ್​ ಕಸ್ಟಡಿಗೆ

ಪ್ರಕರಣದ ಹಿನ್ನೆಲೆ:

ಇತ್ತೀಚೆಗೆ ನಗರದ ಟೌನ್ ಹಾಲ್ ಎದುರು ನಡೆದಿದ್ದ ಸಿಎಎ ಹಾಗೂ ಎನ್ಆರ್​ಸಿ ಪರ ಸಭೆಯಲ್ಲಿ ಭಾಗವಹಿಸಿದ್ದ ಆರ್​​ಎಸ್​ಎಸ್ ಕಾರ್ಯಕರ್ತ ವರುಣ್ ಸಭೆ ಮುಗಿಸಿ ಹಿಂದಿರುಗುವಾಗ ಆರೋಪಿಗಳು ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದ್ದರು. ಸೋಮವಾರ ಪೊಲೀಸರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ವರುಣ್ ಹತ್ಯೆಗೆ ಯತ್ನಿಸಿದ ಆರೋಪಿಗಳನ್ನು ಜ. 4ರವರೆಗೆ ಮತ್ತೆ ನಾಲ್ಕು ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡಿ ನಗರದ ಮ್ಯಾಜಿಸ್ಟ್ರೇಟ್​ ನ್ಯಾಯಾಲಯ ಆದೇಶ ಹೊರಡಿಸಿದೆ.

ನಗರ ಪೊಲೀಸರು ಇಂದು ಬೆಂಗಳೂರಿನ 8ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಿಗಳಾದ ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ದಿಕ್ ಅಕ್ಬರ್, ಅಕ್ಬರ್ ಪಾಷಾ, ಸನಾ ಹಾಗು ಸಾದಿಕ್ ರನ್ನು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ ತಮ್ಮ ವಶಕ್ಕೆ ನೀಡಬೇಕೆಂದು ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಗಳನ್ನು ಪೊಲೀಸರ ಸುಪರ್ದಿಗೆ ನೀಡಿದೆ.

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ: ಆರೋಪಿಗಳು ಮತ್ತೆ ಪೊಲೀಸ್​ ಕಸ್ಟಡಿಗೆ

ಪ್ರಕರಣದ ಹಿನ್ನೆಲೆ:

ಇತ್ತೀಚೆಗೆ ನಗರದ ಟೌನ್ ಹಾಲ್ ಎದುರು ನಡೆದಿದ್ದ ಸಿಎಎ ಹಾಗೂ ಎನ್ಆರ್​ಸಿ ಪರ ಸಭೆಯಲ್ಲಿ ಭಾಗವಹಿಸಿದ್ದ ಆರ್​​ಎಸ್​ಎಸ್ ಕಾರ್ಯಕರ್ತ ವರುಣ್ ಸಭೆ ಮುಗಿಸಿ ಹಿಂದಿರುಗುವಾಗ ಆರೋಪಿಗಳು ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದ್ದರು. ಸೋಮವಾರ ಪೊಲೀಸರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.

Intro:Body:ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣ : ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ
ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ವರುಣ್ ಹತ್ಯೆಗೆ ಯತ್ನಿಸಿದ ಆರೋಪಿಗಳನ್ನು ಜ.4ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನಗರದ ವಿಚಾರಣಾ ನ್ಯಾಯಾಲಯ ಆದೇಶಿಸಿದೆ.
ನಗರ ಪೊಲೀಸರು ಸೋಮವಾರ ಬೆಂಗಳೂರಿನ 8ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಿಗಳಾದ ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ದಿಕ್ ಅಕ್ಬರ್, ಅಕ್ಬರ್ ಪಾಷಾ, ಸನಾ ಹಾಗು ಸಾದಿಕ್ ರನ್ನು ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮತ್ತೆ ತಮ್ಮ ವಶಕ್ಕೆ ನೀಡಬೇಕೆಂದು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಗಳನ್ನು ಪೊಲೀಸ್ ಸುಪರ್ದಿಗೆ ನೀಡಿ ಆದೇಶಿಸಿತು.
ನಗರದ ಟೌನ್ ಹಾಲ್ ನಲ್ಲಿ ನಡೆದಿದ್ದ ಸಿಎಎ ಹಾಗೂ ಎನ್.ಆರ್.ಸಿ ಪರ ಸಭೆಯಲ್ಲಿ ಭಾಗವಹಿಸಿದ್ದ ಆರ್ ಎಸ್ ಎಸ್ ಕಾರ್ಯಕರ್ತ ವರುಣ್ ಸಭೆ ಮುಗಿಸಿ ಹಿಂದಿರುಗುವಾಗ ಆರೋಪಿಗಳು ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದ್ದರು. ಸೋಮವಾರ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.