ETV Bharat / city

ಕೆಎಸ್​ಆರ್​ಟಿಸಿಗೆ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ - ಕೆಎಸ್​ಆರ್​ಟಿಸಿ ಉಪಕ್ರಮಗಳಾದ ಮೊಬೈಲ್ ಫೀವರ್ ಕ್ಲಿನಿಕ್​

ಕೆಎಸ್​ಆರ್​ಟಿಸಿ ಉಪ ಕ್ರಮಗಳಾದ ಸ್ತ್ರೀ ಶೌಚಾಲಯ ಮತ್ತು ಮೊಬೈಲ್ ಫೀವರ್ ಕ್ಲಿನಿಕ್​ಗಳಿಗೆ ಸಮಾಜದ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿ ವರ್ಗದಲ್ಲಿ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.

National Public Enterprises Outstanding Award for KSRTC
ಕೆಎಸ್​ಆರ್​ಟಿಸಿಗೆ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ
author img

By

Published : Oct 14, 2020, 2:29 PM IST

ಬೆಂಗಳೂರು: ಕೊರೊನಾ ಕಾಲದಲ್ಲಿ ತುರ್ತು ಸೇವೆಗಳನ್ನು ನೀಡುತ್ತಾ ಸಾಮಾಜಿಕ ಕಳಕಳಿ ತೋರಿಸುತ್ತ ಬಂದಿರುವ ಕೆಎಸ್​ಆರ್​ಟಿಸಿ ಉಪಕ್ರಮಗಳಾದ ಸ್ತ್ರೀ ಶೌಚಾಲಯ ಮತ್ತು ಮೊಬೈಲ್ ಫೀವರ್ ಕ್ಲಿನಿಕ್​ಗಳಿಗೆ ಸಮಾಜದ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿ ವರ್ಗದಲ್ಲಿ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.

ಕೆಎಸ್​ಆರ್​ಟಿಸಿಗೆ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ

ಇಂದು ನಡೆದ ವರ್ಚುವಲ್ ಸಮ್ಮೇಳನದಲ್ಲಿ ಮಾತನಾಡಿದ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ.ಕಳಸದ, ಕೋವಿಡ್ ಪರಿಸ್ಥಿತಿಯಲ್ಲೂ ನಮ್ಮ ಸಿಬ್ಬಂದಿ ಕೊರೊನಾ ವಾರಿಯರ್ಸ್‌ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಪ್ರಶಸ್ತಿಯನ್ನು ನಮ್ಮ ಸಿಬ್ಬಂದಿ, ಅದರಲ್ಲಿಯೂ ಕೋವಿಡ್​​ಗೆ ತುತ್ತಾಗಿ ತಮ್ಮ‌ ಅಮೂಲ್ಯ ಪ್ರಾಣವನ್ನು ಕಳೆದುಕೊಂಡ ಸಿಬ್ಬಂದಿ ಹಾಗೂ ಅವರ ಪರಿವಾರದವರಿಗೆ ಸಮರ್ಪಿಸುತ್ತೇನೆ ಎಂದರು.

ನಮ್ಮ ಸಾರಿಗೆ ನಿಗಮವು ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾಗಲೂ ನಾವು ನಮ್ಮ‌ ಕಾರ್ಯದಿಂದ ವಿಮುಖರಾಗದೇ ಎಂದಿನಂತೆ ಶ್ರದ್ಧೆ ಮತ್ತು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವ ಫಲ ಈ ಪ್ರಶಸ್ತಿಯಾಗಿದೆ. ಪ್ರಶಸ್ತಿ - ಪುರಸ್ಕಾರಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುವುದರೊಂದಿಗೆ ಸಾಮಾಜಿಕ ಬದ್ಧತೆಯಿಂದ ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುತ್ತದೆ.

ಸ್ತೀ ಶೌಚಾಲಯ ಮತ್ತು ಮೊಬೈಲ್ ಫೀವರ್ ಕ್ಲಿನಿಕ್ ಈ ಎರಡೂ ಉಪಕ್ರಮಗಳನ್ನು ನಿಗಮದ ಅನುಪಯುಕ್ತ ಬಸ್​ ಅನ್ನು ಉಪಯೋಗಿಸಿಕೊಂಡು ನಿರ್ಮಿಸಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಈ ಉಪಕ್ರಮಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಹಾಗೂ ಮಾನ್ಯತೆ ದೊರಕಿರುವುದು ಸಂತಸದ ಸಂಗತಿ ಎಂದರು.


ಬೆಂಗಳೂರು: ಕೊರೊನಾ ಕಾಲದಲ್ಲಿ ತುರ್ತು ಸೇವೆಗಳನ್ನು ನೀಡುತ್ತಾ ಸಾಮಾಜಿಕ ಕಳಕಳಿ ತೋರಿಸುತ್ತ ಬಂದಿರುವ ಕೆಎಸ್​ಆರ್​ಟಿಸಿ ಉಪಕ್ರಮಗಳಾದ ಸ್ತ್ರೀ ಶೌಚಾಲಯ ಮತ್ತು ಮೊಬೈಲ್ ಫೀವರ್ ಕ್ಲಿನಿಕ್​ಗಳಿಗೆ ಸಮಾಜದ ಅಭಿವೃದ್ಧಿಗಾಗಿ ಸಾಮಾಜಿಕ ಕಳಕಳಿ ವರ್ಗದಲ್ಲಿ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.

ಕೆಎಸ್​ಆರ್​ಟಿಸಿಗೆ ರಾಷ್ಟ್ರೀಯ ಸಾರ್ವಜನಿಕ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ

ಇಂದು ನಡೆದ ವರ್ಚುವಲ್ ಸಮ್ಮೇಳನದಲ್ಲಿ ಮಾತನಾಡಿದ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ‌ ನಿರ್ದೇಶಕ ಶಿವಯೋಗಿ ಸಿ.ಕಳಸದ, ಕೋವಿಡ್ ಪರಿಸ್ಥಿತಿಯಲ್ಲೂ ನಮ್ಮ ಸಿಬ್ಬಂದಿ ಕೊರೊನಾ ವಾರಿಯರ್ಸ್‌ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಪ್ರಶಸ್ತಿಯನ್ನು ನಮ್ಮ ಸಿಬ್ಬಂದಿ, ಅದರಲ್ಲಿಯೂ ಕೋವಿಡ್​​ಗೆ ತುತ್ತಾಗಿ ತಮ್ಮ‌ ಅಮೂಲ್ಯ ಪ್ರಾಣವನ್ನು ಕಳೆದುಕೊಂಡ ಸಿಬ್ಬಂದಿ ಹಾಗೂ ಅವರ ಪರಿವಾರದವರಿಗೆ ಸಮರ್ಪಿಸುತ್ತೇನೆ ಎಂದರು.

ನಮ್ಮ ಸಾರಿಗೆ ನಿಗಮವು ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾಗಲೂ ನಾವು ನಮ್ಮ‌ ಕಾರ್ಯದಿಂದ ವಿಮುಖರಾಗದೇ ಎಂದಿನಂತೆ ಶ್ರದ್ಧೆ ಮತ್ತು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವ ಫಲ ಈ ಪ್ರಶಸ್ತಿಯಾಗಿದೆ. ಪ್ರಶಸ್ತಿ - ಪುರಸ್ಕಾರಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುವುದರೊಂದಿಗೆ ಸಾಮಾಜಿಕ ಬದ್ಧತೆಯಿಂದ ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುತ್ತದೆ.

ಸ್ತೀ ಶೌಚಾಲಯ ಮತ್ತು ಮೊಬೈಲ್ ಫೀವರ್ ಕ್ಲಿನಿಕ್ ಈ ಎರಡೂ ಉಪಕ್ರಮಗಳನ್ನು ನಿಗಮದ ಅನುಪಯುಕ್ತ ಬಸ್​ ಅನ್ನು ಉಪಯೋಗಿಸಿಕೊಂಡು ನಿರ್ಮಿಸಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಈ ಉಪಕ್ರಮಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಹಾಗೂ ಮಾನ್ಯತೆ ದೊರಕಿರುವುದು ಸಂತಸದ ಸಂಗತಿ ಎಂದರು.


ETV Bharat Logo

Copyright © 2025 Ushodaya Enterprises Pvt. Ltd., All Rights Reserved.