ಬೆಂಗಳೂರು: ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಜಯನಗರದಲ್ಲಿ ಪಾದಯಾತ್ರೆ ನಡೆಸಿದರು. ಈ ವೇಳೆ, ಜಯನಗರ ಟಿ ಬ್ಲಾಕ್ನಲ್ಲಿ ಮನೆ ಮನೆಗೆ ತೆರಳಿ ತ್ರಿವರ್ಣ ಧ್ವಜ ನೀಡಿದರು.

ಇದಕ್ಕೂ ಮುನ್ನ ಶಾಂತಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೈಕ್ ರ್ಯಾಲಿಗೆ ಚಾಲನೆ ನೀಡಿದ ನಿರ್ಮಲಾ ಸೀತಾರಾಮನ್, ಬಳಿಕ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್, ಮಾಜಿ ಕಾರ್ಪೊರೇಟರ್ ಸಿ.ಕೆ. ರಾಮಮೂರ್ತಿ ಸಾತ್ ನೀಡಿದರು.
ಇದನ್ನೂ ಓದಿ: ಸ್ವಾತಂತ್ರ್ಯ ಅಮೃತ ಮಹೋತ್ಸವ.. ಬಳ್ಳಾರಿಯಲ್ಲಿ ತಿರಂಗಾ ಹಿಡಿದು ಜಯಘೋಷ ಕೂಗಿದ ಸಾವಿರಾರು ಮಂದಿ