ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಭಾನುವಾರ ಸಂಪೂರ್ಣ ಲಾಕ್ಡೌನ್ ಇರಲ್ಲವೆಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.
ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ. ನಾಳೆ ರಾಜ್ಯದಲ್ಲಿ ಎಂದಿನಂತೆ ದೈನಂದಿನ ಕಾರ್ಯಚಟುವಟಿಕೆಗಳು ನಡೆಯಲಿವೆ.
ಕಳೆದ ವಾರ ಸಂಡೆಯಂದು ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಜನರು ಹಲವು ತೊಂದರೆಗಳನ್ನು ಅನುಭವಿಸುವಂತಾಗಿತ್ತು. ಭಾನುವಾರ ಸಂಪೂರ್ಣ ಲಾಕ್ಡೌನ್ ಎಂದು ಆದೇಶ ಹೊರಡಿಸಿದ್ದಕ್ಕೆ ಯಾವುದೇ ವಾಹನ ಸಂಚಾರ ಇರಲಿಲ್ಲ. ವ್ಯಾಪಾರ-ವಹಿವಾಟುಗಳು ಸಹ ಬಂದ್ ಆಗಿದ್ದವು. ಈ ಪರಿಸ್ಥಿತಿ ಮರುಕಳಿಸದಿರಲಿ ಎಂಬ ಉದ್ದೇಶದಿಂದ ಸರ್ಕಾರ ಸಂಡೇ ಲಾಕ್ಡೌನ್ ಅದೇಶವನ್ನು ಕೈಬಿಟ್ಟಿದೆ.