ಬೆಂಗಳೂರು: ಒಮನ್ ದೇಶದ ಸುಲ್ತಾನ್ ಖಾಬೂಸ್ ಬಿನ್ ಸೈದ್ ನಿಧನದ ಹಿನ್ನೆಲೆ ನಾಳೆ ರಾಜ್ಯದಲ್ಲಿ ಶೋಕಾಚರಣೆ ಇರಲಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಮನ್ ದೇಶದ ಸುಲ್ತಾನ್ ಖಾಬೂಸ್ ಬಿನ್ ಸೈದ್ ನಿಧನ ಹಿನ್ನೆಲೆ ದೇಶಾದ್ಯಂತ ಶೋಕಾಚರಣೆ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರವೂ ರಾಜ್ಯದಲ್ಲಿ ಒಂದು ದಿನದ ಶೋಕಾಚರಣೆ ನಡೆಸಲು ನಿರ್ಧರಿಸಿದೆ.
ನಾಳೆ ಒಂದು ದಿನ ರಾಜ್ಯದಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ಸರ್ಕಾರಿ ಕಟ್ಟಡಗಳಲ್ಲಿ ನಿಯತವಾಗಿ ಹಾರಿಸಲ್ಪಡುವ ರಾಷ್ಟ್ರ ಧ್ವಜ ನಾಳೆ ಒಂದು ದಿನ ಅರ್ಧಮಟ್ಟಕ್ಕೆ ಹಾರಿಸುವಂತೆ ಆದೇಶ ಹೊರಡಿಸಿದೆ.