ETV Bharat / city

ಪಂಚಮಸಾಲಿ 2ಎ ಗೆ ಸೇರಿಸಲು ಆಗ್ರಹ: ನಾಳೆಯಿಂದ ಪತ್ರ ಚಳುವಳಿ

author img

By

Published : Mar 1, 2021, 4:58 PM IST

ಹೋರಾಟ ಕೈಬಿಡಲು ನಿರಾಕರಿಸಿರುವ ಶ್ರೀಗಳು ಸರ್ಕಾರಕ್ಕೆ ಮಾರ್ಚ್ 4ರ ಗಡುವು ವಿಧಿಸಿ ಧರಣಿ ಮುಂದುವರೆಸಿದ್ದಾರೆ. ಸಮುದಾಯದ ಪ್ರಮುಖರೊಂದಿಗೆ ಸತ್ಯಾಗ್ರಹದಲ್ಲಿ ನಿರತರಾಗಿದ್ದು, ಪತ್ರ ಚಳುವಳಿಗೆ ನಿರ್ಧರಿಸಿದ್ದಾರೆ.

panchamasali protest letter movement
ಪಂಚಮಸಾಲಿ ಸಮುದಾಯ

ಬೆಂಗಳೂರು: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಒತ್ತಾಯಿಸಿ ಕೂಡಲ ಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದ್ದು, ಪತ್ರ ಚಳುವಳಿ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.

ನಗರದ ಫ್ರೀಡಂ ಪಾರ್ಕ್​ನಲ್ಲಿ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಕೈಬಿಡಲು ನಿರಾಕರಿಸಿರುವ ಶ್ರೀಗಳು, ಸರ್ಕಾರಕ್ಕೆ ಮಾರ್ಚ್ 4ರ ಗಡುವು ವಿಧಿಸಿ ಧರಣಿ ಮುಂದುವರೆಸಿದ್ದಾರೆ. ಸಮುದಾಯದ ಪ್ರಮುಖರೊಂದಿಗೆ ಸತ್ಯಾಗ್ರಹದಲ್ಲಿ ನಿರತರಾಗಿದ್ದು, ಪತ್ರ ಚಳುವಳಿಗೆ ನಿರ್ಧರಿಸಿದ್ದಾರೆ.

ಈ ಕುರಿತು ಮಾತನಾಡಿದ ಶ್ರೀಗಳು, ನಮ್ಮ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ಆರಂಭವಾಗಿ ಇಂದಿಗೆ 39 ದಿನವಾಗಿದೆ. ಆದರೆ ಸರ್ಕಾರದಿಂದ ಇನ್ನೂ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಇಂದಿನಿಂದ ನಮ್ಮ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದೇವೆ. ಮಾರ್ಚ್ 3 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಬಗ್ಗೆ ಸ್ಪಷ್ಟ ತೀರ್ಮಾನ ಮಾಡಲಿ. ಸಚಿವರು ಸರ್ಕಾರದ ಮೇಲೆ ಒತ್ತಡ ಹಾಕಬೇಡಿ, ನಾವು ಮಾಡಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಇನ್ನು ಕೂಡ ಏನೂ ಆಗಿಲ್ಲ. ಹೀಗಾಗಿ ಇಂದು ರಾಜ್ಯಾದ್ಯಂತ ಪತ್ರ ಚಳುವಳಿ ಆರಂಭಿಸಲು ನಿರ್ಧರಿಸಿದ್ದೇವೆ ಎಂದರು.

ನಾಳೆ ಎಲ್ಲಾ ಜಿಲ್ಲೆಯಲ್ಲಿ ನಮ್ಮ ಸಮುದಾಯದ ಕಾರ್ಯಕರ್ತರು ಪತ್ರ ಚಳುವಳಿ ಮಾಡುತ್ತಾರೆ. ಡಿಸಿ ಕಚೇರಿ ಮತ್ತು ತಹಶೀಲ್ದಾರ್ ಕಚೇರಿ ಮುಂದೆ ಪತ್ರ ಚಳುವಳಿ ಮಾಡಿ ರಾಜ್ಯಪಾಲರಿಗೆ ಕಳುಹಿಸಲಿದ್ದಾರೆ. ಸುಮಾರು 25 ಲಕ್ಷ ಪತ್ರಗಳನ್ನು ರಾಜ್ಯಪಾಲರಿಗೆ ಕಳುಹಿಸಲು ತೀರ್ಮಾನ ಮಾಡಿದ್ದೇವೆ. ಈ ಮೂಲಕ ಹೋರಾಟ ತೀವ್ರಗೊಳಿಸುತ್ತೇವೆ ಎಂದು ತಿಳಿಸಿದರು.

ಸಿಎಂ ವಿರುದ್ಧ ಸಮಾಜ ಮುನಿಸಿಕೊಳ್ಳುವ ಸಾಧ್ಯತೆ ಇದೆ

ನಮ್ಮ ಹೋರಾಟವನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಸಮಾಜ ಅವರ ವಿರುದ್ಧ ಮುನಿಸಿಕೊಳ್ಳುವ ಸಾಧ್ಯತೆ ಇದೆ. ಸಮಾಜ ಮುಖ್ಯಮಂತ್ರಿಗಳನ್ನು ಇಷ್ಟು ದೊಡ್ಡದಾಗಿ ಬೆಳೆಸಿದೆ. ಅವರು ತಮ್ಮ ಪರಮಾಧಿಕಾರ ಬಳಸಿ ಸಚಿವ ಸಂಪುಟದಲ್ಲಿ ಮೀಸಲಾತಿ ಕರುಣಿಸಬೇಕು. ಇಲ್ಲದಿದ್ದರೆ ಇಷ್ಟು ದಿನದಲ್ಲಿ ಮಾಡುತ್ತೇವೆ ಎಂದು ಫ್ರೀಡಂ ಪಾರ್ಕ್​ಗೆ ಬಂದು ಭರವಸೆ ನೀಡಬೇಕು. ಇಲ್ಲದಿದ್ದರೆ ಅಧಿವೇಶನದಲ್ಲಾದರೂ ಸ್ಪಷ್ಟ ಭರವಸೆ ನೀಡಬೇಕು. ಮೀಸಲಾತಿ ನೀಡೋದಕ್ಕೆ ಆಗೋಲ್ಲ ಅನ್ನೋದಾದರೆ ಅದನ್ನಾದರೂ ತಿಳಿಸಬೇಕು ಎಂದು ಸರ್ಕಾರಕ್ಕೆ ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

ಬೆಂಗಳೂರು: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಒತ್ತಾಯಿಸಿ ಕೂಡಲ ಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದ್ದು, ಪತ್ರ ಚಳುವಳಿ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.

ನಗರದ ಫ್ರೀಡಂ ಪಾರ್ಕ್​ನಲ್ಲಿ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಕೈಬಿಡಲು ನಿರಾಕರಿಸಿರುವ ಶ್ರೀಗಳು, ಸರ್ಕಾರಕ್ಕೆ ಮಾರ್ಚ್ 4ರ ಗಡುವು ವಿಧಿಸಿ ಧರಣಿ ಮುಂದುವರೆಸಿದ್ದಾರೆ. ಸಮುದಾಯದ ಪ್ರಮುಖರೊಂದಿಗೆ ಸತ್ಯಾಗ್ರಹದಲ್ಲಿ ನಿರತರಾಗಿದ್ದು, ಪತ್ರ ಚಳುವಳಿಗೆ ನಿರ್ಧರಿಸಿದ್ದಾರೆ.

ಈ ಕುರಿತು ಮಾತನಾಡಿದ ಶ್ರೀಗಳು, ನಮ್ಮ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ಆರಂಭವಾಗಿ ಇಂದಿಗೆ 39 ದಿನವಾಗಿದೆ. ಆದರೆ ಸರ್ಕಾರದಿಂದ ಇನ್ನೂ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಇಂದಿನಿಂದ ನಮ್ಮ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದೇವೆ. ಮಾರ್ಚ್ 3 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಬಗ್ಗೆ ಸ್ಪಷ್ಟ ತೀರ್ಮಾನ ಮಾಡಲಿ. ಸಚಿವರು ಸರ್ಕಾರದ ಮೇಲೆ ಒತ್ತಡ ಹಾಕಬೇಡಿ, ನಾವು ಮಾಡಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಇನ್ನು ಕೂಡ ಏನೂ ಆಗಿಲ್ಲ. ಹೀಗಾಗಿ ಇಂದು ರಾಜ್ಯಾದ್ಯಂತ ಪತ್ರ ಚಳುವಳಿ ಆರಂಭಿಸಲು ನಿರ್ಧರಿಸಿದ್ದೇವೆ ಎಂದರು.

ನಾಳೆ ಎಲ್ಲಾ ಜಿಲ್ಲೆಯಲ್ಲಿ ನಮ್ಮ ಸಮುದಾಯದ ಕಾರ್ಯಕರ್ತರು ಪತ್ರ ಚಳುವಳಿ ಮಾಡುತ್ತಾರೆ. ಡಿಸಿ ಕಚೇರಿ ಮತ್ತು ತಹಶೀಲ್ದಾರ್ ಕಚೇರಿ ಮುಂದೆ ಪತ್ರ ಚಳುವಳಿ ಮಾಡಿ ರಾಜ್ಯಪಾಲರಿಗೆ ಕಳುಹಿಸಲಿದ್ದಾರೆ. ಸುಮಾರು 25 ಲಕ್ಷ ಪತ್ರಗಳನ್ನು ರಾಜ್ಯಪಾಲರಿಗೆ ಕಳುಹಿಸಲು ತೀರ್ಮಾನ ಮಾಡಿದ್ದೇವೆ. ಈ ಮೂಲಕ ಹೋರಾಟ ತೀವ್ರಗೊಳಿಸುತ್ತೇವೆ ಎಂದು ತಿಳಿಸಿದರು.

ಸಿಎಂ ವಿರುದ್ಧ ಸಮಾಜ ಮುನಿಸಿಕೊಳ್ಳುವ ಸಾಧ್ಯತೆ ಇದೆ

ನಮ್ಮ ಹೋರಾಟವನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ಸಮಾಜ ಅವರ ವಿರುದ್ಧ ಮುನಿಸಿಕೊಳ್ಳುವ ಸಾಧ್ಯತೆ ಇದೆ. ಸಮಾಜ ಮುಖ್ಯಮಂತ್ರಿಗಳನ್ನು ಇಷ್ಟು ದೊಡ್ಡದಾಗಿ ಬೆಳೆಸಿದೆ. ಅವರು ತಮ್ಮ ಪರಮಾಧಿಕಾರ ಬಳಸಿ ಸಚಿವ ಸಂಪುಟದಲ್ಲಿ ಮೀಸಲಾತಿ ಕರುಣಿಸಬೇಕು. ಇಲ್ಲದಿದ್ದರೆ ಇಷ್ಟು ದಿನದಲ್ಲಿ ಮಾಡುತ್ತೇವೆ ಎಂದು ಫ್ರೀಡಂ ಪಾರ್ಕ್​ಗೆ ಬಂದು ಭರವಸೆ ನೀಡಬೇಕು. ಇಲ್ಲದಿದ್ದರೆ ಅಧಿವೇಶನದಲ್ಲಾದರೂ ಸ್ಪಷ್ಟ ಭರವಸೆ ನೀಡಬೇಕು. ಮೀಸಲಾತಿ ನೀಡೋದಕ್ಕೆ ಆಗೋಲ್ಲ ಅನ್ನೋದಾದರೆ ಅದನ್ನಾದರೂ ತಿಳಿಸಬೇಕು ಎಂದು ಸರ್ಕಾರಕ್ಕೆ ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.