ETV Bharat / city

ಮಕ್ಕಳಾಗಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಶರಣಾದ ಪೊಲೀಸ್ ದಂಪತಿ.. - Police couple committing suicide at benglure

ಕರ್ತವ್ಯ ನಿರ್ವಹಿಸಿ ಮನೆಗೆ ಹೋದ ಸುರೇಶ್ ಹಾಗೂ ಶೀಲಾ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಕ್ಕಳಾಗದ ಹಿನ್ನೆಲೆ ಮನನೊಂದು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ..

ಆತ್ಮಹತ್ಯೆಗೆ ಶರಣಾದ ಪೊಲೀಸ್ ದಂಪತಿ
ಆತ್ಮಹತ್ಯೆಗೆ ಶರಣಾದ ಪೊಲೀಸ್ ದಂಪತಿ
author img

By

Published : Dec 18, 2020, 12:06 PM IST

ಬೆಂಗಳೂರು : ನಿನ್ನೆ ಡಿವೈಎಸ್​ಪಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲೇ ಇಂದು ಪೊಲೀಸ್ ದಂಪತಿಯೊಂದು ಮನನೊಂದು ಸಾವಿಗೆ ಶರಣಾದ ಘಟನೆ‌ ನಡೆದಿದೆ.

ಕಾನ್ಸ್​ಟೇಬಲ್​ಗಳಾದ ಹೆಚ್ ಸಿ ಸುರೇಶ್ ಹಾಗೂ ಶೀಲಾ ಎಂಬ ದಂಪತಿ ಮೃತಪಟ್ಟವರು. ಕಳೆದ ಹತ್ತು ವರ್ಷದ ಹಿಂದೆ ಇವರು ಮದುವೆಯಾಗಿದ್ದರೂ ಮಕ್ಕಳಾಗಿರಲಿಲ್ಲವಂತೆ. ಕಂಟ್ರೋಲ್ ರೂಂನಲ್ಲಿ ಶೀಲಾ ಕರ್ತವ್ಯ ನಿರ್ವಹಿಸುತ್ತಿದ್ರೇ, ಸಂಪಿಗೆಹಳ್ಳಿ ಎಸಿಪಿ ಉಪವಿಭಾಗದ ಕಚೇರಿಯಲ್ಲಿ ರೈಟರ್ ಆಗಿ ಸುರೇಶ್ ಸೇವೆ ಸಲ್ಲಿಸುತ್ತಿದ್ದರು.

ಕರ್ತವ್ಯ ನಿರ್ವಹಿಸಿ ಮನೆಗೆ ಹೋದ ಸುರೇಶ್ ಹಾಗೂ ಶೀಲಾ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಕ್ಕಳಾಗದ ಹಿನ್ನೆಲೆ ಮನನೊಂದು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕೊತ್ತನೂರು ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ನಡೆಯಲಿದೆ ಡಿವೈಎಸ್​ಪಿ ಲಕ್ಷ್ಮಿ ಅಂತ್ಯಸಂಸ್ಕಾರ

ಬೆಂಗಳೂರು : ನಿನ್ನೆ ಡಿವೈಎಸ್​ಪಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲೇ ಇಂದು ಪೊಲೀಸ್ ದಂಪತಿಯೊಂದು ಮನನೊಂದು ಸಾವಿಗೆ ಶರಣಾದ ಘಟನೆ‌ ನಡೆದಿದೆ.

ಕಾನ್ಸ್​ಟೇಬಲ್​ಗಳಾದ ಹೆಚ್ ಸಿ ಸುರೇಶ್ ಹಾಗೂ ಶೀಲಾ ಎಂಬ ದಂಪತಿ ಮೃತಪಟ್ಟವರು. ಕಳೆದ ಹತ್ತು ವರ್ಷದ ಹಿಂದೆ ಇವರು ಮದುವೆಯಾಗಿದ್ದರೂ ಮಕ್ಕಳಾಗಿರಲಿಲ್ಲವಂತೆ. ಕಂಟ್ರೋಲ್ ರೂಂನಲ್ಲಿ ಶೀಲಾ ಕರ್ತವ್ಯ ನಿರ್ವಹಿಸುತ್ತಿದ್ರೇ, ಸಂಪಿಗೆಹಳ್ಳಿ ಎಸಿಪಿ ಉಪವಿಭಾಗದ ಕಚೇರಿಯಲ್ಲಿ ರೈಟರ್ ಆಗಿ ಸುರೇಶ್ ಸೇವೆ ಸಲ್ಲಿಸುತ್ತಿದ್ದರು.

ಕರ್ತವ್ಯ ನಿರ್ವಹಿಸಿ ಮನೆಗೆ ಹೋದ ಸುರೇಶ್ ಹಾಗೂ ಶೀಲಾ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಕ್ಕಳಾಗದ ಹಿನ್ನೆಲೆ ಮನನೊಂದು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕೊತ್ತನೂರು ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ನಡೆಯಲಿದೆ ಡಿವೈಎಸ್​ಪಿ ಲಕ್ಷ್ಮಿ ಅಂತ್ಯಸಂಸ್ಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.