ETV Bharat / city

ಬೆಳ್ಳಂಬೆಳ್ಳಗೆ ಸದ್ದು ಮಾಡಿದ ಖಾಕಿ ಪಿಸ್ತೂಲ್​: ಬೆಂಗಳೂರಲ್ಲಿ ರೌಡಿಶೀಟರ್ ಕಾಲಿಗೆ ಬುಲೆಟ್ ನುಗ್ಗಿಸಿದ ಪೊಲೀಸ್​

author img

By

Published : Apr 13, 2022, 9:47 AM IST

ಬೆಂಗಳೂರು ನಗರದಲ್ಲಿ ಬೆಳ್ಳಂಬೆಳ್ಳಗೆ ಪೊಲೀಸರ ಪಿಸ್ತೂಲ್​ ಸದ್ದು ಮಾಡಿದೆ. ಅನೇಕ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಕಾಲಿಗೆ ಬುಲೆಟ್ ಹೊಡೆದು ಬಂಧಿಸಲಾಗಿದೆ.

Police officer fired a bullet to the rowdy sheeter leg, Bengaluru crime news, rowdy sheeter admit in Bengaluru hospital, ರೌಡಿಶೀಟರ್​ ಕಾಲಿಗೆ ಗುಂಡು ಹಾರಿಸಿದ ಪೊಲೀಸ್​ ಅಧಿಕಾರಿ, ಬೆಂಗಳೂರು ಅಪರಾಧ ಸುದ್ದಿ, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾದ ರೌಡಿಶೀಟರ್​,
ರೌಡಿಶೀಟರ್ ಕಾಲಿಗೆ ಬುಲೆಟ್ ಏಟು

ಬೆಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್​ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿಸಲು ಹೋದ ಪೊಲೀಸ್​ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದ ರೌಡಿ ಕಾಲಿಗೆ ಸಂಜಯನಗರ ಪೊಲೀಸ್​ ಅಧಿಕಾರಿ ಗುಂಡು ಹಾರಿಸಿ ಬಂಧಿಸಿದ್ದಾರೆ.

ರೌಡಿಶೀಟರ್ ಕಾಲಿಗೆ ಬುಲೆಟ್ ನುಗ್ಗಿಸಿದ ಪೊಲೀಸ್​ ಅಧಿಕಾರಿ

ಸಂಜಯನಗರ ಪೊಲೀಸ್ ಠಾಣೆಯ ರೌಡಿ ಶರಣಪ್ಪ ಕಾಲಿಗೆ ಗುಂಡೇಟು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ‌‌. ರೌಡಿ ಶೀಟರ್​ ಶರಣಪ್ಪ ವಿರುದ್ಧ, ಕೊಲೆ, ಕೊಲೆಯತ್ನ ಹಾಗೂ ಜೀವ ಬೆದರಿಕೆ ಸೇರಿದಂತೆ 10 ಪ್ರಕರಣ ದಾಖಲಾಗಿವೆ. ಈ ಘಟನೆಯಲ್ಲಿ ಕಾನ್ಸ್​ಟೇಬಲ್​ ಮಲ್ಲಪ್ಪ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ‌.

Police officer fired a bullet to the rowdy sheeter leg, Bengaluru crime news, rowdy sheeter admit in Bengaluru hospital, ರೌಡಿಶೀಟರ್​ ಕಾಲಿಗೆ ಗುಂಡು ಹಾರಿಸಿದ ಪೊಲೀಸ್​ ಅಧಿಕಾರಿ, ಬೆಂಗಳೂರು ಅಪರಾಧ ಸುದ್ದಿ, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾದ ರೌಡಿಶೀಟರ್​,
ಗಾಯಗೊಂಡಿರುವ ಕಾನ್ಸ್​​ಟೇಬಲ್​ ಮಲ್ಲಪ್ಪ

ಓದಿ: ಶ್ರೀನಗರದಲ್ಲಿ ಆಕಸ್ಮಿಕವಾಗಿ ಗುಂಡು ತಗುಲಿ ವಿಜಯಪುರದ ಯೋಧ ಮೃತ

ನಿರಂತರ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಕೆಲ ದಿನಗಳ ಹಿಂದೆ ಶರಣಪ್ಪ ಆ್ಯಂಡ್ ಗ್ಯಾಂಗ್ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಇನ್ಸ್​ಪೆಕ್ಟರ್​ ಬಾಲರಾಜ್, ಆರೋಪಿಗಾಗಿ ಬಲೆ ಬೀಸಿದ್ದರು.

Police officer fired a bullet to the rowdy sheeter leg, Bengaluru crime news, rowdy sheeter admit in Bengaluru hospital, ರೌಡಿಶೀಟರ್​ ಕಾಲಿಗೆ ಗುಂಡು ಹಾರಿಸಿದ ಪೊಲೀಸ್​ ಅಧಿಕಾರಿ, ಬೆಂಗಳೂರು ಅಪರಾಧ ಸುದ್ದಿ, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾದ ರೌಡಿಶೀಟರ್​,
ರೌಡಿ ಶರಣಪ್ಪ

ಇಂದು ಬೆಳಗ್ಗೆ ಭೂಪಸಂದ್ರ ಬಳಿ ಅಡಗಿಕೊಂಡಿರುವ ಮಾಹಿತಿ ಮೇರೆಗೆ ಬಾಲರಾಜ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಆರೋಪಿಯನ್ನು ಬಂಧಿಸಲು‌ ಮುಂದಾದಾಗ ಹರಿತವಾದ ಆಯುಧದಿಂದ ಕಾನ್ಸ್​ಟೇಬಲ್ ಮಲ್ಲಪ್ಪನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಶರಣಾಗುವಂತೆ ಸೂಚಿಸಿದರೂ ಕ್ಯಾರೇ ಅನ್ನದ ಆರೋಪಿ ಮೇಲೆ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್ ಬಾಲರಾಜ್ ತಮ್ಮ ಸರ್ವೀಸ್ ಪಿಸ್ತೂಲ್​ನಿಂದ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದರು.

ಬೆಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್​ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿಸಲು ಹೋದ ಪೊಲೀಸ್​ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದ ರೌಡಿ ಕಾಲಿಗೆ ಸಂಜಯನಗರ ಪೊಲೀಸ್​ ಅಧಿಕಾರಿ ಗುಂಡು ಹಾರಿಸಿ ಬಂಧಿಸಿದ್ದಾರೆ.

ರೌಡಿಶೀಟರ್ ಕಾಲಿಗೆ ಬುಲೆಟ್ ನುಗ್ಗಿಸಿದ ಪೊಲೀಸ್​ ಅಧಿಕಾರಿ

ಸಂಜಯನಗರ ಪೊಲೀಸ್ ಠಾಣೆಯ ರೌಡಿ ಶರಣಪ್ಪ ಕಾಲಿಗೆ ಗುಂಡೇಟು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ‌‌. ರೌಡಿ ಶೀಟರ್​ ಶರಣಪ್ಪ ವಿರುದ್ಧ, ಕೊಲೆ, ಕೊಲೆಯತ್ನ ಹಾಗೂ ಜೀವ ಬೆದರಿಕೆ ಸೇರಿದಂತೆ 10 ಪ್ರಕರಣ ದಾಖಲಾಗಿವೆ. ಈ ಘಟನೆಯಲ್ಲಿ ಕಾನ್ಸ್​ಟೇಬಲ್​ ಮಲ್ಲಪ್ಪ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ‌.

Police officer fired a bullet to the rowdy sheeter leg, Bengaluru crime news, rowdy sheeter admit in Bengaluru hospital, ರೌಡಿಶೀಟರ್​ ಕಾಲಿಗೆ ಗುಂಡು ಹಾರಿಸಿದ ಪೊಲೀಸ್​ ಅಧಿಕಾರಿ, ಬೆಂಗಳೂರು ಅಪರಾಧ ಸುದ್ದಿ, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾದ ರೌಡಿಶೀಟರ್​,
ಗಾಯಗೊಂಡಿರುವ ಕಾನ್ಸ್​​ಟೇಬಲ್​ ಮಲ್ಲಪ್ಪ

ಓದಿ: ಶ್ರೀನಗರದಲ್ಲಿ ಆಕಸ್ಮಿಕವಾಗಿ ಗುಂಡು ತಗುಲಿ ವಿಜಯಪುರದ ಯೋಧ ಮೃತ

ನಿರಂತರ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಕೆಲ ದಿನಗಳ ಹಿಂದೆ ಶರಣಪ್ಪ ಆ್ಯಂಡ್ ಗ್ಯಾಂಗ್ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಇನ್ಸ್​ಪೆಕ್ಟರ್​ ಬಾಲರಾಜ್, ಆರೋಪಿಗಾಗಿ ಬಲೆ ಬೀಸಿದ್ದರು.

Police officer fired a bullet to the rowdy sheeter leg, Bengaluru crime news, rowdy sheeter admit in Bengaluru hospital, ರೌಡಿಶೀಟರ್​ ಕಾಲಿಗೆ ಗುಂಡು ಹಾರಿಸಿದ ಪೊಲೀಸ್​ ಅಧಿಕಾರಿ, ಬೆಂಗಳೂರು ಅಪರಾಧ ಸುದ್ದಿ, ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾದ ರೌಡಿಶೀಟರ್​,
ರೌಡಿ ಶರಣಪ್ಪ

ಇಂದು ಬೆಳಗ್ಗೆ ಭೂಪಸಂದ್ರ ಬಳಿ ಅಡಗಿಕೊಂಡಿರುವ ಮಾಹಿತಿ ಮೇರೆಗೆ ಬಾಲರಾಜ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಆರೋಪಿಯನ್ನು ಬಂಧಿಸಲು‌ ಮುಂದಾದಾಗ ಹರಿತವಾದ ಆಯುಧದಿಂದ ಕಾನ್ಸ್​ಟೇಬಲ್ ಮಲ್ಲಪ್ಪನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಶರಣಾಗುವಂತೆ ಸೂಚಿಸಿದರೂ ಕ್ಯಾರೇ ಅನ್ನದ ಆರೋಪಿ ಮೇಲೆ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್ ಬಾಲರಾಜ್ ತಮ್ಮ ಸರ್ವೀಸ್ ಪಿಸ್ತೂಲ್​ನಿಂದ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.