ETV Bharat / city

ಲುಂಗಿ, ಟೋಪಿ ತೊಟ್ಟು ಕಲ್ಲು ತೂರಾಟ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ: ಪ್ರಕಾಶ್ ರಾಥೋಡ್ - ಮಂಗಳೂರು ಸಿಎಬಿ ಪ್ರತಿಭಟನೆ ಕುರಿತು ಪ್ರಕಾಶ್ ರಾಥೋಡ್ ಪ್ರತಿಕ್ರಿಯೆ

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹಾಳುಗೆಡವಲು ಕೆಲ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೇಳಿದಂತೆ ಕೇಳುತ್ತಿದ್ದಾರೆ. ಹಾಗಾಗಿ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಕಿಡಿಕಾರಿದರು.

prakash-rathod-statement-on-cab-golibar-in-mangalore
ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್
author img

By

Published : Dec 24, 2019, 8:06 AM IST

ಬೆಂಗಳೂರು: ಲುಂಗಿ ತೊಟ್ಟುಕೊಂಡು ತಲೆಗೆ ಟೋಪಿ ಹಾಕಿ ರಾಜ್ಯದ ವಿವಿಧೆಡೆ ಕಲ್ಲು ತೂರಾಟ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಹಾಳುಗೆಡವಲು ಕೆಲ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೇಳಿದಂತೆ ಕೇಳುತ್ತಿದ್ದಾರೆ, ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.

ಇಂಥವರನ್ನು ಬಂಧಿಸುವ ಬದಲು ಪೊಲೀಸರೇ ಕುಮ್ಮಕ್ಕು ಕೊಡುವ ಕೆಲಸ ಮಾಡುತ್ತಿದ್ದಾರೆ. ಮಂಗಳೂರಿನ ಆಸ್ಪತ್ರೆಗೆ ನುಗ್ಗಿ ಅಮಾಯಕರನ್ನು ಥಳಿಸಿದ್ದನ್ನು ನಾವು ಕಂಡಿದ್ದೇವೆ. ರಾಜ್ಯದಲ್ಲಿ ಇಂತಹ ಕಾರ್ಯ ನಿಲ್ಲಬೇಕು ಎಂದು ಆಗ್ರಹಿಸಿದರು.

ಮಂಗಳೂರು ಗಲಭೆ ಕುರಿತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಹೇಳಿಕೆ

ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಸಂಸದ ತೇಜಸ್ವಿ ಸೂರ್ಯ, ಸಚಿವ ಸಿ.ಟಿ. ರವಿ ಮತ್ತಿತರ ಬಿಜೆಪಿ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಕಾರ್ಯವಾಗುತ್ತಿಲ್ಲ. ರಾಜ್ಯದಲ್ಲಿ ಸಾಮರಸ್ಯದ ಕೊರತೆ ಎದುರಾಗುತ್ತಿದೆ. ಸಿಎಪಿ ಹಾಗೂ ಎನ್​ಆರ್​ಸಿ ವಿರುದ್ಧ ರಾಜ್ಯದ ಜನ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿ ಶಾಂತಿ ಕದಡುವ ಕಾರ್ಯ ಮಾಡಬಾರದು ಎಂದರು.

ಮಾಜಿ ಸಂಸದ ಉಗ್ರಪ್ಪ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು: ಲುಂಗಿ ತೊಟ್ಟುಕೊಂಡು ತಲೆಗೆ ಟೋಪಿ ಹಾಕಿ ರಾಜ್ಯದ ವಿವಿಧೆಡೆ ಕಲ್ಲು ತೂರಾಟ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಹಾಳುಗೆಡವಲು ಕೆಲ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೇಳಿದಂತೆ ಕೇಳುತ್ತಿದ್ದಾರೆ, ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕಿಡಿಕಾರಿದರು.

ಇಂಥವರನ್ನು ಬಂಧಿಸುವ ಬದಲು ಪೊಲೀಸರೇ ಕುಮ್ಮಕ್ಕು ಕೊಡುವ ಕೆಲಸ ಮಾಡುತ್ತಿದ್ದಾರೆ. ಮಂಗಳೂರಿನ ಆಸ್ಪತ್ರೆಗೆ ನುಗ್ಗಿ ಅಮಾಯಕರನ್ನು ಥಳಿಸಿದ್ದನ್ನು ನಾವು ಕಂಡಿದ್ದೇವೆ. ರಾಜ್ಯದಲ್ಲಿ ಇಂತಹ ಕಾರ್ಯ ನಿಲ್ಲಬೇಕು ಎಂದು ಆಗ್ರಹಿಸಿದರು.

ಮಂಗಳೂರು ಗಲಭೆ ಕುರಿತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಹೇಳಿಕೆ

ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಸಂಸದ ತೇಜಸ್ವಿ ಸೂರ್ಯ, ಸಚಿವ ಸಿ.ಟಿ. ರವಿ ಮತ್ತಿತರ ಬಿಜೆಪಿ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಕಾರ್ಯವಾಗುತ್ತಿಲ್ಲ. ರಾಜ್ಯದಲ್ಲಿ ಸಾಮರಸ್ಯದ ಕೊರತೆ ಎದುರಾಗುತ್ತಿದೆ. ಸಿಎಪಿ ಹಾಗೂ ಎನ್​ಆರ್​ಸಿ ವಿರುದ್ಧ ರಾಜ್ಯದ ಜನ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿ ಶಾಂತಿ ಕದಡುವ ಕಾರ್ಯ ಮಾಡಬಾರದು ಎಂದರು.

ಮಾಜಿ ಸಂಸದ ಉಗ್ರಪ್ಪ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Intro:newsBody:ಲುಂಗಿ, ಟೋಪಿ ತೊಟ್ಟು ಜನರನ್ನು ವಂಚಿಸುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಿ: ಪ್ರಕಾಶ್ ರಾಥೋಡ್

ಬೆಂಗಳೂರು: ಲುಂಗಿ ತೊಟ್ಟುಕೊಂಡು ತಲೆಗೆ ಟೋಪಿ ಹಾಕಿಕೊಂಡು ರಾಜ್ಯದ ವಿವಿಧೆಡೆ ಕಲ್ಲು ತೂರಾಟ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸರಕಾರ ಹಾಗೂ ಪೊಲೀಸ್ ಇಲಾಖೆಗೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಕಾನೂನಿನ ವ್ಯವಸ್ಥೆಯನ್ನು ಹಾಳುಗೆಡವಲು ಕೆಲ ಬಿಜೆಪಿ ಕಾರ್ಯಕರ್ತರು ಪ್ರಚೋದನಕಾರಿ ಹೇಳಿಕೆ ಹಾಗೂ ಕೃತ್ಯದಲ್ಲಿ ತೊಡಗುವ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕದಡುವ ಕಾರ್ಯ ಮಾಡುತ್ತಿದ್ದಾರೆ. ರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ರೀತಿ ಪ್ರಚೋದನಾಕಾರಿ ಹೇಳಿಕೆ ಹಾಗೂ ಕೃತ್ಯವನ್ನು ರಾಜ್ಯದ ಕೆಲ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮಾಡುತ್ತಿದ್ದು ಅವರನ್ನು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಇವರನ್ನು ಬಂಧಿಸುವ ಬದಲು ಪೊಲೀಸರು ಕುಮ್ಮಕ್ಕು ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಆಸ್ಪತ್ರೆಯ ಒಳಗೆ ನುಗ್ಗಿ ಅಮಾಯಕರಿಗೆ ಥಳಿಸಿದ್ದನ್ನು ನಾವು ಕಂಡಿದ್ದೇವೆ. ರಾಜ್ಯದಲ್ಲಿ ಇಂತಹ ಕಾರ್ಯ ನಿಲ್ಲಬೇಕು ಮತ್ತು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಮಂತ್ರಿಮಂಡಲದ ಸಹೋದ್ಯೋಗಿಗಳಿಂದ ಕೇಳಿಬರುತ್ತಿರುವ ಪ್ರಚೋದನಾಕಾರಿ ಹೇಳಿಕೆ ಹಾಗೂ ಕಾನೂನು ಉಲ್ಲಂಘಿಸುವ ಕಾರ್ಯಕ್ಕೆ ತಡೆಹಾಕಬೇಕು. ಸಚಿವ ಸಂಪುಟದಿಂದ ಇಂಥವರನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಸಂಸದ ತೇಜಸ್ವಿ ಸೂರ್ಯ ಸಚಿವ ಸಿಟಿ ರವಿ ಮತ್ತಿತರ ಬಿಜೆಪಿ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಕಾರ್ಯ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡುವ ಜೊತೆಗೆ ರಾಜ್ಯದಲ್ಲಿ ಸಾಮರಸ್ಯದ ಕೊರತೆ ಎದುರಾಗುತ್ತಿದೆ. ಸಿಎಪಿ ಹಾಗೂ ಎನ್ಆರ್ಸಿ ವಿರುದ್ಧ ರಾಜ್ಯದ ಜನ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದು, ಈ ಸಂದರ್ಭ ಬಿಜೆಪಿ ನಾಯಕರು ಪ್ರಚೋದನಾಕಾರಿ ಹೇಳಿಕೆ ನೀಡಿ ಶಾಂತಿ ಕದಡುವ ಕಾರ್ಯ ಮಾಡಬಾರದು ಎಂದು ಸಲಹೆ ನೀಡಿದರು.
ಮಾಜಿ ಸಂಸದ ಉಗ್ರಪ್ಪ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಇದೇ ಸಂದರ್ಭ ಉಪಸ್ಥಿತರಿದ್ದರು.Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.