ETV Bharat / city

ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸೆಪ್ಟೆಂಬರ್ 15ರವರೆಗೆ ಗಡುವು ಕೊಟ್ಟ ಖಾಸಗಿ ಶಾಲಾ‌ ಒಕ್ಕೂಟ

author img

By

Published : Aug 24, 2021, 1:27 PM IST

ಸೆಪ್ಟೆಂಬರ್ 15ರವರೆಗೆ ನಾವು ಸರ್ಕಾರಕ್ಕೆ ಗಡುವು ಕೊಟ್ಟಿದ್ದೇವೆ. ಇಲ್ಲವಾದಲ್ಲಿ ‌ನಾವು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟದ ಎಚ್ಚರಿಕೆ ನೀಡುತ್ತೇವೆ ಎಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

private-school-union-meeting-in-bengaluru
ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸೆಪ್ಟೆಂಬರ್ 15ರವರೆಗೆ ಗಡವು ಕೊಟ್ಟ ಖಾಸಗಿ ಶಾಲಾ‌ ಒಕ್ಕೂಟ

ಬೆಂಗಳೂರು: ರಾಜ್ಯದಲ್ಲಿ 1995ರ ನಂತರ ಸ್ಥಾಪನೆಯಾದ ಖಾಸಗಿ ಅನುದಾನಿತ ರಹಿತ ಕನ್ನಡ ‌ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿ ಖಾಸಗಿ ಶಾಲಾ ಒಕ್ಕೂಟಗಳಿಂದ ಇಂದು ಮಹತ್ವದ ಸಭೆಯು ಶಾಸಕರ ಭವನದಲ್ಲಿ ಜರುಗಿತು.

ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಒಕ್ಕೂಟದ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಕನ್ನಡ ‌ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ನೂತನ‌ ಪಿಂಚಣಿ ಪದ್ಧತಿಯನ್ನ ರದ್ದುಗೊಳಿಸಿ, ಹಳೆಯ ಪಿಂಚಣಿ ಪದ್ಧತಿಯನ್ನ ಜಾರಿ ಮಾಡಬೇಕು. ಈಗಾಗಲೇ ನಿವೃತ್ತರಾದ ಹಾಗೂ ಮರಣ ಹೊಂದಿದ 2006ರ ನಂತರದ ನೌಕರರಿಗೆ ತಕ್ಷಣ ಪಿಂಚಣಿ ಜಾರಿಗೊಳಿಸಬೇಕು. ಜ್ಯೋತಿ ಸಂಜೀವಿನಿ ಯೋಜನೆ ಅನುದಾ‌ನಿತ/ ಅನುದಾನ ರಹಿತ ಶಾಲಾ ಕಾಲೇಜು ಸಿಬ್ಬಂದಿಗೆ ವಿಸ್ತರಿಸುವಂತೆ ನಾನಾ ಬೇಡಿಕೆಗಳ ಕುರಿತು ಸಭೆ ನಡೆಸಲಾಯಿತು.

ಸಭೆ ಬಳಿಕ ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಈಗಾಗಲೇ ನಮ್ಮ ಬೇಡಿಕೆಗಳ ಬಗ್ಗೆ ಸಾಕಷ್ಟು ‌ಮನವಿ ಕೊಟ್ಟಿದ್ದೇವೆ. ದಶಕಗಳಿಂದ ಹೋರಾಟ ಮಾಡಿಕೊಂಡು ಬಂದ್ರು ಪರಿಹಾರ ಸಿಕ್ಕಿಲ್ಲ. ಹೀಗಾಗಿ ಒಟ್ಟಾಗಿ ಕನ್ನಡ ಹಾಗೂ ಇಂಗ್ಲಿಷ್​​ ಮಾಧ್ಯಮ ಶಾಲೆಗಳು ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸೆಪ್ಟೆಂಬರ್ 15ರವರೆಗೆ ನಾವು ಸರ್ಕಾರಕ್ಕೆ ಗಡುವು ಕೊಟ್ಟಿದ್ದೇವೆ . ಇಲ್ಲವಾದಲ್ಲಿ ‌ನಾವು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟದ ಎಚ್ಚರಿಕೆ ನೀಡುತ್ತೇವೆ ಅಂದಿದ್ದಾರೆ.‌

ಹಲವು ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರಲಾಗಿದರೂ, ಇಲ್ಲಿಯವರೆಗೂ ಸರ್ಕಾರ‌ ಖಾಸಗಿ ಶಾಲೆಗಳ ಸಮಸ್ಯೆಗಳ ಬೇಡಿಕೆ ಈಡೇರಿಸಿಲ್ಲ.‌ ಆದ್ರೆ ಈಗ ಹೊಸದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ. ಕಳೆದ ಸಲ ಬಸವರಾಜ್ ಹೊರಟ್ಟಿ ಧಾರವಾಡದಲ್ಲಿ 13 ದಿನಗಳ ಕಾಲ ಉಪವಾಸ ನಡೆಸಿದ್ದರು. ಹೀಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಹೋದ್ರೆ ಈ ಬಾರಿ ಉಗ್ರ ಹೋರಾಟ ಮಾಡುವುದಾಗಿ ಖಾಸಗಿ ಶಾಲೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ 363 ಸಂಸದರು, ಶಾಸಕರ ವಿರುದ್ಧ ಕ್ರಿಮಿನಲ್‌ ಕೇಸ್‌; ಬಿಜೆಪಿಗೆ ಅಗ್ರ ಸ್ಥಾನ-ADR Report

ಬೆಂಗಳೂರು: ರಾಜ್ಯದಲ್ಲಿ 1995ರ ನಂತರ ಸ್ಥಾಪನೆಯಾದ ಖಾಸಗಿ ಅನುದಾನಿತ ರಹಿತ ಕನ್ನಡ ‌ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿ ಖಾಸಗಿ ಶಾಲಾ ಒಕ್ಕೂಟಗಳಿಂದ ಇಂದು ಮಹತ್ವದ ಸಭೆಯು ಶಾಸಕರ ಭವನದಲ್ಲಿ ಜರುಗಿತು.

ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಒಕ್ಕೂಟದ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಕನ್ನಡ ‌ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ನೂತನ‌ ಪಿಂಚಣಿ ಪದ್ಧತಿಯನ್ನ ರದ್ದುಗೊಳಿಸಿ, ಹಳೆಯ ಪಿಂಚಣಿ ಪದ್ಧತಿಯನ್ನ ಜಾರಿ ಮಾಡಬೇಕು. ಈಗಾಗಲೇ ನಿವೃತ್ತರಾದ ಹಾಗೂ ಮರಣ ಹೊಂದಿದ 2006ರ ನಂತರದ ನೌಕರರಿಗೆ ತಕ್ಷಣ ಪಿಂಚಣಿ ಜಾರಿಗೊಳಿಸಬೇಕು. ಜ್ಯೋತಿ ಸಂಜೀವಿನಿ ಯೋಜನೆ ಅನುದಾ‌ನಿತ/ ಅನುದಾನ ರಹಿತ ಶಾಲಾ ಕಾಲೇಜು ಸಿಬ್ಬಂದಿಗೆ ವಿಸ್ತರಿಸುವಂತೆ ನಾನಾ ಬೇಡಿಕೆಗಳ ಕುರಿತು ಸಭೆ ನಡೆಸಲಾಯಿತು.

ಸಭೆ ಬಳಿಕ ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಈಗಾಗಲೇ ನಮ್ಮ ಬೇಡಿಕೆಗಳ ಬಗ್ಗೆ ಸಾಕಷ್ಟು ‌ಮನವಿ ಕೊಟ್ಟಿದ್ದೇವೆ. ದಶಕಗಳಿಂದ ಹೋರಾಟ ಮಾಡಿಕೊಂಡು ಬಂದ್ರು ಪರಿಹಾರ ಸಿಕ್ಕಿಲ್ಲ. ಹೀಗಾಗಿ ಒಟ್ಟಾಗಿ ಕನ್ನಡ ಹಾಗೂ ಇಂಗ್ಲಿಷ್​​ ಮಾಧ್ಯಮ ಶಾಲೆಗಳು ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸೆಪ್ಟೆಂಬರ್ 15ರವರೆಗೆ ನಾವು ಸರ್ಕಾರಕ್ಕೆ ಗಡುವು ಕೊಟ್ಟಿದ್ದೇವೆ . ಇಲ್ಲವಾದಲ್ಲಿ ‌ನಾವು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟದ ಎಚ್ಚರಿಕೆ ನೀಡುತ್ತೇವೆ ಅಂದಿದ್ದಾರೆ.‌

ಹಲವು ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರಲಾಗಿದರೂ, ಇಲ್ಲಿಯವರೆಗೂ ಸರ್ಕಾರ‌ ಖಾಸಗಿ ಶಾಲೆಗಳ ಸಮಸ್ಯೆಗಳ ಬೇಡಿಕೆ ಈಡೇರಿಸಿಲ್ಲ.‌ ಆದ್ರೆ ಈಗ ಹೊಸದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ. ಕಳೆದ ಸಲ ಬಸವರಾಜ್ ಹೊರಟ್ಟಿ ಧಾರವಾಡದಲ್ಲಿ 13 ದಿನಗಳ ಕಾಲ ಉಪವಾಸ ನಡೆಸಿದ್ದರು. ಹೀಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಹೋದ್ರೆ ಈ ಬಾರಿ ಉಗ್ರ ಹೋರಾಟ ಮಾಡುವುದಾಗಿ ಖಾಸಗಿ ಶಾಲೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ 363 ಸಂಸದರು, ಶಾಸಕರ ವಿರುದ್ಧ ಕ್ರಿಮಿನಲ್‌ ಕೇಸ್‌; ಬಿಜೆಪಿಗೆ ಅಗ್ರ ಸ್ಥಾನ-ADR Report

ETV Bharat Logo

Copyright © 2024 Ushodaya Enterprises Pvt. Ltd., All Rights Reserved.