ETV Bharat / city

ಪಿಡಬ್ಲ್ಯೂಡಿ ಕೇಸ್​ಗೆ‌ ಮರುಜೀವ: ಪಿಎಸ್ಐ ಅಕ್ರಮದ ಆರೋಪಿ ಬೆಂಗಳೂರಿಗೆ ಶಿಫ್ಟ್‌

author img

By

Published : May 11, 2022, 11:26 AM IST

ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಅಕ್ರಮ ಪ್ರಕರಣಕ್ಕೆ ಮರುಜೀವ ಬಂದಿದ್ದು, ಪಿಎಸ್ಐ ಅಕ್ರಮದ ಆರೋಪಿಯನ್ನು ಬಾಡಿ ವಾರೆಂಟ್ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಇದೇ ವೇಳೆ ಪ್ರಕರಣ ಮಂಡ್ಯ ಜಿಲ್ಲೆಗೂ ವ್ಯಾಪಿಸಿದೆ.

PSI selection scam case, PSI selection scam case in Mandya, PSI scam main accused in brought to Bangalore, PWD case, ಪಿಎಸ್‌ಐ ಹಗರಣ ಪ್ರಕರಣ, ಮಂಡ್ಯದಲ್ಲಿ ಪಿಎಸ್‌ಐ ಹಗರಣ, ಬೆಂಗಳೂರಿಗೆ ಕರೆತಂದ ಪಿಎಸ್‌ಐ ಹಗರಣದ ಪ್ರಮುಖ ಆರೋಪಿ, ಪಿಡಬ್ಲ್ಯುಡಿ ಪ್ರಕರಣ,
ಪಿಎಸ್ಐ ಪ್ರಕರಣ ಆರೋಪಿಯನ್ನ ಬೆಂಗಳೂರಿಗೆ ಕರೆತಂದ ಪೊಲೀಸರು

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಆರೋಪಿಗಳ ವಿಚಾರಣೆಯ ವೇಳೆ ಈ ಹಿಂದೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪಿಎಸ್ಐ ಅಕ್ರಮದಲ್ಲಿ ಸಿಐಡಿ ಪೊಲೀಸರಿಂದ ಬಂಧನಕ್ಕೊಳಗಾದ ಪ್ರಮುಖ ಆರೋಪಿಯನ್ನು ಬಾಡಿ ವಾರೆಂಟ್ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು‌ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ಲೋಕೋಪಯೋಗಿ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ಹಾಗೂ ಅಸ್ಟಿಸೆಂಟ್ ಇಂಜಿನಿಯರ್ ಹುದ್ದೆಗಳೂ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದನ್ನು ವಿಚಾರಣೆ ವೇಳೆ ಸಿಐಡಿ ಪೊಲೀಸರು ಕಂಡುಕೊಂಡಿದ್ದರು.‌ ಅಕ್ರಮ ಬಗ್ಗೆ ಈ ಹಿಂದೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಇದೀಗ ನಗರ ಪೊಲೀಸರು ಕೇಸ್ ರಿ‌‌ ಓಪನ್ ಮಾಡಿದ್ದು, ಪ್ರಮುಖ ಆರೋಪಿಯನ್ನು ಕರೆತಂದು ವಿಚಾರಣೆಗೊಳಪಡಿಸಿದ್ದಾರೆ. ಮತ್ತೋರ್ವ ಆರೋಪಿ ಅಕ್ರಮ ಎಸಗಿರುವುದು ಬಯಲಿಗೆ ಬಂದಿದ್ದು‌, ಸಿಐಡಿ ವಶದಲ್ಲಿದ್ದಾನೆ.

ಇದನ್ನೂ ಓದಿ: PSI ನೇಮಕಾತಿ ಹಗರಣ: ಡ್ಯಾಂಗೆ ಮೊಬೈಲ್ ಎಸೆದ ಕಿಂಗ್​ಪಿನ್.. ಹುಡುಕಾಟಕ್ಕೆ ನೀರಿಗಿಳಿದ ಸಿಐಡಿ!

ಮಂಡ್ಯಕ್ಕೆ ವ್ಯಾಪಿಸಿದ ಪಿಎಸ್​ಐ ಹಗರಣ: ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾಗಮಂಗಲ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷರೊಬ್ಬರನ್ನು ಸಿಐಡಿ ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಮಾಜಿ ಮಂತ್ರಿ ಪರಮಾಪ್ತ ವಲಯದಲ್ಲಿ ಒಬ್ಬರಾಗಿರುವ ಈ ವ್ಯಕ್ತಿ ಹಗರಣದಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್​ಗೆ ಮುಜುಗರ ತಂದಿದೆ. 40 ಲಕ್ಷ ರೂ. ಡೀಲ್ ಕುದುರಿಸಿದ್ದ ಆರೋಪವೂ ಇವರ ಮೇಲಿದೆ ಎಂದು ಸಿಐಡಿ ಪೋಲಿಸರು ತಿಳಿಸಿದ್ದಾರೆ.

ಇದನ್ನೂ ಓದಿ: ತಿಹಾರ್, ಪರಪ್ಪನ ಆಗ್ರಹಾರ ಜೈಲಿಗಾದ್ರೂ ಹಾಕಲಿ ನಾನು ಹೆದರಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಆರೋಪಿಗಳ ವಿಚಾರಣೆಯ ವೇಳೆ ಈ ಹಿಂದೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪಿಎಸ್ಐ ಅಕ್ರಮದಲ್ಲಿ ಸಿಐಡಿ ಪೊಲೀಸರಿಂದ ಬಂಧನಕ್ಕೊಳಗಾದ ಪ್ರಮುಖ ಆರೋಪಿಯನ್ನು ಬಾಡಿ ವಾರೆಂಟ್ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು‌ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ಲೋಕೋಪಯೋಗಿ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ಹಾಗೂ ಅಸ್ಟಿಸೆಂಟ್ ಇಂಜಿನಿಯರ್ ಹುದ್ದೆಗಳೂ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದನ್ನು ವಿಚಾರಣೆ ವೇಳೆ ಸಿಐಡಿ ಪೊಲೀಸರು ಕಂಡುಕೊಂಡಿದ್ದರು.‌ ಅಕ್ರಮ ಬಗ್ಗೆ ಈ ಹಿಂದೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಇದೀಗ ನಗರ ಪೊಲೀಸರು ಕೇಸ್ ರಿ‌‌ ಓಪನ್ ಮಾಡಿದ್ದು, ಪ್ರಮುಖ ಆರೋಪಿಯನ್ನು ಕರೆತಂದು ವಿಚಾರಣೆಗೊಳಪಡಿಸಿದ್ದಾರೆ. ಮತ್ತೋರ್ವ ಆರೋಪಿ ಅಕ್ರಮ ಎಸಗಿರುವುದು ಬಯಲಿಗೆ ಬಂದಿದ್ದು‌, ಸಿಐಡಿ ವಶದಲ್ಲಿದ್ದಾನೆ.

ಇದನ್ನೂ ಓದಿ: PSI ನೇಮಕಾತಿ ಹಗರಣ: ಡ್ಯಾಂಗೆ ಮೊಬೈಲ್ ಎಸೆದ ಕಿಂಗ್​ಪಿನ್.. ಹುಡುಕಾಟಕ್ಕೆ ನೀರಿಗಿಳಿದ ಸಿಐಡಿ!

ಮಂಡ್ಯಕ್ಕೆ ವ್ಯಾಪಿಸಿದ ಪಿಎಸ್​ಐ ಹಗರಣ: ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾಗಮಂಗಲ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷರೊಬ್ಬರನ್ನು ಸಿಐಡಿ ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಮಾಜಿ ಮಂತ್ರಿ ಪರಮಾಪ್ತ ವಲಯದಲ್ಲಿ ಒಬ್ಬರಾಗಿರುವ ಈ ವ್ಯಕ್ತಿ ಹಗರಣದಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್​ಗೆ ಮುಜುಗರ ತಂದಿದೆ. 40 ಲಕ್ಷ ರೂ. ಡೀಲ್ ಕುದುರಿಸಿದ್ದ ಆರೋಪವೂ ಇವರ ಮೇಲಿದೆ ಎಂದು ಸಿಐಡಿ ಪೋಲಿಸರು ತಿಳಿಸಿದ್ದಾರೆ.

ಇದನ್ನೂ ಓದಿ: ತಿಹಾರ್, ಪರಪ್ಪನ ಆಗ್ರಹಾರ ಜೈಲಿಗಾದ್ರೂ ಹಾಕಲಿ ನಾನು ಹೆದರಲ್ಲ: ಡಿ.ಕೆ.ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.