ETV Bharat / city

ನಾನು ಡಿಸಿಎಂ ಆಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: ಆರ್.ಅಶೋಕ್

author img

By

Published : Jul 28, 2021, 11:38 AM IST

ನನಗೆ ಡಿಸಿಎಂ ಸ್ಥಾನ ನೀಡುವ ಕುರಿತು ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ. ಸಚಿವ ಸಂಪುಟ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಆರ್.ಅಶೋಕ್ ತಿಳಿಸಿದರು.

R ashok
ಆರ್.ಅಶೋಕ್

ಬೆಂಗಳೂರು: ನಾನು ಡಿಸಿಎಂ ಆಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಆರ್.ಅಶೋಕ್ ತಿಳಿಸಿದರು. ಕೆ.ಕೆ.ಗೆಸ್ಟ್ ಹೌಸ್​ನಲ್ಲಿ ಮಾತನಾಡಿದ ಅವರು, ನನಗೆ ಡಿಸಿಎಂ ಸ್ಥಾನ ನೀಡುವ ಕುರಿತು ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ ಎಂದು ತಿಳಿಸಿದರು.

ಕೆ.ಕೆ.ಗೆಸ್ಟ್ ಹೌಸ್​ನಲ್ಲಿ ಮಾತನಾಡಿದ ಆರ್.ಅಶೋಕ್

ಸಚಿವ ಸಂಪುಟ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ ರಚನೆಯಾಗಲಿದೆ. ಬಹುಶಃ ಒಂದು ವಾರದಲ್ಲೇ ಈ ಎಲ್ಲ ಬೆಳವಣಿಗೆಗಳು ಆಗಬಹುದು ಎಂದು ತಿಳಿಸಿದರು.

ಇನ್ನು ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಈ ರೀತಿಯ ಯಾವುದೇ ನಿಯಮಗಳಿಲ್ಲ. ಹಿರಿತನವನ್ನು ನೋಡಿ ಸಚಿವ ಸ್ಥಾನ ನೀಡಲಿದ್ದಾರೆ ಎಂದರು.

ಬೆಂಗಳೂರು: ನಾನು ಡಿಸಿಎಂ ಆಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಆರ್.ಅಶೋಕ್ ತಿಳಿಸಿದರು. ಕೆ.ಕೆ.ಗೆಸ್ಟ್ ಹೌಸ್​ನಲ್ಲಿ ಮಾತನಾಡಿದ ಅವರು, ನನಗೆ ಡಿಸಿಎಂ ಸ್ಥಾನ ನೀಡುವ ಕುರಿತು ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ ಎಂದು ತಿಳಿಸಿದರು.

ಕೆ.ಕೆ.ಗೆಸ್ಟ್ ಹೌಸ್​ನಲ್ಲಿ ಮಾತನಾಡಿದ ಆರ್.ಅಶೋಕ್

ಸಚಿವ ಸಂಪುಟ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ ರಚನೆಯಾಗಲಿದೆ. ಬಹುಶಃ ಒಂದು ವಾರದಲ್ಲೇ ಈ ಎಲ್ಲ ಬೆಳವಣಿಗೆಗಳು ಆಗಬಹುದು ಎಂದು ತಿಳಿಸಿದರು.

ಇನ್ನು ಹಿರಿಯರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಈ ರೀತಿಯ ಯಾವುದೇ ನಿಯಮಗಳಿಲ್ಲ. ಹಿರಿತನವನ್ನು ನೋಡಿ ಸಚಿವ ಸ್ಥಾನ ನೀಡಲಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.