ETV Bharat / city

ರಾಜ್ಯದ ಹಲವೆಡೆ ಮುಂಗಾರು ದುರ್ಬಲ: ಕರಾವಳಿಯಲ್ಲಿ ಆ. 6ರ ವರೆಗೆ ಮಳೆ ಅಬ್ಬರ

author img

By

Published : Aug 2, 2021, 6:23 PM IST

ಆಗಸ್ಟ್​​ 2 ರಿಂದ 6 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

Rain intensity reduced
ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆ

ಬೆಂಗಳೂರು: ರಾಜ್ಯಾದ್ಯಂತ ಸೋಮವಾರ(ಇಂದು) ಮಾನ್ಸೂನ್ ದುರ್ಬಲವಾಗಿದ್ದು, ಮಳೆಯ ಪ್ರಮಾಣ ಇಳಿಮುಖವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಶಿವಮೊಗ್ಗದ ತುಮರಿಯಲ್ಲಿ 4 ಸೆಂ.ಮೀ, ಉತ್ತರ ಕನ್ನಡದ ಯಲ್ಲಾಪುರ ಮತ್ತು ಆಗುಂಬೆಯಲ್ಲಿ ತಲಾ 3 ಸೆಂ.ಮೀ, ಉಡುಪಿಯ ಕೊಲ್ಲೂರು, ಮಂಗಳೂರು, ಉತ್ತರ ಕನ್ನಡದ ಜನ್ಮನೆ, ಸುಬ್ರಹ್ಮಣ್ಯದಲ್ಲಿ ತಲಾ 2 ಸೆಂ.ಮೀ, ಹೊನ್ನಾವರ, ಹಾಸನ, ಶಿರಾಲಿ, ಮಡಿಕೇರಿ, ಹಳಿಯಾಲ್, ಕದ್ರಾ, ಮಂಚಿಕೆರೆ, ಧರ್ಮಸ್ಥಳ, ಶಿವಮೊಗ್ಗದ ತ್ಯಾಗರ್ತಿ, ನಿಡಿಗೆ, ತಾಳಗುಪ್ಪ, ಕೊಡಗಿನ ಹುದಕೆರೆ ಹಾಗೂ ಸುಂಟಿಕೊಪ್ಪದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯಾದ್ಯಂತ 5.8 ಕಿ.ಮೀ. ಎತ್ತರದವರೆಗೆ ಸಾಧಾರಣವಾಗಿ ಪಶ್ಚಿಮದ ಗಾಳಿ ಬೀಸುತ್ತಿದೆ. ಈ ಪ್ರಭಾವದಿಂದ ಆಗಸ್ಟ್​​ 2 ರಿಂದ 6 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಸೋಮವಾರ(ಇಂದು) ಮಾನ್ಸೂನ್ ದುರ್ಬಲವಾಗಿದ್ದು, ಮಳೆಯ ಪ್ರಮಾಣ ಇಳಿಮುಖವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಶಿವಮೊಗ್ಗದ ತುಮರಿಯಲ್ಲಿ 4 ಸೆಂ.ಮೀ, ಉತ್ತರ ಕನ್ನಡದ ಯಲ್ಲಾಪುರ ಮತ್ತು ಆಗುಂಬೆಯಲ್ಲಿ ತಲಾ 3 ಸೆಂ.ಮೀ, ಉಡುಪಿಯ ಕೊಲ್ಲೂರು, ಮಂಗಳೂರು, ಉತ್ತರ ಕನ್ನಡದ ಜನ್ಮನೆ, ಸುಬ್ರಹ್ಮಣ್ಯದಲ್ಲಿ ತಲಾ 2 ಸೆಂ.ಮೀ, ಹೊನ್ನಾವರ, ಹಾಸನ, ಶಿರಾಲಿ, ಮಡಿಕೇರಿ, ಹಳಿಯಾಲ್, ಕದ್ರಾ, ಮಂಚಿಕೆರೆ, ಧರ್ಮಸ್ಥಳ, ಶಿವಮೊಗ್ಗದ ತ್ಯಾಗರ್ತಿ, ನಿಡಿಗೆ, ತಾಳಗುಪ್ಪ, ಕೊಡಗಿನ ಹುದಕೆರೆ ಹಾಗೂ ಸುಂಟಿಕೊಪ್ಪದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯಾದ್ಯಂತ 5.8 ಕಿ.ಮೀ. ಎತ್ತರದವರೆಗೆ ಸಾಧಾರಣವಾಗಿ ಪಶ್ಚಿಮದ ಗಾಳಿ ಬೀಸುತ್ತಿದೆ. ಈ ಪ್ರಭಾವದಿಂದ ಆಗಸ್ಟ್​​ 2 ರಿಂದ 6 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳವರೆಗೆ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.