ETV Bharat / city

ರಾಜಸ್ವ ಸಂಗ್ರಹ ಗುರಿ ಮುಟ್ಟಲು ನೋಂದಣಿ, ಮುದ್ರಾಂಕ ಇಲಾಖೆ ಹಾಕಿಕೊಂಡ ಯೋಜನೆಗಳೇನು?

author img

By

Published : Mar 20, 2022, 7:24 AM IST

ಸಾರ್ವಜನಿಕರ ಸ್ಥಿರ ಮತ್ತು ಚರಾಸ್ತಿಗಳ ವ್ಯವಹಾರಗಳಿಗೆ ಸಂಬಂಧಿಸಿದ ದಸ್ತಾವೇಜುಗಳನ್ನು ನೋಂದಣಿ ಕಾಯ್ದೆಯಡಿ ನೋಂದಾಯಿಸುವುದು ಹಾಗೂ ನೋಂದಾಯಿತ ದಸ್ತಾವೇಜುಗಳಿಗೆ ಸಂಬಂಧಿಸಿದ ಶಾಶ್ವತ ದಾಖಲಾತಿಗಳನ್ನು ಸಂರಕ್ಷಿಸಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸುವುದು. ಸರ್ಕಾರಕ್ಕೆ ಹೆಚ್ಚಿನ ರಾಜಸ್ವ ಸಂಗ್ರಹಿಸುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಸ್ಥಿರಾಸ್ತಿಗಳ ಮಾರ್ಗಸೂಚಿ ಮಾರುಕಟ್ಟೆ ಬೆಲೆಗಳನ್ನು ಪರಿಷ್ಕರಿಸಿ ನಿಗದಿಪಡಿಸುವುದು ಸರ್ಕಾರದ ಉದ್ದೇಶ.

Registration, stamp Department new plans to reach its target
ರಾಜಸ್ವ ಸಂಗ್ರಹ ಗುರಿ ಮುಟ್ಟಲು ನೋಂದಣಿ, ಮುದ್ರಾಂಕ ಇಲಾಖೆ ಹಾಕಿಕೊಂಡ ಯೋಜನೆಗಳು

ಬೆಂಗಳೂರು: ರಾಜಸ್ವ ಸಂಗ್ರಹಣೆಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. 2021-22ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ 12,655 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೊಂದಿದೆ. ಫೆಬ್ರವರಿ 15ಕ್ಕೆ 11,590 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ. ಒಂದೂವರೆ ತಿಂಗಳ ಸಾಧನೆ ಜೊತೆಗೆ ಹೆಚ್ಚಿನ ಆದಾಯ ಸಂಗ್ರಹಿಸಬೇಕಾಗಿದೆ.

ಸಾರ್ವಜನಿಕರ ಸ್ಥಿರ ಮತ್ತು ಚರಾಸ್ತಿಗಳ ವ್ಯವಹಾರಗಳಿಗೆ ಸಂಬಂಧಿಸಿದ ದಸ್ತಾವೇಜುಗಳನ್ನು ನೋಂದಣಿ ಕಾಯ್ದೆಯಡಿ ನೋಂದಾಯಿಸುವುದು ಹಾಗೂ ನೋಂದಾಯಿತ ದಸ್ತಾವೇಜುಗಳಿಗೆ ಸಂಬಂಧಿಸಿದ ಶಾಶ್ವತ ದಾಖಲಾತಿಗಳನ್ನು ಸಂರಕ್ಷಿಸಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸುವುದು. ಸರ್ಕಾರಕ್ಕೆ ಹೆಚ್ಚಿನ ರಾಜಸ್ವ ಸಂಗ್ರಹಿಸುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಸ್ಥಿರಾಸ್ತಿಗಳ ಮಾರ್ಗಸೂಚಿ ಮಾರುಕಟ್ಟೆ ಬೆಲೆಗಳನ್ನು ಪರಿಷ್ಕರಿಸಿ ನಿಗದಿಪಡಿಸುವುದು ಸರ್ಕಾರದ ಉದ್ದೇಶ.

ಕರ್ನಾಟಕ ಮುದ್ರಾಂಕ ಕಾಯ್ದೆ 1957ರ ಕಲಂ 67 ಬಿ ಅಡಿಯಲ್ಲಿ ನೋಂದಣಿಗೆ ಕಡ್ಡಾಯವಲ್ಲದ ದಸ್ತಾವೇಜುಗಳಿಗೆ ಸಂಬಂಧಿಸಿದಂತೆ, ಬ್ಯಾಂಕುಗಳು, ಸಂಘಸಂಸ್ಥೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಗಳು ಚರ ಮತ್ತು ಸ್ಥಿರಾಸ್ತಿಗಳ ಬಗ್ಗೆ ಬರೆದುಕೊಡುವ ಅಥವಾ ಬರೆಸಿಕೊಳ್ಳುವ ದಸ್ತಾವೇಜುಗಳ ತಪಾಸಣೆ, ಷೇರು ವಹಿವಾಟುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪತ್ತೆಹಚ್ಚಿ ಸರಿಯಾದ ಮುದ್ರಾಂಕ ಶುಲ್ಕ ಪಾವತಿಸಿಕೊಂಡು ಹೆಚ್ಚಿನ ರಾಜಸ್ವ ಸಂಗ್ರಹಿಸುವುದು. ಕರ್ನಾಟಕ ಮುದ್ರಾಂಕ ಕಾಯ್ದೆ 1957 ರಡಿ ವಿವಿಧ ದಸ್ತಾವೇಜುಗಳಿಗೆ ಮುದ್ರಾಂಕ ಶುಲ್ಕಗಳನ್ನು ಕಾಲಕಾಲಕ್ಕೆ ಪರಿಷ್ಕರಿಸಿ, ಸರ್ಕಾರಕ್ಕೆ ಹೆಚ್ಚಿನ ರಾಜಸ್ವವನ್ನು ಸಂಗ್ರಹಿಸುವುದು. ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ನೋಂದಣಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಸರ್ಕಾರದ ಧ್ಯೇಯೋದ್ದೇಶವಾಗಿದೆ.

ಕಚೇರಿ ಸಮಯ ವಿಸ್ತರಣೆ: ಸ್ಥಿರಾಸ್ತಿ ಖರೀದಿ, ಅಡಮಾನ, ವಿಲ್ ಇನ್ನಿತರೆ ದಾಖಲೆ ನೋಂದಣಿ ಮಾಡಿಸುವವರಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯ ಬೆಳಗ್ಗೆ 8ರಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಿದೆ. ಜೊತೆಗೆ 2ನೇ ಮತ್ತು 3ನೇ ಶನಿವಾರವೂ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಕಂದಾಯ ಇಲಾಖೆ ಸೂಚನೆ ನೀಡಿದೆ.

ಸರ್ವರ್ ಸಮಸ್ಯೆ ಮತ್ತು ವೇಗವಾಗಿ ಕೆಲಸಗಳು ಆಗುತ್ತಿಲ್ಲ ಎಂಬ ಆರೋಪದಿಂದ ಕೆಲವರು ಕೆಲಸಗಳನ್ನು ಮುಂದೂಡುತ್ತಿದ್ದರು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಕಾರ್ಯ ನಿರ್ವಹಿಸುತ್ತಿದ್ದ ಕಚೇರಿ ಸಮಯವನ್ನು ಇದೀಗ ಮತ್ತೆ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆವರೆಗೆ ಕೆಲಸದ ವೇಳೆಯನ್ನು ವಿಸ್ತರಿಸಲಾಗಿದೆ. ಆದರೆ ಜನರು ಮಾತ್ರ ತಮ್ಮ ಕೆಲಸಗಳಿಗೆ ಬೆಳಗ್ಗೆ 10 ಗಂಟೆ ನಂತರವೇ ಸಬ್ ರಿಜಿಸ್ಟ್ರಾರ್ ಕಚೇರಿಗೆ ಬರುತ್ತಾರೆ. ರಾತ್ರಿಯೂ ಜನ ವಿರಳ ಎನ್ನುತ್ತಾರೆ ಅಧಿಕಾರಿಗಳು.

ಯಾರಿಗೆ ಹೆಚ್ಚು ಅನುಕೂಲ? ಬ್ಯಾಂಕ್‌ನಲ್ಲಿ ಆಸ್ತಿ ಮೇಲೆ ಸಾಲ ಪಡೆದವರು ಅಡಮಾನ ಒಪ್ಪಂದ ಪತ್ರ ಮಾಡಿಕೊಳ್ಳುವರಿಗೆ ಸಾಕಷ್ಟು ಅನುಕೂಲವಾಗಿದೆ. ಬೆಳಗ್ಗೆಯೇ ಬ್ಯಾಂಕ್ ಅಧಿಕಾರಿ ಮತ್ತು ಸಾಲಗಾರ ನೋಂದಣಿ ಮಾಡಿಸಿಕೊಂಡು ಎಂದಿನಂತೆ ತಮ್ಮ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಸರ್ಕಾರ ಅಥವಾ ಖಾಸಗಿ ಕಚೇರಿಗಳಲ್ಲಿ ಕೆಲಸ ಮಾಡುವವರು ಸಹ ಕಚೇರಿಗೆ ಹೋಗುವ ಮುನ್ನ ಅಥವಾ ಕೆಲಸ ಬಿಟ್ಟ ಮೇಲೆ ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದು ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗಿದೆ. ಕೆ2 ಚಲನ್‌ಗೆ ಹಣ ಪಾವತಿ ಮಾಡಿದ ಮೇಲೆ ಯಶಸ್ವಿ ವರದಿ ಬಾರದೇ ಸರ್ವರ್ ಸಮಸ್ಯೆ ಬಂದಾಗ ಕಾದು ಕೆಲಸ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ರಸ್ತೆಯಲ್ಲಿ ಬಸ್ ನಿಲ್ಲಿಸಿ ಚಾಲಕ-ನಿರ್ವಾಹಕರ ಜಗಳ: ಮಂಗಳೂರಿನಲ್ಲಿ ನಾಲ್ವರ ಬಂಧನ

ಈಗಾಗಲೇ ಜಮೀನು, ನಿವೇಶನ, ಕಟ್ಟಡ, ಫ್ಲ್ಯಾಟ್ ಸೇರಿ ಸ್ಥಿರಾಸ್ತಿ ಖರೀದಿಸುವರಿಗೆ ಅನುಕೂಲ ಆಗುವಂತೆ ನೋಂದಣಿ ಮತ್ತು ಮುದ್ರಾಂಕ ಶುಲ್ಕದಲ್ಲಿ ಶೇ.10 ವಿನಾಯಿತಿ ನೀಡಲಾಗಿದೆ. ಇದರಿಂದ ಸಾಕಷ್ಟು ಜನರು ಅನುಕೂಲ ಪಡೆಯುತ್ತಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಅಲ್ಪ ಮಟ್ಟದ ಹಣ ಉಳಿತಾಯವಾಗಿದೆ. ಇದೀಗ ಕಚೇರಿ ಸಮಯ ವಿಸ್ತರಣೆ ಮಾಡಿರುವುದು ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲವಾಗಿದೆ.

ಬೆಂಗಳೂರು: ರಾಜಸ್ವ ಸಂಗ್ರಹಣೆಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. 2021-22ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ 12,655 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೊಂದಿದೆ. ಫೆಬ್ರವರಿ 15ಕ್ಕೆ 11,590 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ. ಒಂದೂವರೆ ತಿಂಗಳ ಸಾಧನೆ ಜೊತೆಗೆ ಹೆಚ್ಚಿನ ಆದಾಯ ಸಂಗ್ರಹಿಸಬೇಕಾಗಿದೆ.

ಸಾರ್ವಜನಿಕರ ಸ್ಥಿರ ಮತ್ತು ಚರಾಸ್ತಿಗಳ ವ್ಯವಹಾರಗಳಿಗೆ ಸಂಬಂಧಿಸಿದ ದಸ್ತಾವೇಜುಗಳನ್ನು ನೋಂದಣಿ ಕಾಯ್ದೆಯಡಿ ನೋಂದಾಯಿಸುವುದು ಹಾಗೂ ನೋಂದಾಯಿತ ದಸ್ತಾವೇಜುಗಳಿಗೆ ಸಂಬಂಧಿಸಿದ ಶಾಶ್ವತ ದಾಖಲಾತಿಗಳನ್ನು ಸಂರಕ್ಷಿಸಿ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸುವುದು. ಸರ್ಕಾರಕ್ಕೆ ಹೆಚ್ಚಿನ ರಾಜಸ್ವ ಸಂಗ್ರಹಿಸುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಸ್ಥಿರಾಸ್ತಿಗಳ ಮಾರ್ಗಸೂಚಿ ಮಾರುಕಟ್ಟೆ ಬೆಲೆಗಳನ್ನು ಪರಿಷ್ಕರಿಸಿ ನಿಗದಿಪಡಿಸುವುದು ಸರ್ಕಾರದ ಉದ್ದೇಶ.

ಕರ್ನಾಟಕ ಮುದ್ರಾಂಕ ಕಾಯ್ದೆ 1957ರ ಕಲಂ 67 ಬಿ ಅಡಿಯಲ್ಲಿ ನೋಂದಣಿಗೆ ಕಡ್ಡಾಯವಲ್ಲದ ದಸ್ತಾವೇಜುಗಳಿಗೆ ಸಂಬಂಧಿಸಿದಂತೆ, ಬ್ಯಾಂಕುಗಳು, ಸಂಘಸಂಸ್ಥೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಗಳು ಚರ ಮತ್ತು ಸ್ಥಿರಾಸ್ತಿಗಳ ಬಗ್ಗೆ ಬರೆದುಕೊಡುವ ಅಥವಾ ಬರೆಸಿಕೊಳ್ಳುವ ದಸ್ತಾವೇಜುಗಳ ತಪಾಸಣೆ, ಷೇರು ವಹಿವಾಟುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪತ್ತೆಹಚ್ಚಿ ಸರಿಯಾದ ಮುದ್ರಾಂಕ ಶುಲ್ಕ ಪಾವತಿಸಿಕೊಂಡು ಹೆಚ್ಚಿನ ರಾಜಸ್ವ ಸಂಗ್ರಹಿಸುವುದು. ಕರ್ನಾಟಕ ಮುದ್ರಾಂಕ ಕಾಯ್ದೆ 1957 ರಡಿ ವಿವಿಧ ದಸ್ತಾವೇಜುಗಳಿಗೆ ಮುದ್ರಾಂಕ ಶುಲ್ಕಗಳನ್ನು ಕಾಲಕಾಲಕ್ಕೆ ಪರಿಷ್ಕರಿಸಿ, ಸರ್ಕಾರಕ್ಕೆ ಹೆಚ್ಚಿನ ರಾಜಸ್ವವನ್ನು ಸಂಗ್ರಹಿಸುವುದು. ಸಾರ್ವಜನಿಕರಿಗೆ ಅನುಕೂಲಕರವಾಗುವಂತೆ ನೋಂದಣಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಸರ್ಕಾರದ ಧ್ಯೇಯೋದ್ದೇಶವಾಗಿದೆ.

ಕಚೇರಿ ಸಮಯ ವಿಸ್ತರಣೆ: ಸ್ಥಿರಾಸ್ತಿ ಖರೀದಿ, ಅಡಮಾನ, ವಿಲ್ ಇನ್ನಿತರೆ ದಾಖಲೆ ನೋಂದಣಿ ಮಾಡಿಸುವವರಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯ ಬೆಳಗ್ಗೆ 8ರಿಂದ ರಾತ್ರಿ 8 ಗಂಟೆವರೆಗೆ ವಿಸ್ತರಿಸಿದೆ. ಜೊತೆಗೆ 2ನೇ ಮತ್ತು 3ನೇ ಶನಿವಾರವೂ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಕಂದಾಯ ಇಲಾಖೆ ಸೂಚನೆ ನೀಡಿದೆ.

ಸರ್ವರ್ ಸಮಸ್ಯೆ ಮತ್ತು ವೇಗವಾಗಿ ಕೆಲಸಗಳು ಆಗುತ್ತಿಲ್ಲ ಎಂಬ ಆರೋಪದಿಂದ ಕೆಲವರು ಕೆಲಸಗಳನ್ನು ಮುಂದೂಡುತ್ತಿದ್ದರು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಕಾರ್ಯ ನಿರ್ವಹಿಸುತ್ತಿದ್ದ ಕಚೇರಿ ಸಮಯವನ್ನು ಇದೀಗ ಮತ್ತೆ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆವರೆಗೆ ಕೆಲಸದ ವೇಳೆಯನ್ನು ವಿಸ್ತರಿಸಲಾಗಿದೆ. ಆದರೆ ಜನರು ಮಾತ್ರ ತಮ್ಮ ಕೆಲಸಗಳಿಗೆ ಬೆಳಗ್ಗೆ 10 ಗಂಟೆ ನಂತರವೇ ಸಬ್ ರಿಜಿಸ್ಟ್ರಾರ್ ಕಚೇರಿಗೆ ಬರುತ್ತಾರೆ. ರಾತ್ರಿಯೂ ಜನ ವಿರಳ ಎನ್ನುತ್ತಾರೆ ಅಧಿಕಾರಿಗಳು.

ಯಾರಿಗೆ ಹೆಚ್ಚು ಅನುಕೂಲ? ಬ್ಯಾಂಕ್‌ನಲ್ಲಿ ಆಸ್ತಿ ಮೇಲೆ ಸಾಲ ಪಡೆದವರು ಅಡಮಾನ ಒಪ್ಪಂದ ಪತ್ರ ಮಾಡಿಕೊಳ್ಳುವರಿಗೆ ಸಾಕಷ್ಟು ಅನುಕೂಲವಾಗಿದೆ. ಬೆಳಗ್ಗೆಯೇ ಬ್ಯಾಂಕ್ ಅಧಿಕಾರಿ ಮತ್ತು ಸಾಲಗಾರ ನೋಂದಣಿ ಮಾಡಿಸಿಕೊಂಡು ಎಂದಿನಂತೆ ತಮ್ಮ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಸರ್ಕಾರ ಅಥವಾ ಖಾಸಗಿ ಕಚೇರಿಗಳಲ್ಲಿ ಕೆಲಸ ಮಾಡುವವರು ಸಹ ಕಚೇರಿಗೆ ಹೋಗುವ ಮುನ್ನ ಅಥವಾ ಕೆಲಸ ಬಿಟ್ಟ ಮೇಲೆ ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದು ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗಿದೆ. ಕೆ2 ಚಲನ್‌ಗೆ ಹಣ ಪಾವತಿ ಮಾಡಿದ ಮೇಲೆ ಯಶಸ್ವಿ ವರದಿ ಬಾರದೇ ಸರ್ವರ್ ಸಮಸ್ಯೆ ಬಂದಾಗ ಕಾದು ಕೆಲಸ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ರಸ್ತೆಯಲ್ಲಿ ಬಸ್ ನಿಲ್ಲಿಸಿ ಚಾಲಕ-ನಿರ್ವಾಹಕರ ಜಗಳ: ಮಂಗಳೂರಿನಲ್ಲಿ ನಾಲ್ವರ ಬಂಧನ

ಈಗಾಗಲೇ ಜಮೀನು, ನಿವೇಶನ, ಕಟ್ಟಡ, ಫ್ಲ್ಯಾಟ್ ಸೇರಿ ಸ್ಥಿರಾಸ್ತಿ ಖರೀದಿಸುವರಿಗೆ ಅನುಕೂಲ ಆಗುವಂತೆ ನೋಂದಣಿ ಮತ್ತು ಮುದ್ರಾಂಕ ಶುಲ್ಕದಲ್ಲಿ ಶೇ.10 ವಿನಾಯಿತಿ ನೀಡಲಾಗಿದೆ. ಇದರಿಂದ ಸಾಕಷ್ಟು ಜನರು ಅನುಕೂಲ ಪಡೆಯುತ್ತಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಅಲ್ಪ ಮಟ್ಟದ ಹಣ ಉಳಿತಾಯವಾಗಿದೆ. ಇದೀಗ ಕಚೇರಿ ಸಮಯ ವಿಸ್ತರಣೆ ಮಾಡಿರುವುದು ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.