ETV Bharat / city

ಕೆಐಎಡಿಬಿ ಭೂ ಹಗರಣ: ನಿವೃತ್ತ ಕೆಎಎಸ್‌ ಅಧಿಕಾರಿ ಸೇರಿ ಇಬ್ಬರಿಗೆ 2 ವರ್ಷ ಜೈಲು ಸಜೆ

author img

By

Published : Apr 20, 2021, 6:57 AM IST

ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಯಲ್ಲಿ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಪಾರ್ಕ್‌ಗಳ ನಿರ್ಮಾಣಕ್ಕೆ ನಡೆದ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆಯಾದ ಮೊದಲ ಪ್ರಕರಣವಿದು.

KIADB land scam
ಕೆಐಎಡಿಬಿ ಭೂ ಹಗರಣ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ಹತ್ತು ವರ್ಷಗಳ ಹಿಂದೆ ನಡೆದಿದ್ದ ಭೂ ಹಗರಣದಲ್ಲಿ ನಿವೃತ್ತ ಕೆಎಎಸ್ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಯೊಬ್ಬರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ನಿವೃತ್ತ ಕೆಎಎಸ್ ಅಧಿಕಾರಿ ಕೆ.ಬಿ.ಚಿಕ್ಕಬೆಟ್ಟಯ್ಯ ಮತ್ತು ಹೊರಮಾವು ನಿವಾಸಿ ಮುನಿರಾಜು ಶಿಕ್ಷೆಗೊಳಗಾಗಿದ್ದಾರೆ. ಇಬ್ಬರಿಗೂ ಕ್ರಮವಾಗಿ 2.10 ಮತ್ತು 2 ಲಕ್ಷ ರೂ ದಂಡ ವಿಧಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಯಲ್ಲಿ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಪಾರ್ಕ್‌ಗಳ ನಿರ್ಮಾಣಕ್ಕೆ ನಡೆದ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆಯಾದ ಮೊದಲ ಪ್ರಕರಣವಾಗಿದೆ.

ಕೆಐಎಡಿಬಿ 2006ರಲ್ಲಿ ಬೆಂಗಳೂರು ಉತ್ತರ ತಾಲೂಕಿನ ಅಗೆಭಿನ್ನಮಂಗಲದ ಸರ್ವೆ ನಂಬರ್ 74/2ರಲ್ಲಿ 2 ಎಕರೆ 10 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡಿತ್ತು. ಮುನಿಕೃಷ್ಣ ಈ ಜಮೀನಿನ ಮಾಲೀಕರಾಗಿದ್ದು, ಮುನಿರಾಜು ಜಮೀನಿನ ಮಾಲೀಕ ಎಂಬಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿತ್ತು. ಈ ಆಧಾರದಲ್ಲಿ 1,139 ಕೋಟಿ ಪರಿಹಾರ ಕೂಡ ಪಾವತಿಸಲಾಗಿತ್ತು.

2010ರಲ್ಲಿ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಸಿ.ಲಕ್ಷ್ಮೀನಾರಾಯಣ ಎಫ್‌ಐಆರ್‌ ದಾಖಲಿಸಿದ್ದರು. ನಂತರ ಲೋಕಾಯುಕ್ತ ಇನ್‌ಸ್ಪೆಕ್ಟರ್ ಕೆ.ರವಿಶಂಕರ್‌ ತನಿಖೆ ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. 15 ಸಾಕ್ಷಿಗಳ ವಿಚಾರಣೆ ನಡೆಸಿದ್ದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಲಕ್ಷ್ಮೀನಾರಾಯಣ ಭಟ್, 12 ದಾಖಲೆಗಳನ್ನ ಪರಿಶೀಲನೆಗೆ ಒಳಪಡಿಸಿದ್ದರು.

ಇದೀಗ ಅಂತಿಮ ಆದೇಶ ಪ್ರಕಟಿಸಿದ್ದು, ಚಿಕ್ಕಬೆಟ್ಟಯ್ಯ ಮತ್ತು ಮುನಿರಾಜು ದೋಷಿಗಳು ಎಂದು ಸಾಬೀತಾಗಿದೆ. ಇಬ್ಬರಿಗೂ ತಲಾ ಎರಡು ವರ್ಷ ಸಾಧಾರಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ತಾಜ್ ಮಹಲ್​ಗೆ ಮಡ್​ಪ್ಯಾಕ್ ಚಿಕಿತ್ಸೆ.. ಇನ್ನಷ್ಟು ಹೊಳೆಯಲಿದೆ ಪ್ರೇಮ ಸೌಧ!

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ಹತ್ತು ವರ್ಷಗಳ ಹಿಂದೆ ನಡೆದಿದ್ದ ಭೂ ಹಗರಣದಲ್ಲಿ ನಿವೃತ್ತ ಕೆಎಎಸ್ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಯೊಬ್ಬರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ತಲಾ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ನಿವೃತ್ತ ಕೆಎಎಸ್ ಅಧಿಕಾರಿ ಕೆ.ಬಿ.ಚಿಕ್ಕಬೆಟ್ಟಯ್ಯ ಮತ್ತು ಹೊರಮಾವು ನಿವಾಸಿ ಮುನಿರಾಜು ಶಿಕ್ಷೆಗೊಳಗಾಗಿದ್ದಾರೆ. ಇಬ್ಬರಿಗೂ ಕ್ರಮವಾಗಿ 2.10 ಮತ್ತು 2 ಲಕ್ಷ ರೂ ದಂಡ ವಿಧಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಯಲ್ಲಿ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಪಾರ್ಕ್‌ಗಳ ನಿರ್ಮಾಣಕ್ಕೆ ನಡೆದ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆಯಾದ ಮೊದಲ ಪ್ರಕರಣವಾಗಿದೆ.

ಕೆಐಎಡಿಬಿ 2006ರಲ್ಲಿ ಬೆಂಗಳೂರು ಉತ್ತರ ತಾಲೂಕಿನ ಅಗೆಭಿನ್ನಮಂಗಲದ ಸರ್ವೆ ನಂಬರ್ 74/2ರಲ್ಲಿ 2 ಎಕರೆ 10 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡಿತ್ತು. ಮುನಿಕೃಷ್ಣ ಈ ಜಮೀನಿನ ಮಾಲೀಕರಾಗಿದ್ದು, ಮುನಿರಾಜು ಜಮೀನಿನ ಮಾಲೀಕ ಎಂಬಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿತ್ತು. ಈ ಆಧಾರದಲ್ಲಿ 1,139 ಕೋಟಿ ಪರಿಹಾರ ಕೂಡ ಪಾವತಿಸಲಾಗಿತ್ತು.

2010ರಲ್ಲಿ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಸಿ.ಲಕ್ಷ್ಮೀನಾರಾಯಣ ಎಫ್‌ಐಆರ್‌ ದಾಖಲಿಸಿದ್ದರು. ನಂತರ ಲೋಕಾಯುಕ್ತ ಇನ್‌ಸ್ಪೆಕ್ಟರ್ ಕೆ.ರವಿಶಂಕರ್‌ ತನಿಖೆ ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. 15 ಸಾಕ್ಷಿಗಳ ವಿಚಾರಣೆ ನಡೆಸಿದ್ದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಲಕ್ಷ್ಮೀನಾರಾಯಣ ಭಟ್, 12 ದಾಖಲೆಗಳನ್ನ ಪರಿಶೀಲನೆಗೆ ಒಳಪಡಿಸಿದ್ದರು.

ಇದೀಗ ಅಂತಿಮ ಆದೇಶ ಪ್ರಕಟಿಸಿದ್ದು, ಚಿಕ್ಕಬೆಟ್ಟಯ್ಯ ಮತ್ತು ಮುನಿರಾಜು ದೋಷಿಗಳು ಎಂದು ಸಾಬೀತಾಗಿದೆ. ಇಬ್ಬರಿಗೂ ತಲಾ ಎರಡು ವರ್ಷ ಸಾಧಾರಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ತಾಜ್ ಮಹಲ್​ಗೆ ಮಡ್​ಪ್ಯಾಕ್ ಚಿಕಿತ್ಸೆ.. ಇನ್ನಷ್ಟು ಹೊಳೆಯಲಿದೆ ಪ್ರೇಮ ಸೌಧ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.