ETV Bharat / city

ಹೊಸ ವರ್ಷಾಚರಣೆಗೆ ನಿಯಮಾವಳಿ ಬಗ್ಗೆ ಕಮಲ್ ಪಂತ್ ಏನಂದ್ರು?

author img

By

Published : Dec 10, 2021, 12:55 PM IST

ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಸಂಬಂಧ ಸರ್ಕಾರದ ಆದೇಶವನ್ನು ಪಾಲನೆ ಮಾಡುತ್ತೇವೆ. ಸದ್ಯ ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದೇವೆಂದು ಕಮಲ್ ಪಂತ್ ತಿಳಿಸಿದರು.

police commissioner kamal pant
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು: ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ನಗರದಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆಗಳ ಮೇಲೆ ಕಾರ್ಮೋಡ ಕವಿದಿದೆ. ಸೋಂಕು ಹರಡುವ ಆತಂಕವಿದ್ದು, ಮತ್ತೆ ಸಂಭ್ರಮಾಚರಣೆಗಳು ಮಂಕಾಗುವ ಸಾಧ್ಯತೆಗಳಿವೆ.


ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ, ಸರ್ಕಾರದ ಆದೇಶವನ್ನು ಪಾಲನೆ ಮಾಡುತ್ತೇವೆ. ಎಲ್ಲ ರೀತಿಯ ಬಂದೋಬಸ್ತ್ ಕೈಗೊಳ್ಳಲಿದ್ದೇವೆ. ಒಮಿಕ್ರಾನ್ ಇರುವುದರಿಂದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾಗಿದೆ. ಎಲ್ಲವನ್ನೂ ಗಮನದಲ್ಲಿಡಬೇಕು ಎಂದರು.

ಇಂದಿರಾನಗರ ಸರಣಿ ಅಪಘಾತ ಪ್ರಕರಣ:

ಬೆಂಜ್ ಕಾರು ಚಾಲಕ ಆಸ್ಪತ್ರೆಯಲ್ಲಿದ್ದಾರೆ. ಹೇಳಿಕೆ ಕೊಡುವ ಸ್ಥಿತಿಯಲ್ಲಿ ಅವರಿಲ್ಲ. ಅವರು ಡಿಸ್ಚಾರ್ಜ್ ಆದ ಬಳಿಕ ವಿಚಾರ ಗೊತ್ತಾಗಬೇಕಿದೆ. ರಕ್ತದ ಮಾದರಿಯನ್ನು ಎಫ್ಎಸ್ಎಲ್​ಗೆ ಕಳುಹಿಸಿದ್ದಾರೆ. ಏನು ವರದಿ ಬರುತ್ತದೋ ಅದರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಬೆಂಗಳೂರು: ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ನಗರದಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆಗಳ ಮೇಲೆ ಕಾರ್ಮೋಡ ಕವಿದಿದೆ. ಸೋಂಕು ಹರಡುವ ಆತಂಕವಿದ್ದು, ಮತ್ತೆ ಸಂಭ್ರಮಾಚರಣೆಗಳು ಮಂಕಾಗುವ ಸಾಧ್ಯತೆಗಳಿವೆ.


ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ, ಸರ್ಕಾರದ ಆದೇಶವನ್ನು ಪಾಲನೆ ಮಾಡುತ್ತೇವೆ. ಎಲ್ಲ ರೀತಿಯ ಬಂದೋಬಸ್ತ್ ಕೈಗೊಳ್ಳಲಿದ್ದೇವೆ. ಒಮಿಕ್ರಾನ್ ಇರುವುದರಿಂದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾಗಿದೆ. ಎಲ್ಲವನ್ನೂ ಗಮನದಲ್ಲಿಡಬೇಕು ಎಂದರು.

ಇಂದಿರಾನಗರ ಸರಣಿ ಅಪಘಾತ ಪ್ರಕರಣ:

ಬೆಂಜ್ ಕಾರು ಚಾಲಕ ಆಸ್ಪತ್ರೆಯಲ್ಲಿದ್ದಾರೆ. ಹೇಳಿಕೆ ಕೊಡುವ ಸ್ಥಿತಿಯಲ್ಲಿ ಅವರಿಲ್ಲ. ಅವರು ಡಿಸ್ಚಾರ್ಜ್ ಆದ ಬಳಿಕ ವಿಚಾರ ಗೊತ್ತಾಗಬೇಕಿದೆ. ರಕ್ತದ ಮಾದರಿಯನ್ನು ಎಫ್ಎಸ್ಎಲ್​ಗೆ ಕಳುಹಿಸಿದ್ದಾರೆ. ಏನು ವರದಿ ಬರುತ್ತದೋ ಅದರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.