ETV Bharat / city

ಭೂತಾಯಿಯ ಮಡಿಲು ಸೇರಿದ ಭಾಗ್ಯವಂತ: ಮತ್ತೆ ಹುಟ್ಟಿ ಬನ್ನಿ ಅಪ್ಪು

author img

By

Published : Oct 31, 2021, 7:56 AM IST

Updated : Oct 31, 2021, 4:57 PM IST

ಅಭಿಮಾನಿ ಕೋಟಿಯ ಅಚ್ಚುಮೆಚ್ಚಿನ 'ಅಪ್ಪು' ಇಂದು ಬೆಳಗ್ಗೆ ಭೂತಾಯಿಯ ಮಡಿಲು ಸೇರಿದರು. ಕಂಠೀರವ ಸ್ಟುಡಿಯೋ ಆವರಣದಲ್ಲಿ ತಂದೆ ವರನಟ ದಿ.ಡಾ.ರಾಜ್‌ ಕುಮಾರ್ ಹಾಗು ತಾಯಿ ದಿ.ಡಾ.ಪಾರ್ವತಮ್ಮ ರಾಜ್‌ ಕುಮಾರ್ ಅವರ ಸಮಾಧಿಯ ಪಕ್ಕದಲ್ಲಿ ಪುನೀತ್ ಮೃತದೇಹದ ಅಂತ್ಯಸಂಸ್ಕಾರವನ್ನು ಶಾಸ್ತ್ರೋಕ್ತವಾಗಿ, ಸಕಲ ಸರ್ಕಾರಿ ಗೌರವಗಳು ಹಾಗು ಕುಟುಂಬ ವರ್ಗ ಹಾಗು ಗಣ್ಯಾತಿಗಣ್ಯರ ಕಣ್ಣೀರಧಾರೆಯ ನಡುವೆ ನೆರವೇರಿಸಲಾಯಿತು.

Sandalwood Actor Puneet Rajkumar last rites completed
ಭೂತಾಯಿಯ ಮಡಿಲು ಸೇರಿದ ಭಾಗ್ಯವಂತ: ಮತ್ತೆ ಹುಟ್ಟಿ ಬಾ 'ಪುನೀತ'

ಬೆಂಗಳೂರು: ಕನ್ನಡದ 'ರಾಜರತ್ನ', ಅಭಿಮಾನಿಗಳ ನಲ್ಮೆಯ 'ಅಪ್ಪು' ಇಂದು ಸೂರ್ಯೋದಯದ ಹೊತ್ತಲ್ಲಿ ಕಂಠೀರವ ಸ್ಟುಡಿಯೋದ ಆವರಣದಲ್ಲಿ ಭೂತಾಯಿಯ ಗರ್ಭ ಸೇರಿದರು. ಡಾ.ರಾಜ್ ಕುಮಾರ್ ಹಾಗು ಪಾರ್ವತಮ್ಮ ರಾಜ್‌ಕುಮಾರ್ ಅವರ ಸಮಾಧಿಯ ಸಮೀಪವೇ ಪುನೀತ್‌ ಮೃತದೇಹವನ್ನು ಮಣ್ಣು ಮಾಡಲಾಯಿತು.

ಭದ್ರತಾ ಕಾರಣಗಳ ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಮ್ಮತಿ ಪಡೆದು ಪ್ರಕಟಿಸಿದ ಸಮಯಕ್ಕೂ ಮೊದಲೇ ಶುಕ್ರವಾರ ಹೃದಯಸ್ತಂಭನದಿಂದ ಹಠಾತ್ ನಿಧನರಾದ ಯುವನಟನ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಮೊದಲು ಗಣ್ಯಾತಿಗಣ್ಯರು ಪಾರ್ಥಿವ ಶರೀರದ ಮೇಲೆ ಪುಷ್ಪಗುಚ್ಛ ಅರ್ಪಿಸಿದರು. ನಂತರ ಪೊಲೀಸ್ ವಾದ್ಯಗೋಷ್ಠಿಯಿಂದ ರಾಷ್ಟ್ರಗೀತೆ ಮೊಳಗಿತು. ಅದೇ ಸಂದರ್ಭದಲ್ಲಿ ಪೊಲೀಸರು ಮೂರು ಬಾರಿ ಕುಶಾಲತೋಪು ಸಿಡಿಸಿದರು. ತದನಂತರ, ಎರಡು ನಿಮಿಷಗಳ ಮೌನ ಆಚರಿಸಲಾಯಿತು. ಇದಾದ ಕೂಡಲೇ, ಮೃತದೇಹದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅವರ ಇಬ್ಬರು ಹೆಣ್ಣುಮಕ್ಕಳು ಉಪಸ್ಥಿತರಿದ್ದರು.

ಭೂತಾಯಿಯ ಮಡಿಲು ಸೇರಿದ ಭಾಗ್ಯವಂತ: ಮತ್ತೆ ಹುಟ್ಟಿ ಬನ್ನಿ ಅಪ್ಪು

ಪೊಲೀಸರು ಮೊಳಗಿಸಿದ ಶೋಕಗೀತೆ ಹಾಗೂ ರಾಷ್ಟ್ರಗೀತೆಯ ಬಳಿಕ ಅಗಲಿದ ನಟನಿಗೆ ಸರ್ಕಾರದ ಗೌರವ ಸಮರ್ಪಣಾ ಕಾರ್ಯಕ್ರಮ ಪೂರ್ಣಗೊಂಡಿತು. ನಂತರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಷ್ಪಾಲಂಕೃತ ಹಂಸತೋಲಿಕಾ ಪಲ್ಲಕ್ಕಿಯಲ್ಲಿ ಪುನೀತ್ ಪಾರ್ಥಿವ ಶರೀರವನ್ನಿರಿಸಿ ಮೂರು ಬಾರಿ ಪ್ರದಕ್ಷಿಣೆ ಮಾಡಿಸಿ, ಗುಂಡಿಯೊಳಗೆ ಶವ ಇಳಿಸಲಾಯಿತು.

ಪುನೀತ್ ಅವರಿಗೆ ಗಂಡುಮಕ್ಕಳಿಲ್ಲ. ಹೀಗಾಗಿ ರಾಘವೇಂದ್ರ ರಾಜ್‌ಕುಮಾರ್ ಪುತ್ರ ವಿನಯ್ ರಾಜಕುಮಾರ್ ಅಂತಿಮ ವಿಧಿವಿಧಾನವನ್ನು ನೆರವೇರಿಸಿದರು. ಪತಿಯ ನೆನೆದು ಪತ್ನಿ, ಮಕ್ಕಳು, ಸೋದರನ ನೆನೆದು ಶಿವರಾಜಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಬಂಧುವರ್ಗ ಬಿಕ್ಕಿ ಬಿಕ್ಕಿ ಕಣ್ಣೀರು ಸುರಿಸಿದರು. ಸ್ಟುಡಿಯೋದ ಆವರಣದಲ್ಲೆಡೆ 'ಮತ್ತೆ ಹುಟ್ಟಿಬಾ ಅಪ್ಪು' ಎಂಬ ಘೋಷಣೆಗಳು ಅನುರಣಿಸುತ್ತಿದ್ದವು.

ರಾಘವೇಂದ್ರ ರಾಜಕುಮಾರ್ ಅವರ ಪುತ್ರ, ಕುಟುಂಬಸ್ಥರು ಹಾಗು ಗಣ್ಯರು ಪುನೀತ್ ರಾಜ್‌ಕುಮಾರ್ ಅವರ ಮೃತದೇಹದ ಮೇಲೆ ಉಪ್ಪು, ಮಣ್ಣು ಸಮರ್ಪಿಸುವುದರೊಂದಿಗೆ ಕಲಾಲೋಕದ ತಾರೆ ಮಣ್ಣಲ್ಲಿ ಮಣ್ಣಾಗಿ ಭೂತಾಯಿಯೊಡಲು ಸೇರಿದರು. ಈ ಸಂದರ್ಭದಲ್ಲಂತೂ ನೆರೆದಿದ್ದವರ ಕಣ್ಣಾಲಿಗಳು ತೇವಗೊಂಡವು. ಹೃದಯ ಭಾರವಾಗಿದ್ದವು.

ಅಂತ್ಯಕ್ರಿಯೆಯಲ್ಲಿ ಗಣ್ಯಾತಿಗಣ್ಯರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಕೆ. ಗೋಪಾಲಯ್ಯ, ಆರ್.ಅಶೋಕ್, ಮುನಿರತ್ನ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಇದ್ದರು.

ಕುಟುಂಬಸ್ಥರಲ್ಲಿ ಪ್ರಮುಖರಾದ ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ, ಚಿತ್ರರಂಗದ ಹೆಸರಾಂತ ಕಲಾವಿದರಾದ ವಿ. ರವಿಚಂದ್ರನ್, ಶಶಿಕುಮಾರ್, ಉಪೇಂದ್ರ, ಜಗ್ಗೇಶ್, ಸುದೀಪ್, ದುನಿಯಾ ವಿಜಿ, ಗಣೇಶ್, ವಿಜಯ ರಾಘವೇಂದ್ರ, ಶ್ರೀ ಮುರಳಿ, ಸಾಧು ಕೋಕಿಲ, ಉಮಾಶ್ರೀ, ತಾರಾ ಅನುರಾಧಾ, ಶೃತಿ, ರಶ್ಮಿಕಾ ಮಂದಣ್ಣ, ರಚಿತಾ ರಾಮ್, ಚಿತ್ರೋದ್ಯಮದ ಗಣ್ಯರಾದ ಸಾರಾ ಗೋವಿಂದು, ರಾಕ್ ಲೈನ್ ವೆಂಕಟೇಶ್, ಅಭಿಮಾನಿಗಳ ಸಾಗರವೇ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರದ ಅಂತಿಮ ಕ್ಷಣಗಳಲ್ಲಿ ಭಾಗಿಯಾದರು.

ಲೋಹಿತ್ ಎಂಬ ಹೆಸರಿನಲ್ಲಿ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ಪುನೀತ್ ರಾಜಕುಮಾರ್ ಎಂಬ ತಾರೆ ಮಿಂಚಿ ಮರೆಯಾದರೂ, ಕನ್ನಡಿಗರ ಹೃದಯದಲ್ಲಿ ಮಾತ್ರ ಚಿರಸ್ಥಾಯಿಯಾಗಿ ನೆಲೆಸುತ್ತಾರೆ ಎಂಬುದಂತೂ ನಿಶ್ಚಿತ.

ಬೆಂಗಳೂರು: ಕನ್ನಡದ 'ರಾಜರತ್ನ', ಅಭಿಮಾನಿಗಳ ನಲ್ಮೆಯ 'ಅಪ್ಪು' ಇಂದು ಸೂರ್ಯೋದಯದ ಹೊತ್ತಲ್ಲಿ ಕಂಠೀರವ ಸ್ಟುಡಿಯೋದ ಆವರಣದಲ್ಲಿ ಭೂತಾಯಿಯ ಗರ್ಭ ಸೇರಿದರು. ಡಾ.ರಾಜ್ ಕುಮಾರ್ ಹಾಗು ಪಾರ್ವತಮ್ಮ ರಾಜ್‌ಕುಮಾರ್ ಅವರ ಸಮಾಧಿಯ ಸಮೀಪವೇ ಪುನೀತ್‌ ಮೃತದೇಹವನ್ನು ಮಣ್ಣು ಮಾಡಲಾಯಿತು.

ಭದ್ರತಾ ಕಾರಣಗಳ ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಮ್ಮತಿ ಪಡೆದು ಪ್ರಕಟಿಸಿದ ಸಮಯಕ್ಕೂ ಮೊದಲೇ ಶುಕ್ರವಾರ ಹೃದಯಸ್ತಂಭನದಿಂದ ಹಠಾತ್ ನಿಧನರಾದ ಯುವನಟನ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಮೊದಲು ಗಣ್ಯಾತಿಗಣ್ಯರು ಪಾರ್ಥಿವ ಶರೀರದ ಮೇಲೆ ಪುಷ್ಪಗುಚ್ಛ ಅರ್ಪಿಸಿದರು. ನಂತರ ಪೊಲೀಸ್ ವಾದ್ಯಗೋಷ್ಠಿಯಿಂದ ರಾಷ್ಟ್ರಗೀತೆ ಮೊಳಗಿತು. ಅದೇ ಸಂದರ್ಭದಲ್ಲಿ ಪೊಲೀಸರು ಮೂರು ಬಾರಿ ಕುಶಾಲತೋಪು ಸಿಡಿಸಿದರು. ತದನಂತರ, ಎರಡು ನಿಮಿಷಗಳ ಮೌನ ಆಚರಿಸಲಾಯಿತು. ಇದಾದ ಕೂಡಲೇ, ಮೃತದೇಹದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅವರ ಇಬ್ಬರು ಹೆಣ್ಣುಮಕ್ಕಳು ಉಪಸ್ಥಿತರಿದ್ದರು.

ಭೂತಾಯಿಯ ಮಡಿಲು ಸೇರಿದ ಭಾಗ್ಯವಂತ: ಮತ್ತೆ ಹುಟ್ಟಿ ಬನ್ನಿ ಅಪ್ಪು

ಪೊಲೀಸರು ಮೊಳಗಿಸಿದ ಶೋಕಗೀತೆ ಹಾಗೂ ರಾಷ್ಟ್ರಗೀತೆಯ ಬಳಿಕ ಅಗಲಿದ ನಟನಿಗೆ ಸರ್ಕಾರದ ಗೌರವ ಸಮರ್ಪಣಾ ಕಾರ್ಯಕ್ರಮ ಪೂರ್ಣಗೊಂಡಿತು. ನಂತರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಷ್ಪಾಲಂಕೃತ ಹಂಸತೋಲಿಕಾ ಪಲ್ಲಕ್ಕಿಯಲ್ಲಿ ಪುನೀತ್ ಪಾರ್ಥಿವ ಶರೀರವನ್ನಿರಿಸಿ ಮೂರು ಬಾರಿ ಪ್ರದಕ್ಷಿಣೆ ಮಾಡಿಸಿ, ಗುಂಡಿಯೊಳಗೆ ಶವ ಇಳಿಸಲಾಯಿತು.

ಪುನೀತ್ ಅವರಿಗೆ ಗಂಡುಮಕ್ಕಳಿಲ್ಲ. ಹೀಗಾಗಿ ರಾಘವೇಂದ್ರ ರಾಜ್‌ಕುಮಾರ್ ಪುತ್ರ ವಿನಯ್ ರಾಜಕುಮಾರ್ ಅಂತಿಮ ವಿಧಿವಿಧಾನವನ್ನು ನೆರವೇರಿಸಿದರು. ಪತಿಯ ನೆನೆದು ಪತ್ನಿ, ಮಕ್ಕಳು, ಸೋದರನ ನೆನೆದು ಶಿವರಾಜಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಬಂಧುವರ್ಗ ಬಿಕ್ಕಿ ಬಿಕ್ಕಿ ಕಣ್ಣೀರು ಸುರಿಸಿದರು. ಸ್ಟುಡಿಯೋದ ಆವರಣದಲ್ಲೆಡೆ 'ಮತ್ತೆ ಹುಟ್ಟಿಬಾ ಅಪ್ಪು' ಎಂಬ ಘೋಷಣೆಗಳು ಅನುರಣಿಸುತ್ತಿದ್ದವು.

ರಾಘವೇಂದ್ರ ರಾಜಕುಮಾರ್ ಅವರ ಪುತ್ರ, ಕುಟುಂಬಸ್ಥರು ಹಾಗು ಗಣ್ಯರು ಪುನೀತ್ ರಾಜ್‌ಕುಮಾರ್ ಅವರ ಮೃತದೇಹದ ಮೇಲೆ ಉಪ್ಪು, ಮಣ್ಣು ಸಮರ್ಪಿಸುವುದರೊಂದಿಗೆ ಕಲಾಲೋಕದ ತಾರೆ ಮಣ್ಣಲ್ಲಿ ಮಣ್ಣಾಗಿ ಭೂತಾಯಿಯೊಡಲು ಸೇರಿದರು. ಈ ಸಂದರ್ಭದಲ್ಲಂತೂ ನೆರೆದಿದ್ದವರ ಕಣ್ಣಾಲಿಗಳು ತೇವಗೊಂಡವು. ಹೃದಯ ಭಾರವಾಗಿದ್ದವು.

ಅಂತ್ಯಕ್ರಿಯೆಯಲ್ಲಿ ಗಣ್ಯಾತಿಗಣ್ಯರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಕೆ. ಗೋಪಾಲಯ್ಯ, ಆರ್.ಅಶೋಕ್, ಮುನಿರತ್ನ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಇದ್ದರು.

ಕುಟುಂಬಸ್ಥರಲ್ಲಿ ಪ್ರಮುಖರಾದ ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ, ಚಿತ್ರರಂಗದ ಹೆಸರಾಂತ ಕಲಾವಿದರಾದ ವಿ. ರವಿಚಂದ್ರನ್, ಶಶಿಕುಮಾರ್, ಉಪೇಂದ್ರ, ಜಗ್ಗೇಶ್, ಸುದೀಪ್, ದುನಿಯಾ ವಿಜಿ, ಗಣೇಶ್, ವಿಜಯ ರಾಘವೇಂದ್ರ, ಶ್ರೀ ಮುರಳಿ, ಸಾಧು ಕೋಕಿಲ, ಉಮಾಶ್ರೀ, ತಾರಾ ಅನುರಾಧಾ, ಶೃತಿ, ರಶ್ಮಿಕಾ ಮಂದಣ್ಣ, ರಚಿತಾ ರಾಮ್, ಚಿತ್ರೋದ್ಯಮದ ಗಣ್ಯರಾದ ಸಾರಾ ಗೋವಿಂದು, ರಾಕ್ ಲೈನ್ ವೆಂಕಟೇಶ್, ಅಭಿಮಾನಿಗಳ ಸಾಗರವೇ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರದ ಅಂತಿಮ ಕ್ಷಣಗಳಲ್ಲಿ ಭಾಗಿಯಾದರು.

ಲೋಹಿತ್ ಎಂಬ ಹೆಸರಿನಲ್ಲಿ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ಪುನೀತ್ ರಾಜಕುಮಾರ್ ಎಂಬ ತಾರೆ ಮಿಂಚಿ ಮರೆಯಾದರೂ, ಕನ್ನಡಿಗರ ಹೃದಯದಲ್ಲಿ ಮಾತ್ರ ಚಿರಸ್ಥಾಯಿಯಾಗಿ ನೆಲೆಸುತ್ತಾರೆ ಎಂಬುದಂತೂ ನಿಶ್ಚಿತ.

Last Updated : Oct 31, 2021, 4:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.