ETV Bharat / city

ಕಸಾಪ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಸರ್ದಾರ್ ಬಲ್ಜಿತ್ ಸಿಂಗ್ ನೇಮಕ - ಸರ್ದಾರ್ ಬಲ್ಜಿತ್ ಸಿಂಗ್

ಕನ್ನಡ ಸಾಹಿತ್ಯ ಪರಿಷತ್ತಿನ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಪಂಜಾಬ್ ಮೂಲದ ಸರ್ದಾರ್ ಬಲ್ಜಿತ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

Sardar Baljit Singh appointed as Minority Representative
ಕಸಾಪ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಸರ್ದಾರ್ ಬಲ್ಜಿತ್ ಸಿಂಗ್ ನೇಮಕ
author img

By

Published : Aug 6, 2022, 8:42 AM IST

ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಜಾನಪದಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ ಹಾಗೂ ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್​​ 107 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ.

ಪಂಜಾಬ್ ಮೂಲದ ಸಿಖ್ ಧರ್ಮದ ಸರ್ದಾರ್ ಬಲ್ಜಿತ್ ಸಿಂಗ್ ಅವರನ್ನು 'ಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿ'ಯಾಗಿ ನೇಮಕ ಮಾಡಲಾಗಿದೆ. ಸರ್ದಾರ್ ಬಲ್ಜಿತ್ ಸಿಂಗ್ ಮೂಲತಃ ಪಂಜಾಬ್​​ನವರಾಗಿದ್ದು, ಹುಟ್ಟಿದ್ದು ಬೆಂಗಳೂರಿನಲ್ಲಿ. ಕನ್ನಡ ಭಾಷೆಯ ಕುರಿತು ಅಪಾರ ಗೌರವವನ್ನು ಹೊಂದಿರುವ ಸರ್ದಾರ್ ಬಲ್ಜಿತ್ ಸಿಂಗ್ ಕನ್ನಡವನ್ನು ಕಲಿತು ನಿರರ್ಗಳವಾಗಿ ಮಾತನಾಡುತ್ತಾರೆ. ಕನ್ನಡದಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ. ಅದರೊಂದಿಗೆ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಸಂತೋಷದಿಂದ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸಾಹಿತ್ಯ ಪರಿಷತ್ ಆ್ಯಪ್​ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಪರಂಪರೆ ಮತ್ತು ಜಾನಪದಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ ಹಾಗೂ ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್​​ 107 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ.

ಪಂಜಾಬ್ ಮೂಲದ ಸಿಖ್ ಧರ್ಮದ ಸರ್ದಾರ್ ಬಲ್ಜಿತ್ ಸಿಂಗ್ ಅವರನ್ನು 'ಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿ'ಯಾಗಿ ನೇಮಕ ಮಾಡಲಾಗಿದೆ. ಸರ್ದಾರ್ ಬಲ್ಜಿತ್ ಸಿಂಗ್ ಮೂಲತಃ ಪಂಜಾಬ್​​ನವರಾಗಿದ್ದು, ಹುಟ್ಟಿದ್ದು ಬೆಂಗಳೂರಿನಲ್ಲಿ. ಕನ್ನಡ ಭಾಷೆಯ ಕುರಿತು ಅಪಾರ ಗೌರವವನ್ನು ಹೊಂದಿರುವ ಸರ್ದಾರ್ ಬಲ್ಜಿತ್ ಸಿಂಗ್ ಕನ್ನಡವನ್ನು ಕಲಿತು ನಿರರ್ಗಳವಾಗಿ ಮಾತನಾಡುತ್ತಾರೆ. ಕನ್ನಡದಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ. ಅದರೊಂದಿಗೆ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಸಿಖ್ ಸಮುದಾಯದ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಸಂತೋಷದಿಂದ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಮಹತ್ವದ ಜವಾಬ್ದಾರಿಯನ್ನು ನೀಡಿದೆ ಎಂದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸಾಹಿತ್ಯ ಪರಿಷತ್ ಆ್ಯಪ್​ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.