ETV Bharat / city

ಛತ್ರಪತಿ ಶಿವಾಜಿ ಪ್ರತಿಮೆಗೆ ಅಪಮಾನ ಪ್ರಕರಣ: ಏಳು ಮಂದಿ ಆರೋಪಿಗಳ ಬಂಧನ

author img

By

Published : Dec 19, 2021, 12:13 PM IST

Updated : Dec 19, 2021, 12:49 PM IST

ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗೆ‌ ಅಪಮಾನ ಮಾಡಿದ್ದ ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಚೇತನ್ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ.

accused arrested
ಆರೋಪಿಗಳ ಬಂಧನ

ಬೆಂಗಳೂರು: ನಗರದ ಸ್ಯಾಂಕಿ ಕೆರೆ ಬಳಿಯಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಚೇತನ್ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿದ್ದರಿಂದ ಕಳೆದ ಗುರುವಾರ ರಾತ್ರಿ ಚೇತನ್ ಗೌಡ ಹಾಗೂ ಆತನ ಸಹಚರರ ಗುಂಪು ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗೆ‌ ಅಪಮಾನ ಮಾಡಿದ್ದರು. ಈ‌ ಕೃತ್ಯ ಎಸಗಲು ನಾಲ್ಕು ದಿನಗಳ ಹಿಂದೆ ಸಂಚು ರೂಪಿಸಿದ್ದರು ಎಂದು ನಗರ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

ಈಟಿವಿ ಭಾರತದೊಂದಿಗೆ ನಗರ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್

ಚೇತನ್‌ ಕುಮಾರ್, ಮಾಜಿ ಶಾಸಕ ಟಿ.ನಾರಾಯಣ್ ಕುಮಾರ್ ಪುತ್ರ ಹಾಗೂ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ರಾಷ್ಟ್ರ ಅಧ್ಯಕ್ಷ ಗುರುದೇವ ನಾರಾಯಣ್ ಕುಮಾರ್, ವರುಣ್, ನವೀನ್ ಗೌಡ, ವಿನೋದ್, ಚೇತನ್ ಕುಮಾರ್, ಯೊಗೇಶ್ ಎಂಬುವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಸೋಮವಾರದವರೆಗೆ ನಿಷೇಧಾಜ್ಞೆ..

ಕೃತ್ಯದ ವಿವರಣೆ..

ನಾಲ್ಕು ದಿನಗಳ ಹಿಂದೆಯೇ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪಿಗಳು ಸೋಮವಾರ, ಮಂಗಳವಾರ ಸ್ಯಾಂಕಿ ಕೆರೆ ಬಳಿ ಬಂದು ಪರಿಶೀಲನೆ ನಡೆಸಿದ್ದರು. ಬುಧವಾರ ಮತ್ತೆ ಬಂದಾಗ ಗಸ್ತಿನಲ್ಲಿದ್ದ ಪೊಲೀಸರು ವಾಪಸ್ ಕಳುಹಿಸಿದ್ದರು‌. ಪೂರ್ವನಿಯೋಜಿತವಾಗಿ ಎತ್ತರದಲ್ಲಿರುವ ಶಿವಾಜಿ ಪ್ರತಿಮೆಗೆ ಬಳಿ ಏಣಿ ಸಹ ತಂದಿಟ್ಟಿದ್ದರು. ಅಂದುಕೊಂಡಂತೆ ಕಳೆದ ಗುರುವಾರ ರಾತ್ರಿ ಕಾರು, ಎರಡು ಆಟೋ ಹಾಗೂ ಒಂದು ಬೈಕಿನಲ್ಲಿ ಒಟ್ಟು 13 ಮಂದಿ ಕನ್ನಡಪರ ಕಾರ್ಯಕರ್ತರು ಕೃತ್ಯ ಎಸಗಿದ್ದಾರೆ. ಶಿವಾಜಿ ಪ್ರತಿಮೆಗೆ ವರುಣ್, ವಿನೋದ್ ಅವಮಾನ ಮಾಡಿದರೆ, ನವೀನ್ ಗೌಡ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ಎನ್ನಲಾಗ್ತಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಹಲವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಬಲೆ ಬೀಸಿದ್ದೇವೆ ಎಂದು ಡಿಸಿಪಿ ತಿಳಿಸಿದ್ದಾರೆ.

ಬೆಂಗಳೂರು: ನಗರದ ಸ್ಯಾಂಕಿ ಕೆರೆ ಬಳಿಯಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಚೇತನ್ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿದ್ದರಿಂದ ಕಳೆದ ಗುರುವಾರ ರಾತ್ರಿ ಚೇತನ್ ಗೌಡ ಹಾಗೂ ಆತನ ಸಹಚರರ ಗುಂಪು ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗೆ‌ ಅಪಮಾನ ಮಾಡಿದ್ದರು. ಈ‌ ಕೃತ್ಯ ಎಸಗಲು ನಾಲ್ಕು ದಿನಗಳ ಹಿಂದೆ ಸಂಚು ರೂಪಿಸಿದ್ದರು ಎಂದು ನಗರ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

ಈಟಿವಿ ಭಾರತದೊಂದಿಗೆ ನಗರ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್

ಚೇತನ್‌ ಕುಮಾರ್, ಮಾಜಿ ಶಾಸಕ ಟಿ.ನಾರಾಯಣ್ ಕುಮಾರ್ ಪುತ್ರ ಹಾಗೂ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ರಾಷ್ಟ್ರ ಅಧ್ಯಕ್ಷ ಗುರುದೇವ ನಾರಾಯಣ್ ಕುಮಾರ್, ವರುಣ್, ನವೀನ್ ಗೌಡ, ವಿನೋದ್, ಚೇತನ್ ಕುಮಾರ್, ಯೊಗೇಶ್ ಎಂಬುವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಸೋಮವಾರದವರೆಗೆ ನಿಷೇಧಾಜ್ಞೆ..

ಕೃತ್ಯದ ವಿವರಣೆ..

ನಾಲ್ಕು ದಿನಗಳ ಹಿಂದೆಯೇ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪಿಗಳು ಸೋಮವಾರ, ಮಂಗಳವಾರ ಸ್ಯಾಂಕಿ ಕೆರೆ ಬಳಿ ಬಂದು ಪರಿಶೀಲನೆ ನಡೆಸಿದ್ದರು. ಬುಧವಾರ ಮತ್ತೆ ಬಂದಾಗ ಗಸ್ತಿನಲ್ಲಿದ್ದ ಪೊಲೀಸರು ವಾಪಸ್ ಕಳುಹಿಸಿದ್ದರು‌. ಪೂರ್ವನಿಯೋಜಿತವಾಗಿ ಎತ್ತರದಲ್ಲಿರುವ ಶಿವಾಜಿ ಪ್ರತಿಮೆಗೆ ಬಳಿ ಏಣಿ ಸಹ ತಂದಿಟ್ಟಿದ್ದರು. ಅಂದುಕೊಂಡಂತೆ ಕಳೆದ ಗುರುವಾರ ರಾತ್ರಿ ಕಾರು, ಎರಡು ಆಟೋ ಹಾಗೂ ಒಂದು ಬೈಕಿನಲ್ಲಿ ಒಟ್ಟು 13 ಮಂದಿ ಕನ್ನಡಪರ ಕಾರ್ಯಕರ್ತರು ಕೃತ್ಯ ಎಸಗಿದ್ದಾರೆ. ಶಿವಾಜಿ ಪ್ರತಿಮೆಗೆ ವರುಣ್, ವಿನೋದ್ ಅವಮಾನ ಮಾಡಿದರೆ, ನವೀನ್ ಗೌಡ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದ ಎನ್ನಲಾಗ್ತಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಹಲವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಬಲೆ ಬೀಸಿದ್ದೇವೆ ಎಂದು ಡಿಸಿಪಿ ತಿಳಿಸಿದ್ದಾರೆ.

Last Updated : Dec 19, 2021, 12:49 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.