ETV Bharat / city

ಬಸನಗೌಡ ತುರುವಿಹಾಳಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ, ಎಸ್​.ಆರ್​.ಪಾಟೀಲ್​​​

author img

By

Published : May 2, 2021, 3:32 PM IST

ಕೊರೊನಾದಿಂದಾಗಿ ದೇಶ ಹಾಗೂ ರಾಜ್ಯ ಸೂತಕದ ಮನೆಯಾಗಿರುವುದರಿಂದ ಪಕ್ಷದ ಕಾರ್ಯರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕೆಂದು‌ ಕಾರ್ಯಕರ್ತರಲ್ಲಿ ಮನವಿ..

siddaramaiah-congratulated-basanagouda-turuvihal-for-victory
ಸಿದ್ದರಾಮಯ್ಯ, ಎಸ್​.ಆರ್​.ಪಾಟೀಲ್​​​

ಬೆಂಗಳೂರು : ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

  • ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು.

    ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಹೃದಯಪೂರ್ವಕ ಕೃತಜ್ಞತೆ ಗಳನ್ನು ಸಲ್ಲಿಸುತ್ತೇನೆ.
    1/2 pic.twitter.com/R2JSyFwnbI

    — Siddaramaiah (@siddaramaiah) May 2, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿದರುವ ಸಿದ್ದರಾಮಯ್ಯ ಅವರು, ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಸನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಮಸ್ಕಿಯಲ್ಲಿ ಬಸನಗೌಡ ತುರುವಿಹಾಳ ಗೆಲುವಿಗೆ ಶ್ರಮಿಸಿದ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕೊರೊನಾದಿಂದಾಗಿ ದೇಶ ಹಾಗೂ ರಾಜ್ಯ ಸೂತಕದ ಮನೆಯಾಗಿರುವುದರಿಂದ ಪಕ್ಷದ ಕಾರ್ಯರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕೆಂದು‌ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

  • ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು.

    ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಹೃದಯಪೂರ್ವಕ ಕೃತಜ್ಞತೆ ಗಳನ್ನು ಸಲ್ಲಿಸುತ್ತೇನೆ.
    1/2 pic.twitter.com/R2JSyFwnbI

    — Siddaramaiah (@siddaramaiah) May 2, 2021 " class="align-text-top noRightClick twitterSection" data=" ">

ತುರುವಿಹಾಳ್​​ಗೆ ಎಸ್​.ಆರ್​.ಪಾಟೀಲ್​​ ಅಭಿನಂದನೆ : ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮಸ್ಕಿ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಶ್ರಮಿಸಲಿದೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ.

ಕಳೆದ ಬಾರಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ನಂತರ ಆಮಿಷಕ್ಕೆ ಬಲಿಯಾಗಿ ಬಿಜೆಪಿ ಸೇರಿದ್ದ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಜನ ಬುದ್ಧಿ ಕಲಿಸಿದ್ದಾರೆ. ಈ ಚುನಾವಣೆ ಇಂತಹವರಿಗೆ ಪಾಠವಾಗಲಿ ಎಂದಿದ್ದಾರೆ.

ಅಡ್ಡದಾರಿ ಹಿಡಿದು ಗೆಲುವು ಸಾಧಿಸುವ ಬಿಜೆಪಿ ನಾಯಕರ ಪ್ರಯತ್ನಕ್ಕೆ ಸೋಲಾಗಿದೆ. ಹಣದ ಹೊಳೆಯನ್ನೇ ಹರಿಸಿದರೂ ಬಿಜೆಪಿಗೆ ಮತ ಹಾಕದೇ ಕಾಂಗ್ರೆಸ್ ಅಭ್ಯರ್ಥಿ ಪರ ನಿಂತ ಜನರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.

ಸೂಕ್ತ ವ್ಯವಸ್ಥೆ ಕಲ್ಪಿಸಿ : ರಾಜ್ಯದಲ್ಲಿ ಪ್ರತಿನಿತ್ಯ ಕೊರೊನಾ ಪ್ರಕರಣ ಹೆಚ್ಚುತ್ತಿವೆ. ಬೆಡ್, ಆಕ್ಸಿಜನ್ ಸಿಗದೆ ರೋಗಿಗಳು ಪರದಾಡುವಂತಾಗಿದೆ. ಸೂಕ್ತ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತರು ನರಳಾಡುತ್ತಿದ್ದಾರೆ.

ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ ಇಲ್ಲ ಎಂದು ಸರ್ಕಾರ ಹೇಳುತ್ತಿದೆಯಾದ್ರೂ ರಾಜ್ಯದ ಕೊರೋನಾ ಕರಾಳತೆ ಪ್ರತಿನಿತ್ಯ ಮಾಧ್ಯಮಗಳು ದೃಶ್ಯ ಸಮೇತ ವರದಿ ಬಿತ್ತರಿಸುತ್ತಿವೆ. ರಾಜ್ಯ ಸರ್ಕಾರ ಇನ್ನಾದರೂ ರೋಗಿಗಳಿಗೆ ಬೆಡ್, ಆಕ್ಸಿಜನ್ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಬೆಂಗಳೂರು : ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

  • ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು.

    ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಹೃದಯಪೂರ್ವಕ ಕೃತಜ್ಞತೆ ಗಳನ್ನು ಸಲ್ಲಿಸುತ್ತೇನೆ.
    1/2 pic.twitter.com/R2JSyFwnbI

    — Siddaramaiah (@siddaramaiah) May 2, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿದರುವ ಸಿದ್ದರಾಮಯ್ಯ ಅವರು, ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಸನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಮಸ್ಕಿಯಲ್ಲಿ ಬಸನಗೌಡ ತುರುವಿಹಾಳ ಗೆಲುವಿಗೆ ಶ್ರಮಿಸಿದ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕೊರೊನಾದಿಂದಾಗಿ ದೇಶ ಹಾಗೂ ರಾಜ್ಯ ಸೂತಕದ ಮನೆಯಾಗಿರುವುದರಿಂದ ಪಕ್ಷದ ಕಾರ್ಯರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕೆಂದು‌ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

  • ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು.

    ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಹೃದಯಪೂರ್ವಕ ಕೃತಜ್ಞತೆ ಗಳನ್ನು ಸಲ್ಲಿಸುತ್ತೇನೆ.
    1/2 pic.twitter.com/R2JSyFwnbI

    — Siddaramaiah (@siddaramaiah) May 2, 2021 " class="align-text-top noRightClick twitterSection" data=" ">

ತುರುವಿಹಾಳ್​​ಗೆ ಎಸ್​.ಆರ್​.ಪಾಟೀಲ್​​ ಅಭಿನಂದನೆ : ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮಸ್ಕಿ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಶ್ರಮಿಸಲಿದೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ.

ಕಳೆದ ಬಾರಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ನಂತರ ಆಮಿಷಕ್ಕೆ ಬಲಿಯಾಗಿ ಬಿಜೆಪಿ ಸೇರಿದ್ದ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಜನ ಬುದ್ಧಿ ಕಲಿಸಿದ್ದಾರೆ. ಈ ಚುನಾವಣೆ ಇಂತಹವರಿಗೆ ಪಾಠವಾಗಲಿ ಎಂದಿದ್ದಾರೆ.

ಅಡ್ಡದಾರಿ ಹಿಡಿದು ಗೆಲುವು ಸಾಧಿಸುವ ಬಿಜೆಪಿ ನಾಯಕರ ಪ್ರಯತ್ನಕ್ಕೆ ಸೋಲಾಗಿದೆ. ಹಣದ ಹೊಳೆಯನ್ನೇ ಹರಿಸಿದರೂ ಬಿಜೆಪಿಗೆ ಮತ ಹಾಕದೇ ಕಾಂಗ್ರೆಸ್ ಅಭ್ಯರ್ಥಿ ಪರ ನಿಂತ ಜನರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದಿದ್ದಾರೆ.

ಸೂಕ್ತ ವ್ಯವಸ್ಥೆ ಕಲ್ಪಿಸಿ : ರಾಜ್ಯದಲ್ಲಿ ಪ್ರತಿನಿತ್ಯ ಕೊರೊನಾ ಪ್ರಕರಣ ಹೆಚ್ಚುತ್ತಿವೆ. ಬೆಡ್, ಆಕ್ಸಿಜನ್ ಸಿಗದೆ ರೋಗಿಗಳು ಪರದಾಡುವಂತಾಗಿದೆ. ಸೂಕ್ತ ಚಿಕಿತ್ಸೆ ಸಿಗದೆ ಕೊರೊನಾ ಸೋಂಕಿತರು ನರಳಾಡುತ್ತಿದ್ದಾರೆ.

ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆ ಇಲ್ಲ ಎಂದು ಸರ್ಕಾರ ಹೇಳುತ್ತಿದೆಯಾದ್ರೂ ರಾಜ್ಯದ ಕೊರೋನಾ ಕರಾಳತೆ ಪ್ರತಿನಿತ್ಯ ಮಾಧ್ಯಮಗಳು ದೃಶ್ಯ ಸಮೇತ ವರದಿ ಬಿತ್ತರಿಸುತ್ತಿವೆ. ರಾಜ್ಯ ಸರ್ಕಾರ ಇನ್ನಾದರೂ ರೋಗಿಗಳಿಗೆ ಬೆಡ್, ಆಕ್ಸಿಜನ್ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.