ETV Bharat / city

ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ - ಪಿಎಸ್​ಐ ಅಕ್ರಮ ನೇಮಕಾತಿ ಪರೀಕ್ಷಾ ಪ್ರಕರಣ

ಪಿಎಸ್ಐ ನೇಮಕಾತಿ ಹಗರಣದ ಆರೋಪಿಗಳು ಬಂಧನವಾಗುತ್ತಿದ್ದಂತೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೂ ವಿರೋಧ ಪಕ್ಷದ ನಾಯಕರು ಒಬ್ಬೊಬ್ಬರಾಗಿ ಒತ್ತಾಯಿಸುತ್ತಿದ್ದಾರೆ. ಖರ್ಗೆ ನಂತರ ಇದೀಗ ಸಿದ್ದರಾಮಯ್ಯ ಅವರೂ ರಾಜೀನಾಮೆಗೆ ಆಗ್ರಹಿಸಿದ್ದಾರೆ.

Opposition leader Siddaramayya
ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Apr 30, 2022, 12:48 PM IST

Updated : Apr 30, 2022, 1:06 PM IST

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮ ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಸಚಿವ ಆರಗ ವಿರುದ್ಧ ಸಿದ್ದು ಕಿಡಿ.. ಕಿಡಿ: ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು‌ ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ 'ಚೌಕಿದಾರ'ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು. ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು, ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರ ಅವರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ ಎಂದಿದ್ದಾರೆ.

ಪಿಎಸ್ಐ ನೇಮಕಾತಿಗೆ ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ. ಮರುಪರೀಕ್ಷೆಯ ನಿರ್ಧಾರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಲಿಕ್ಕಾಗಿಯೇ? ಇಲ್ಲವೇ ಹಗರಣವನ್ನು ಮುಚ್ಚಿಹಾಕಿ ದೊಡ್ಡ ತಲೆಗಳನ್ನು ಉಳಿಸಲಿಕ್ಕಾಗಿಯೇ?

ಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ‌ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಪೋಟಕ ಸಂಗತಿಗಳೇನಿದೆ? ಈ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ಕೇಳಿದ್ದಾರೆ.

ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್‌ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ. ಭ್ರಷ್ಟಾಚಾರ, ಅಪ್ರಾಮಾಣಿಕತೆ ಮತ್ತು ನಿಷ್ಕ್ರಿಯತೆಯನ್ನು ಪ್ರಶ್ನಿಸದೇ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ- ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವುದಕ್ಕೆ ಪಿಎಸ್‌ಐ ನೇಮಕಾತಿ ಅಕ್ರಮ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: PSI ಅಕ್ರಮ ನೇಮಕಾತಿಗೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನ ಸಿಐಡಿಗೆ ಒದಗಿಸಲು ನಾನೇ ಪ್ರಿಯಾಂಕ್‌ ಖರ್ಗೆ ಬಳಿ ವಿನಂತಿಸಿದ್ದೆ.. ಆರಗ

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮ ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಸಚಿವ ಆರಗ ವಿರುದ್ಧ ಸಿದ್ದು ಕಿಡಿ.. ಕಿಡಿ: ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು‌ ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ 'ಚೌಕಿದಾರ'ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು. ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು, ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರ ಅವರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ ಎಂದಿದ್ದಾರೆ.

ಪಿಎಸ್ಐ ನೇಮಕಾತಿಗೆ ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ. ಮರುಪರೀಕ್ಷೆಯ ನಿರ್ಧಾರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಲಿಕ್ಕಾಗಿಯೇ? ಇಲ್ಲವೇ ಹಗರಣವನ್ನು ಮುಚ್ಚಿಹಾಕಿ ದೊಡ್ಡ ತಲೆಗಳನ್ನು ಉಳಿಸಲಿಕ್ಕಾಗಿಯೇ?

ಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ‌ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಪೋಟಕ ಸಂಗತಿಗಳೇನಿದೆ? ಈ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ಕೇಳಿದ್ದಾರೆ.

ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್‌ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ. ಭ್ರಷ್ಟಾಚಾರ, ಅಪ್ರಾಮಾಣಿಕತೆ ಮತ್ತು ನಿಷ್ಕ್ರಿಯತೆಯನ್ನು ಪ್ರಶ್ನಿಸದೇ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ- ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವುದಕ್ಕೆ ಪಿಎಸ್‌ಐ ನೇಮಕಾತಿ ಅಕ್ರಮ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: PSI ಅಕ್ರಮ ನೇಮಕಾತಿಗೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನ ಸಿಐಡಿಗೆ ಒದಗಿಸಲು ನಾನೇ ಪ್ರಿಯಾಂಕ್‌ ಖರ್ಗೆ ಬಳಿ ವಿನಂತಿಸಿದ್ದೆ.. ಆರಗ

Last Updated : Apr 30, 2022, 1:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.