ETV Bharat / city

ಇಂದಿನಿಂದ ಮಹಾನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ; ನಿಯಮ ಮೀರಿದರೆ ದಂಡವೆಷ್ಟು ಗೊತ್ತಾ?!

author img

By

Published : Jul 1, 2022, 6:59 AM IST

ಇಂದಿನಿಂದ ಮಹಾನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ನಿಯಮ ಮೀರಿದರೆ ದಂಡ ಬೀಳೋದು ಗ್ಯಾರೆಂಟಿಯಾಗಿದೆ. ಹೀಗಾಗಿ ಏಕ ಬಳಕೆ ಪ್ಲಾಸ್ಟಿಕ್​ ಬಳಸುವ ಮುನ್ನ ಎಚ್ಚರಿಕೆ ವಹಿಸಿ.

Single use plastic ban in the Bengaluru, Single use plastic ban from today, Single use plastic ban news, ಬೆಂಗಳೂರಿನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ, ಇಂದಿನಿಂದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ, ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಸುದ್ದಿ,
ಇಂದಿನಿಂದ ಮಹಾನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ

ಬೆಂಗಳೂರು: ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆ ಕಳೆದ ವರ್ಷವೇ ಜಾರಿಗೆ ಬಂದಿರುವ ಏಕ ಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಇಂದಿನಿಂದಲೇ (ಜು.1) ಕಟ್ಟುನಿಟ್ಟಾಗಿ ಆಚರಣೆಗೆ ತರಲು ಬಿಬಿಎಂಪಿ ತೀರ್ಮಾನಿಸಿದೆ. ವಾರದ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ವಿಭಾಗದ ಸಭೆ ನಡೆದಿದ್ದು, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಒಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

10 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಸಹ ಈ ಆದೇಶ ಜಾರಿಗೆ ಬಂದಿದ್ದು, ಕಟ್ಟುನಿಟ್ಟಾಗಿ ಆಚರಣೆಗೆ ಬಂದಿರಲಿಲ್ಲ. ಇದೀಗ ಜುಲೈ 1ರಿಂದಲೇ ಈ ಆದೇಶವನ್ನು ಬಿಬಿಎಂಪಿಯ ಎಲ್ಲಾ ಎಂಟು ವಲಯಗಳಲ್ಲಿಯೂ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.

ನಿಯಮ ಮೀರುವವರ ವಿರುದ್ಧ ಕಾನೂನು ರೀತ್ಯಾ ದಂಡ ವಿಧಿಸುವುದು ಅಥವಾ ಶಿಕ್ಷೆಗೆ ಒಳಪಡಿಸುವ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಲಿದೆ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸಿದರೆ ಅಥವಾ ಕಸ ರೂಪದಲ್ಲಿ ಹಾಕಿದರೆ ವ್ಯಕ್ತಿ ಮತ್ತು ಮನೆಗಳಿಗೆ 500 ರೂ ಮತ್ತು ಸಾಂಸ್ಥಿಕ ತ್ಯಾಜ್ಯ ಉತ್ಪಾದಕರಿಗೆ ರೂ 5,000 ದಂಡ ವಿಧಿಸಲಾಗುತ್ತದೆ.

ಭಾರತವು ಪ್ರತಿ ವರ್ಷ 3.5 ಮಿಲಿಯನ್​​ ಟನ್​​ನಷ್ಟು ಪ್ಲಾಸ್ಟಿಕ್​​ ತ್ಯಾಜ್ಯವನ್ನು ಹೊರ ಹಾಕುತ್ತದೆ. ಇದು ಕಳೆದ ಐದು ವರ್ಷಗಳಲ್ಲಿ ದ್ವಿಗುಣವಾಗಿದೆ. ಹೀಗಾಗಿ ಜುಲೈ 1 ರಿಂದ ಏಕ - ಬಳಕೆಯ ಪ್ಲಾಸ್ಟಿನ್ನು​​ ನಿಷೇಧಿಸಲಾಗುವುದು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದು, ಇವರ ಹೇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿಯೂ ಪ್ಲಾಸ್ಟಿಕ್ ನಿಷೇಧ ಚಿಂತನೆ ಮತ್ತೆ ತಲೆ ಎತ್ತಿದ್ದು ಬೆಂಗಳೂರು ನಗರದ ಮೂಲಕ ಆಚರಣೆಗೆ ಬರುತ್ತಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹೊರಡಿಸಿದ ಈ ಆದೇಶವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB) ಗಡಿ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಲು ಹೆಚ್ಚಿನ ಬಲ ನೀಡಿದಂತಾಗಿದೆ. ನಿಷೇಧದ ಬೆನ್ನಲ್ಲೇ ಅವುಗಳ ಉತ್ಪಾದನೆ, ವಿತರಣೆ, ಆಮದು, ಮಾರಾಟ, ದಾಸ್ತಾನು ಮತ್ತು ಬಳಕೆಯನ್ನು ನಿರ್ಬಂಧಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಸುಮಾರು 88 ಸಾವಿರ ಪ್ಲಾಸ್ಟಿಕ್‌ ಉತ್ಪಾದಕ ಘಟಕಗಳು ದಿವಾಳಿಯಾಗಲಿವೆ. ಈ ಘಟಕಗಳ 10 ಲಕ್ಷದಷ್ಟು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಅಖೀಲ ಭಾರತ ಪ್ಲಾಸ್ಟಿಕ್‌ ತಯಾರಕರ ಸಂಘ ಆತಂಕ ವ್ಯಕ್ತಪಡಿಸಿದೆ.

ಓದಿ: ಅನುಪಯುಕ್ತ ಪ್ಲಾಸ್ಟಿಕ್​ನಿಂದ ಪೆಟ್ರೋಲ್​ ಉತ್ಪಾದಕ ಯಂತ್ರ: ಜೈನ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕಠಿಣ ನಿರ್ಧಾರ: ಹಲವು ಕಾರಣಗಳಿಂದ ಕಳೆದ ಒಂದು ವರ್ಷಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾಧ್ಯವಾಗಿರಲಿಲ್ಲ. ಕರ್ನಾಟಕ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದು ಒಂದು ವರ್ಷವೇ ಕಳೆದಿದೆ. ಇದೀಗ ಈ ಸಂಬಂಧ ನಿರ್ಧಾರ ಕೈಗೊಂಡಿದ್ದು ನಿರ್ಧಾಕ್ಷಿಣ್ಯವಾಗಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಒಂದು ಬಾರಿ ಮಾತ್ರ ಬಳಕೆಗೆ ಯೋಗ್ಯವಾಗಿರುವ ಪ್ಲಾಸ್ಟಿಕ್ ವಸ್ತುಗಳನ್ನು ಜುಲೈ 1ರಿಂದ ನಿಷೇಧಿಸಲು ತೀರ್ಮಾನಿಸಲಾಗಿದೆ. ಇವುಗಳೆಂದರೆ ಪ್ಲಾಸ್ಟಿಕ್ ಕವರ್, ಸ್ಟ್ರಾಗಳು, ಕಟ್ಲೆರಿ, ಸಂಸ್ಕರಿತ ಆಹಾರದ ಪಾಕೆಟ್, ವ್ರಾಪರ್, ಕಾಟನ್ ಬಡ್ ಸ್ಟಿಕ್ ಇತ್ಯಾದಿಗಳು ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳಾಗಿವೆ.

ಅದರಲ್ಲೂ ನೊರೆಯುಕ್ತ ಪ್ಲಾಸ್ಟಿಕ್ ವಸ್ತುವಿನಿಂದ ಮಾಡಿದ ವಸ್ತುಗಳಾದ ಪ್ಲಾಸ್ಟಿಕ್ ಪ್ಲೇಟ್, ಕಪ್, ಪ್ಲಾಸ್ಟಿಕ್‌ ಕಡ್ಡಿ ಇರುವ ಧ್ವಜ, ಕ್ಯಾಂಡಿ, ಐಸ್‌ಕ್ರೀಂನ ಪ್ಲಾಸ್ಟಿಕ್‌ ಕಡ್ಡಿಗಳು, ಏಕಬಳಕೆಯ ಪ್ಲಾಸ್ಟಿಕ್‌ ಆಲಂಕಾರಿಕ ವಸ್ತುಗಳು, ಪ್ಲಾಸ್ಟಿಕ್‌ ತಟ್ಟೆ, ಲೋಟ, ಚಾಕು, ಪೋರ್ಕ್‌, ಚಮಚ, ಸಿಹಿ ತಿಂಡಿ ಡಬ್ಬಿಗಳು, ಸಿಗರೇಟ್‌ ಪ್ಯಾಕ್‌ನ ಪ್ಲಾಸ್ಟಿಕ್‌ ರ್ಯಾಪರ್‌, ಆಮಂತ್ರಣ ಪತ್ರಿಕೆ- ಗಿಫ್ಟ್ ರ್ಯಾಪರ್‌ಗಳು, 100 ಮೈಕ್ರಾನ್‌ಗಿಂತ ಕಡಿಮೆ ಇರುವ ಪಿವಿಸಿ ಪ್ಲಾಸ್ಟಿಕ್‌ ಬ್ಯಾನರ್‌ಗಳು, ಪ್ಲಾಸ್ಟಿಕ್‌ ಬ್ಯಾಗ್‌ಗಳನ್ನು ನಿಷೇಧಿಸಲಾಗಿದೆ. ಇದು ಇಂದಿನಿಂದ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.

ರಾಜಕೀಯ ಒತ್ತಡ?: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆ ಇಂಥದ್ದೊಂದು ನಿರ್ಧಾರವನ್ನು ಕೈಗೊಳ್ಳಲು ರಾಜಕೀಯ ಒತ್ತಡಗಳು ಕೇಳಿಬಂದಿವೆ ಎಂಬ ಮಾಹಿತಿ ಇದೆ. ಆದರೆ ಮುಂಬರುವ ದಿನಗಳಲ್ಲಿ ಹಲವು ಕಂಪನಿಗಳು ಮತ್ತು ಅಂಗಡಿ ಮಳಿಗೆಗಳಿಂದ ಮಾತ್ರವಲ್ಲದೆ ಪರ್ಯಾಯ ವ್ಯವಸ್ಥೆ ಇಲ್ಲದ ಹಿನ್ನೆಲೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗುವ ಸಾಧ್ಯತೆ ಇದೆ. ಇದಕ್ಕೆಲ್ಲ ಯಾವ ರೀತಿ ಪರಿಹಾರವನ್ನು ಬಿಬಿಎಂಪಿ ಕಂಡುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕು.

ಬೆಂಗಳೂರು: ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆ ಕಳೆದ ವರ್ಷವೇ ಜಾರಿಗೆ ಬಂದಿರುವ ಏಕ ಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಇಂದಿನಿಂದಲೇ (ಜು.1) ಕಟ್ಟುನಿಟ್ಟಾಗಿ ಆಚರಣೆಗೆ ತರಲು ಬಿಬಿಎಂಪಿ ತೀರ್ಮಾನಿಸಿದೆ. ವಾರದ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ವಿಭಾಗದ ಸಭೆ ನಡೆದಿದ್ದು, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಒಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

10 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಕಳೆದ ವರ್ಷ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಸಹ ಈ ಆದೇಶ ಜಾರಿಗೆ ಬಂದಿದ್ದು, ಕಟ್ಟುನಿಟ್ಟಾಗಿ ಆಚರಣೆಗೆ ಬಂದಿರಲಿಲ್ಲ. ಇದೀಗ ಜುಲೈ 1ರಿಂದಲೇ ಈ ಆದೇಶವನ್ನು ಬಿಬಿಎಂಪಿಯ ಎಲ್ಲಾ ಎಂಟು ವಲಯಗಳಲ್ಲಿಯೂ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.

ನಿಯಮ ಮೀರುವವರ ವಿರುದ್ಧ ಕಾನೂನು ರೀತ್ಯಾ ದಂಡ ವಿಧಿಸುವುದು ಅಥವಾ ಶಿಕ್ಷೆಗೆ ಒಳಪಡಿಸುವ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಲಿದೆ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸಿದರೆ ಅಥವಾ ಕಸ ರೂಪದಲ್ಲಿ ಹಾಕಿದರೆ ವ್ಯಕ್ತಿ ಮತ್ತು ಮನೆಗಳಿಗೆ 500 ರೂ ಮತ್ತು ಸಾಂಸ್ಥಿಕ ತ್ಯಾಜ್ಯ ಉತ್ಪಾದಕರಿಗೆ ರೂ 5,000 ದಂಡ ವಿಧಿಸಲಾಗುತ್ತದೆ.

ಭಾರತವು ಪ್ರತಿ ವರ್ಷ 3.5 ಮಿಲಿಯನ್​​ ಟನ್​​ನಷ್ಟು ಪ್ಲಾಸ್ಟಿಕ್​​ ತ್ಯಾಜ್ಯವನ್ನು ಹೊರ ಹಾಕುತ್ತದೆ. ಇದು ಕಳೆದ ಐದು ವರ್ಷಗಳಲ್ಲಿ ದ್ವಿಗುಣವಾಗಿದೆ. ಹೀಗಾಗಿ ಜುಲೈ 1 ರಿಂದ ಏಕ - ಬಳಕೆಯ ಪ್ಲಾಸ್ಟಿನ್ನು​​ ನಿಷೇಧಿಸಲಾಗುವುದು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದು, ಇವರ ಹೇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿಯೂ ಪ್ಲಾಸ್ಟಿಕ್ ನಿಷೇಧ ಚಿಂತನೆ ಮತ್ತೆ ತಲೆ ಎತ್ತಿದ್ದು ಬೆಂಗಳೂರು ನಗರದ ಮೂಲಕ ಆಚರಣೆಗೆ ಬರುತ್ತಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹೊರಡಿಸಿದ ಈ ಆದೇಶವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB) ಗಡಿ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಲು ಹೆಚ್ಚಿನ ಬಲ ನೀಡಿದಂತಾಗಿದೆ. ನಿಷೇಧದ ಬೆನ್ನಲ್ಲೇ ಅವುಗಳ ಉತ್ಪಾದನೆ, ವಿತರಣೆ, ಆಮದು, ಮಾರಾಟ, ದಾಸ್ತಾನು ಮತ್ತು ಬಳಕೆಯನ್ನು ನಿರ್ಬಂಧಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಸುಮಾರು 88 ಸಾವಿರ ಪ್ಲಾಸ್ಟಿಕ್‌ ಉತ್ಪಾದಕ ಘಟಕಗಳು ದಿವಾಳಿಯಾಗಲಿವೆ. ಈ ಘಟಕಗಳ 10 ಲಕ್ಷದಷ್ಟು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಅಖೀಲ ಭಾರತ ಪ್ಲಾಸ್ಟಿಕ್‌ ತಯಾರಕರ ಸಂಘ ಆತಂಕ ವ್ಯಕ್ತಪಡಿಸಿದೆ.

ಓದಿ: ಅನುಪಯುಕ್ತ ಪ್ಲಾಸ್ಟಿಕ್​ನಿಂದ ಪೆಟ್ರೋಲ್​ ಉತ್ಪಾದಕ ಯಂತ್ರ: ಜೈನ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕಠಿಣ ನಿರ್ಧಾರ: ಹಲವು ಕಾರಣಗಳಿಂದ ಕಳೆದ ಒಂದು ವರ್ಷಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾಧ್ಯವಾಗಿರಲಿಲ್ಲ. ಕರ್ನಾಟಕ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬಂದು ಒಂದು ವರ್ಷವೇ ಕಳೆದಿದೆ. ಇದೀಗ ಈ ಸಂಬಂಧ ನಿರ್ಧಾರ ಕೈಗೊಂಡಿದ್ದು ನಿರ್ಧಾಕ್ಷಿಣ್ಯವಾಗಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಒಂದು ಬಾರಿ ಮಾತ್ರ ಬಳಕೆಗೆ ಯೋಗ್ಯವಾಗಿರುವ ಪ್ಲಾಸ್ಟಿಕ್ ವಸ್ತುಗಳನ್ನು ಜುಲೈ 1ರಿಂದ ನಿಷೇಧಿಸಲು ತೀರ್ಮಾನಿಸಲಾಗಿದೆ. ಇವುಗಳೆಂದರೆ ಪ್ಲಾಸ್ಟಿಕ್ ಕವರ್, ಸ್ಟ್ರಾಗಳು, ಕಟ್ಲೆರಿ, ಸಂಸ್ಕರಿತ ಆಹಾರದ ಪಾಕೆಟ್, ವ್ರಾಪರ್, ಕಾಟನ್ ಬಡ್ ಸ್ಟಿಕ್ ಇತ್ಯಾದಿಗಳು ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳಾಗಿವೆ.

ಅದರಲ್ಲೂ ನೊರೆಯುಕ್ತ ಪ್ಲಾಸ್ಟಿಕ್ ವಸ್ತುವಿನಿಂದ ಮಾಡಿದ ವಸ್ತುಗಳಾದ ಪ್ಲಾಸ್ಟಿಕ್ ಪ್ಲೇಟ್, ಕಪ್, ಪ್ಲಾಸ್ಟಿಕ್‌ ಕಡ್ಡಿ ಇರುವ ಧ್ವಜ, ಕ್ಯಾಂಡಿ, ಐಸ್‌ಕ್ರೀಂನ ಪ್ಲಾಸ್ಟಿಕ್‌ ಕಡ್ಡಿಗಳು, ಏಕಬಳಕೆಯ ಪ್ಲಾಸ್ಟಿಕ್‌ ಆಲಂಕಾರಿಕ ವಸ್ತುಗಳು, ಪ್ಲಾಸ್ಟಿಕ್‌ ತಟ್ಟೆ, ಲೋಟ, ಚಾಕು, ಪೋರ್ಕ್‌, ಚಮಚ, ಸಿಹಿ ತಿಂಡಿ ಡಬ್ಬಿಗಳು, ಸಿಗರೇಟ್‌ ಪ್ಯಾಕ್‌ನ ಪ್ಲಾಸ್ಟಿಕ್‌ ರ್ಯಾಪರ್‌, ಆಮಂತ್ರಣ ಪತ್ರಿಕೆ- ಗಿಫ್ಟ್ ರ್ಯಾಪರ್‌ಗಳು, 100 ಮೈಕ್ರಾನ್‌ಗಿಂತ ಕಡಿಮೆ ಇರುವ ಪಿವಿಸಿ ಪ್ಲಾಸ್ಟಿಕ್‌ ಬ್ಯಾನರ್‌ಗಳು, ಪ್ಲಾಸ್ಟಿಕ್‌ ಬ್ಯಾಗ್‌ಗಳನ್ನು ನಿಷೇಧಿಸಲಾಗಿದೆ. ಇದು ಇಂದಿನಿಂದ ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.

ರಾಜಕೀಯ ಒತ್ತಡ?: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆ ಇಂಥದ್ದೊಂದು ನಿರ್ಧಾರವನ್ನು ಕೈಗೊಳ್ಳಲು ರಾಜಕೀಯ ಒತ್ತಡಗಳು ಕೇಳಿಬಂದಿವೆ ಎಂಬ ಮಾಹಿತಿ ಇದೆ. ಆದರೆ ಮುಂಬರುವ ದಿನಗಳಲ್ಲಿ ಹಲವು ಕಂಪನಿಗಳು ಮತ್ತು ಅಂಗಡಿ ಮಳಿಗೆಗಳಿಂದ ಮಾತ್ರವಲ್ಲದೆ ಪರ್ಯಾಯ ವ್ಯವಸ್ಥೆ ಇಲ್ಲದ ಹಿನ್ನೆಲೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗುವ ಸಾಧ್ಯತೆ ಇದೆ. ಇದಕ್ಕೆಲ್ಲ ಯಾವ ರೀತಿ ಪರಿಹಾರವನ್ನು ಬಿಬಿಎಂಪಿ ಕಂಡುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.