ETV Bharat / city

ಡಿ.19ಕ್ಕೆ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ

ಡಿಸೆಂಬರ್ 19ರಂದು ಬೆಂಗಳೂರಿನ ಕೋರಮಂಗಲದ ಕಲಾದ್ವಾರಕಾ ಸಭಾಂಗಣದಲ್ಲಿ ಬಿಜೆಪಿಯ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಲಿದೆ.

author img

By

Published : Dec 17, 2020, 4:05 AM IST

State bjp raitha morcha Executive meeting on 19th december
ಘನತ್ಯಾಜ್ಯ ವಿಶೇಷ ಆಯುಕ್ತ ರಂದೀಪ್

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್‌ ಆಗಿದೆ. ರಾಜ್ಯಸಭಾ ಸದಸ್ಯರೂ ಆದ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಧ್ಯಕ್ಷತೆಯಲ್ಲಿ ಡಿಸೆಂಬರ್ 19ರಂದು ಬೆಂಗಳೂರಿನ ಕೋರಮಂಗಲದ ಕಲಾದ್ವಾರಕಾ ಸಭಾಂಗಣದಲ್ಲಿ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೊಳಿಸಿದ ರೈತಪರ ಕೃಷಿ ಸುಧಾರಣಾ ಮಸೂದೆಗಳನ್ನು ಬೆಂಬಲಿಸಿ ಅಭಿನಂದಿಸುವ ನಿರ್ಣಯಗಳನ್ನು ಮಂಡಿಸಿ ಅನುಮೋದಿಸಲಾಗುವುದು ಮತ್ತು ರೈತರ ವಾರ್ಷಿಕ ವರಮಾನ ದ್ವಿಗುಣಗೊಳಿಸಿ ರೈತರ ಆರ್ಥಿಕ ಸಬಲೀಕರಣಕ್ಕಾಗಿ ತಂದ ಕಾಯ್ದೆಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಮೀರ್ ಕಾಗಲ್ಕರ್ ನಡೆಸಿಕೊಡಲಿದ್ದಾರೆ.

ಓದಿ: ನಿಗಮ-ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ, ರಾಜ್ಯ ಸಚಿವ ದರ್ಜೆ ಸ್ಥಾನಮಾನ

ಕೇಂದ್ರ ಸರ್ಕಾರ ಇತ್ತೀಚೆಗೆ ದೇಶದಲ್ಲಿ 10,000 ಎಫ್‌ಪಿಒಗಳ (ಕೃಷಿ ಉತ್ಪನ್ನ ಸಂಘ) ರಚನೆ ಗುರಿ ಹೊಂದಿದ್ದು, ಕರ್ನಾಟಕದಲ್ಲಿ ಎಫ್‌ಪಿಒ ರಚನೆಯ ಕುರಿತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾರ್ಗದರ್ಶನ ನೀಡಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾರ್ಗದರ್ಶನ ನೀಡಲಿದ್ದಾರೆ ಎಂದು ಎನ್ನಲಾಗಿದೆ.

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ಫಿಕ್ಸ್‌ ಆಗಿದೆ. ರಾಜ್ಯಸಭಾ ಸದಸ್ಯರೂ ಆದ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಧ್ಯಕ್ಷತೆಯಲ್ಲಿ ಡಿಸೆಂಬರ್ 19ರಂದು ಬೆಂಗಳೂರಿನ ಕೋರಮಂಗಲದ ಕಲಾದ್ವಾರಕಾ ಸಭಾಂಗಣದಲ್ಲಿ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೊಳಿಸಿದ ರೈತಪರ ಕೃಷಿ ಸುಧಾರಣಾ ಮಸೂದೆಗಳನ್ನು ಬೆಂಬಲಿಸಿ ಅಭಿನಂದಿಸುವ ನಿರ್ಣಯಗಳನ್ನು ಮಂಡಿಸಿ ಅನುಮೋದಿಸಲಾಗುವುದು ಮತ್ತು ರೈತರ ವಾರ್ಷಿಕ ವರಮಾನ ದ್ವಿಗುಣಗೊಳಿಸಿ ರೈತರ ಆರ್ಥಿಕ ಸಬಲೀಕರಣಕ್ಕಾಗಿ ತಂದ ಕಾಯ್ದೆಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಮೀರ್ ಕಾಗಲ್ಕರ್ ನಡೆಸಿಕೊಡಲಿದ್ದಾರೆ.

ಓದಿ: ನಿಗಮ-ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ, ರಾಜ್ಯ ಸಚಿವ ದರ್ಜೆ ಸ್ಥಾನಮಾನ

ಕೇಂದ್ರ ಸರ್ಕಾರ ಇತ್ತೀಚೆಗೆ ದೇಶದಲ್ಲಿ 10,000 ಎಫ್‌ಪಿಒಗಳ (ಕೃಷಿ ಉತ್ಪನ್ನ ಸಂಘ) ರಚನೆ ಗುರಿ ಹೊಂದಿದ್ದು, ಕರ್ನಾಟಕದಲ್ಲಿ ಎಫ್‌ಪಿಒ ರಚನೆಯ ಕುರಿತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾರ್ಗದರ್ಶನ ನೀಡಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾರ್ಗದರ್ಶನ ನೀಡಲಿದ್ದಾರೆ ಎಂದು ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.