ETV Bharat / city

ರಾಜ್ಯ ಬಜೆಟ್, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ 4,552 ಕೋಟಿ ರೂ ಘೋಷಣೆ - ಮಂಗಗಳ ಪುನರ್ವಸತಿಗಾಗಿ 5 ವರ್ಷಗಳಿಗೆ ಒಟ್ಟಾರೆ 6.25 ಕೋಟಿ

ಕರ್ನಾಟಕ ರಾಜ್ಯವು ಪರಿಸರ ಕಾಳಜಿಯ ಜವಾಬ್ದಾರಿ ಹೊಂದಿದ್ದು, ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಪರಿಸರಾತ್ಮಕ ಅಂಶಗಳು ಸೇರಿರುವುದನ್ನು ಅಳೆಯಲು ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಿಂದ ಹಸಿರು ಸೂಚಿಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ರಾಜ್ಯ ಬಜೆಟ್​​ನಲ್ಲಿ ತಿಳಿಸಲಾಗಿದೆ.

karnataka-2020-cm-bsy-to-present-his-7th-budget
ರಾಜ್ಯ ಬಜೆಟ್, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ 4,552 ಕೋಟಿ ಘೋಷಣೆ...!
author img

By

Published : Mar 5, 2020, 5:24 PM IST

ಬೆಂಗಳೂರು: ಕರ್ನಾಟಕ ರಾಜ್ಯವು ಪರಿಸರದ ಕಾಳಜಿಯ ಜವಾಬ್ದಾರಿಯನ್ನು ಹೊಂದಿದ್ದು, ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಪರಿಸರಾತ್ಮಕ ಅಂಶಗಳು ಸೇರಿರುವುದನ್ನು ಅಳೆಯಲು ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಿಂದ ಹಸಿರು ಸೂಚಿಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ರಾಜ್ಯ ಬಜೆಟ್​​ನಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿರುವ ಶೋಲಾ ಅರಣ್ಯಗಳನ್ನು ಸರ್ವೇಕ್ಷಣೆ ಮಾಡಿ ಇಲ್ಲಿನ ಜೀವ ವೈವಿಧ್ಯತೆಯನ್ನು ಕಾಪಾಡಿ ಸಂರಕ್ಷಿಸಲು 5 ಕೋಟಿ ರೂ.ಗಳ ಅನುದಾನ, ಅಳಿವಿನಂಚಿನ ವನ್ಯಜೀವಿ ಪ್ರಭೇದಗಳ ಸಂರಕ್ಷಣೆಗೆ ಅಗತ್ಯ ಕ್ರಮ, ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಮಿನಿ ಮೃಗಾಲಯವನ್ನು ಉನ್ನತೀಕರಿಸಲು 5 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ಮೂಲಕ ನೀಡಲಾಗಿದೆ.

ರಾಮನಗರ ಜಿಲ್ಲೆಯ ರಣಹದ್ದು ಧಾಮದಲ್ಲಿ ಸಂತಾನೋತ್ಪತ್ತಿ ಕೇಂದ್ರವನ್ನು 2 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆ, ಮಂಗಗಳ ಪುನರ್ವಸತಿಗಾಗಿ 5 ವರ್ಷಗಳಿಗೆ ಒಟ್ಟಾರೆ 6.25 ಕೋಟಿ ರೂ, ರಾಜ್ಯದ ಮೊದಲ ಕಡಲಧಾಮವನ್ನು (marine eco park) ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ಥಾಪಿಸಲು ಆಯವ್ಯಯದಲ್ಲಿ ವಿಶೇಷ ಒತ್ತು ನೀಡಲಾಗಿದೆ.

2020-21ನೇ ಸಾಲಿನಲ್ಲಿ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ ಒಟ್ಟಾರೆಯಾಗಿ 4,552 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯವು ಪರಿಸರದ ಕಾಳಜಿಯ ಜವಾಬ್ದಾರಿಯನ್ನು ಹೊಂದಿದ್ದು, ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಪರಿಸರಾತ್ಮಕ ಅಂಶಗಳು ಸೇರಿರುವುದನ್ನು ಅಳೆಯಲು ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಿಂದ ಹಸಿರು ಸೂಚಿಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ರಾಜ್ಯ ಬಜೆಟ್​​ನಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿರುವ ಶೋಲಾ ಅರಣ್ಯಗಳನ್ನು ಸರ್ವೇಕ್ಷಣೆ ಮಾಡಿ ಇಲ್ಲಿನ ಜೀವ ವೈವಿಧ್ಯತೆಯನ್ನು ಕಾಪಾಡಿ ಸಂರಕ್ಷಿಸಲು 5 ಕೋಟಿ ರೂ.ಗಳ ಅನುದಾನ, ಅಳಿವಿನಂಚಿನ ವನ್ಯಜೀವಿ ಪ್ರಭೇದಗಳ ಸಂರಕ್ಷಣೆಗೆ ಅಗತ್ಯ ಕ್ರಮ, ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಮಿನಿ ಮೃಗಾಲಯವನ್ನು ಉನ್ನತೀಕರಿಸಲು 5 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ಮೂಲಕ ನೀಡಲಾಗಿದೆ.

ರಾಮನಗರ ಜಿಲ್ಲೆಯ ರಣಹದ್ದು ಧಾಮದಲ್ಲಿ ಸಂತಾನೋತ್ಪತ್ತಿ ಕೇಂದ್ರವನ್ನು 2 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆ, ಮಂಗಗಳ ಪುನರ್ವಸತಿಗಾಗಿ 5 ವರ್ಷಗಳಿಗೆ ಒಟ್ಟಾರೆ 6.25 ಕೋಟಿ ರೂ, ರಾಜ್ಯದ ಮೊದಲ ಕಡಲಧಾಮವನ್ನು (marine eco park) ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ಥಾಪಿಸಲು ಆಯವ್ಯಯದಲ್ಲಿ ವಿಶೇಷ ಒತ್ತು ನೀಡಲಾಗಿದೆ.

2020-21ನೇ ಸಾಲಿನಲ್ಲಿ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ ಒಟ್ಟಾರೆಯಾಗಿ 4,552 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.