ಬೆಂಗಳೂರು: ರಾಜ್ಯ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ (ಮೈಸೂರ್ ಸ್ಯಾಂಡಲ್) ವತಿಯಿಂದ 15.91 ಕೋಟಿ ರೂ. ಮೊತ್ತದ ಡಿವಿಡೆಂಡ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂ.ಗಳ ದೇಣಿಗೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಸಲ್ಲಿಸಲಾಯಿತು.
ವಿಧಾನಸೌಧದ ಸಿಎಂ ಕಚೇರಿಗೆ ಆಗಮಿಸಿದ ರಾಜ್ಯ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ ನಿಯೋಗ ಸಿಎಂಗೆ ಡಿವಿಡೆಂಡ್ ಹಾಗೂ ಸಿಎಂ ಪರಿಹಾರ ನಿಧಿಗೆ ಚೆಕ್ ಸಲ್ಲಿಸಿತು. ಈ ವೇಳೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಂಸ್ಥೆಯ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮತ್ತಿತರರು ಉಪಸ್ಥಿತರಿದ್ದರು.