ಬೆಂಗಳೂರು: ಖಾಸಗಿ ಟಿವಿ ಚಾನಲ್ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ. ಇದರಲ್ಲಿ ಪರಿಣಿತರೂ ಇದ್ದಾರೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿದೆ.
ಖಾಸಗಿ ಟಿವಿ ಚಾನಲ್ಗಳ ಕಾರ್ಯಕ್ರಮಕ್ಕೆ ಕಡಿವಾಣ ಹಾಕುವಂತೆ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಖಾಸಗಿ ಟಿವಿ ಚಾನಲ್ ಕಾರ್ಯಕ್ರಮಗಳ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕು ಎಂದು 2018 ರ ಫೆ.19ರಂದು ಕೇಂದ್ರ ಸರ್ಕಾರವು ಕೇಬಲ್ ಟೆಲಿವಿಷನ್ ನೆಟ್ವರ್ಕ್ಸ್ ರೆಗ್ಯೂಲೇಷನ್ಸ್ ಕಾಯ್ದೆ-1995ರ ಅಡಿ ಎಲ್ಲ ರಾಜ್ಯಗಳಿಗೆ ನಿರ್ದೇಶಿದೆ. ಆದರೆ, ಅದು ಸರಿಯಾದ ರೀತಿ ಪಾಲನೆಯಾಗಿಲ್ಲ ಎಂದು ಅರ್ಜಿದಾರರು ಕಳೆದ ವಿಚಾರಣೆ ವೇಳೆ ನ್ಯಾಯಲಯದ ಗಮನಕ್ಕೆ ತಂದಿದ್ದರು.
ಹೀಗಾಗಿ ಹೈಕೋರ್ಟ್, ಸರ್ಕಾರ ಕೈಗೊಂಡ ಕ್ರಮದ ಕುರಿತು ವಿವರಣೆ ನೀಡುವಂತೆ ಹೇಳಿತ್ತು. ಆದ್ದರಿಂದ ಇಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶದಂತೆ ಖಾಸಗಿ ಟಿವಿ ಚಾನಲ್ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ ಎಂದು ಪ್ರಮಾಣ ಪತ್ರದ ಮೂಲಕ ತಿಳಿಸಿದರು.