ETV Bharat / city

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ಬೇಡ, ಎಸ್​ಐಟಿಗೆ ಒಪ್ಪಿಸಿ: ರಮೇಶ್​​ ಬಾಬು ಒತ್ತಾಯ

ಫೋನ್​ ಕದ್ದಾಲಿಕೆ ಆರೋಪ ಪ್ರಕರಣವನ್ನು ಎಸ್​ಐಟಿ ತನಿಖೆಗೆ ವಹಿಸಬೇಕು ಎಂದು ಜೆಡಿಎಸ್​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು, ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

author img

By

Published : Aug 28, 2019, 4:52 PM IST

ರಮೇಶ್ ಬಾಬು

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಆರೋಪ ಪ್ರಕರಣವನ್ನು ಎಸ್​ಐಟಿ ತನಿಖೆಗೆ ವಹಿಸಬೇಕೆಂದು ಜೆಡಿಎಸ್​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲೂ ಟೆಲಿಫೋನ್ ಕದ್ದಾಲಿಕೆ ಆಗ್ತಿದೆ. ಜೆಡಿಎಸ್ ಹಾಗೂ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡ್ತಿದ್ದಾರೆ. ಇಂಟೆಲಿಜೆನ್ಸ್ ಡಿಪಾರ್ಟ್​ಮೆಂಟ್​ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ನನಗೂ ಕೂಡ ಅನಾಮಿಕರೊಬ್ಬರು ಪತ್ರಕರ್ತರ ಹೆಸರಿನಲ್ಲಿ ಕರೆ ಮಾಡಿದ್ರು. ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ದೇವೇಗೌಡರ ಅಭಿಪ್ರಾಯ ಏನು ಅಂತ ಒತ್ತಾಯ ಮಾಡಿ ಕೇಳಿದ್ರು. ಅದಕ್ಕೆ ನಾನು ಅವರನ್ನೇ ಕೇಳಿ ಅಂತ ಹೇಳಿದ್ದೆ. ಸಂಶಯ ಬಂದು ಆ ನಂಬರ್ ಬಗ್ಗೆ ಪರಿಶೀಲಿಸಿದಾಗ ಅದು ಇಂಟೆಲಿಜೆನ್ಸ್​ ಡಿಪಾರ್ಟ್​ಮೆಂಟಿನಿಂದ ಬಂದಿದ್ದು ಎಂದು ಗೊತ್ತಾಯಿತು ಎಂದು ವಿವರಿಸಿದರು. ಪತ್ರಕರ್ತರ ಹೆಸರಿನಲ್ಲಿ ಇವರು ಯಾಕೆ ಫೋನ್ ಮಾಡಬೇಕು ಎಂದು ಪ್ರಶ್ನಿಸಿದ ಅವರು, ಪ್ರತಿಪಕ್ಷದವರನ್ನು ಮಣಿಸಲು ಇಂಟೆಲಿಜೆನ್ಸ್​ ಡಿಪಾರ್ಟ್​ಮೆಂಟ್​ ಬಳಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ, ಪೊಲೀಸರು ಇದುವರೆಗೂ ಎಫ್​ಐಆರ್ ದಾಖಲಿಸಿಲ್ಲ. ಹಾಗಾಗಿ, ತನಿಖೆಗೆ ಆದೇಶಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದು ಆಗ್ರಹಿಸಿದ್ದೇನೆ ಎಂದು ಹೇಳಿದರು.

ಇನ್ನು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿರೋದೇ ತಪ್ಪು. ಹಲವಾರು ಪ್ರಕರಣಗಳಲ್ಲಿ ಸಿಬಿಐ ಪ್ರತಿವಾದಿಯಾಗಿದೆ. ಹೀಗಿರುವಾಗ ತನಿಖೆ ನಡೆಸಲು ಸಿಬಿಐಗೆ ಕೊಡೋಕೆ ಹೇಗೆ ಸಾಧ್ಯ? ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಮಾನದಂಡ ರಚನೆ ಮಾಡಬೇಕೆಂದು ಹಿಂದೆಯೇ ನಿರ್ದೇಶನ ನೀಡಿದೆ. ಆದರೆ ಯಾವುದೇ ಸರ್ಕಾರ ಸಮಿತಿ ರಚನೆ ಮಾಡಿ ಗೈಡ್​ಲೈನ್ ಮಾಡಿಲ್ಲ ಎಂದರು.

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆಯವರ ಫೋನ್ ಕೂಡ ಟ್ಯಾಪಿಂಗ್ ಆಗಿತ್ತು. ಆಗ ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ನೇರವಾಗಿ ಆರೋಪ ಮಾಡಿದ್ರು ಎಂದ ರಮೇಶ್ ಬಾಬು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಡೋದು ಬೇಡ. ಈ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದು ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು. ಕೈಗಾ ಅಣು ಸ್ಥಾವರದಲ್ಲಿರುವ ಇಂಟೆಲಿಜೆನ್ಸ್ ವಿಭಾಗಕ್ಕೆ ಎಡಿಜಿಪಿ ರ್‍ಯಾಂಕ್​​ನ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅವರು ಬರೀ ಫೋನ್ ಕದ್ದಾಲಿಕೆ ಮಾಡುವುದರಲ್ಲಿ ತೊಡಗಿದ್ದಾರೆ ಎಂದು ಇದೇ ವೇಳೆ ರಮೇಶ್ ಬಾಬು ಗಂಭೀರ ಆರೋಪ ಮಾಡಿದರು.

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಆರೋಪ ಪ್ರಕರಣವನ್ನು ಎಸ್​ಐಟಿ ತನಿಖೆಗೆ ವಹಿಸಬೇಕೆಂದು ಜೆಡಿಎಸ್​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲೂ ಟೆಲಿಫೋನ್ ಕದ್ದಾಲಿಕೆ ಆಗ್ತಿದೆ. ಜೆಡಿಎಸ್ ಹಾಗೂ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡ್ತಿದ್ದಾರೆ. ಇಂಟೆಲಿಜೆನ್ಸ್ ಡಿಪಾರ್ಟ್​ಮೆಂಟ್​ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ನನಗೂ ಕೂಡ ಅನಾಮಿಕರೊಬ್ಬರು ಪತ್ರಕರ್ತರ ಹೆಸರಿನಲ್ಲಿ ಕರೆ ಮಾಡಿದ್ರು. ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ದೇವೇಗೌಡರ ಅಭಿಪ್ರಾಯ ಏನು ಅಂತ ಒತ್ತಾಯ ಮಾಡಿ ಕೇಳಿದ್ರು. ಅದಕ್ಕೆ ನಾನು ಅವರನ್ನೇ ಕೇಳಿ ಅಂತ ಹೇಳಿದ್ದೆ. ಸಂಶಯ ಬಂದು ಆ ನಂಬರ್ ಬಗ್ಗೆ ಪರಿಶೀಲಿಸಿದಾಗ ಅದು ಇಂಟೆಲಿಜೆನ್ಸ್​ ಡಿಪಾರ್ಟ್​ಮೆಂಟಿನಿಂದ ಬಂದಿದ್ದು ಎಂದು ಗೊತ್ತಾಯಿತು ಎಂದು ವಿವರಿಸಿದರು. ಪತ್ರಕರ್ತರ ಹೆಸರಿನಲ್ಲಿ ಇವರು ಯಾಕೆ ಫೋನ್ ಮಾಡಬೇಕು ಎಂದು ಪ್ರಶ್ನಿಸಿದ ಅವರು, ಪ್ರತಿಪಕ್ಷದವರನ್ನು ಮಣಿಸಲು ಇಂಟೆಲಿಜೆನ್ಸ್​ ಡಿಪಾರ್ಟ್​ಮೆಂಟ್​ ಬಳಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ, ಪೊಲೀಸರು ಇದುವರೆಗೂ ಎಫ್​ಐಆರ್ ದಾಖಲಿಸಿಲ್ಲ. ಹಾಗಾಗಿ, ತನಿಖೆಗೆ ಆದೇಶಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದು ಆಗ್ರಹಿಸಿದ್ದೇನೆ ಎಂದು ಹೇಳಿದರು.

ಇನ್ನು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿರೋದೇ ತಪ್ಪು. ಹಲವಾರು ಪ್ರಕರಣಗಳಲ್ಲಿ ಸಿಬಿಐ ಪ್ರತಿವಾದಿಯಾಗಿದೆ. ಹೀಗಿರುವಾಗ ತನಿಖೆ ನಡೆಸಲು ಸಿಬಿಐಗೆ ಕೊಡೋಕೆ ಹೇಗೆ ಸಾಧ್ಯ? ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಮಾನದಂಡ ರಚನೆ ಮಾಡಬೇಕೆಂದು ಹಿಂದೆಯೇ ನಿರ್ದೇಶನ ನೀಡಿದೆ. ಆದರೆ ಯಾವುದೇ ಸರ್ಕಾರ ಸಮಿತಿ ರಚನೆ ಮಾಡಿ ಗೈಡ್​ಲೈನ್ ಮಾಡಿಲ್ಲ ಎಂದರು.

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆಯವರ ಫೋನ್ ಕೂಡ ಟ್ಯಾಪಿಂಗ್ ಆಗಿತ್ತು. ಆಗ ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ನೇರವಾಗಿ ಆರೋಪ ಮಾಡಿದ್ರು ಎಂದ ರಮೇಶ್ ಬಾಬು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಡೋದು ಬೇಡ. ಈ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದು ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು. ಕೈಗಾ ಅಣು ಸ್ಥಾವರದಲ್ಲಿರುವ ಇಂಟೆಲಿಜೆನ್ಸ್ ವಿಭಾಗಕ್ಕೆ ಎಡಿಜಿಪಿ ರ್‍ಯಾಂಕ್​​ನ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅವರು ಬರೀ ಫೋನ್ ಕದ್ದಾಲಿಕೆ ಮಾಡುವುದರಲ್ಲಿ ತೊಡಗಿದ್ದಾರೆ ಎಂದು ಇದೇ ವೇಳೆ ರಮೇಶ್ ಬಾಬು ಗಂಭೀರ ಆರೋಪ ಮಾಡಿದರು.

Intro:ಬೆಂಗಳೂರು : ಟೆಲಿಫೋನ್ ಟ್ಯಾಪಿಂಗ್ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.Body:ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲೂ ಟೆಲಿಫೋನ್ ಕದ್ದಾಲಿಕೆ ಆಗ್ತಿದೆ. ಜೆಡಿಎಸ್ ಹಾಗೂ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡ್ತಿದ್ದಾರೆ. ಇಂಟೆಲಿಜೆನ್ಸ್ ಡಿಪಾರ್ಟ್ ಮೆಂಟ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ನನಗೂ ಕೂಡ ಅನಾಮಿಕರೊಬ್ಬರು ಪತ್ರಕರ್ತರ ಹೆಸರಿನಲ್ಲಿ ಕರೆ ಮಾಡಿದ್ರು. ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ದೇವೇಗೌಡರ ಅಭಿಪ್ರಾಯ ಏನು ಅಂತ ಒತ್ತಾಯ ಮಾಡಿ ಕೇಳಿದ್ರು. ಅದಕ್ಕೆ ನಾನು ಅವರನ್ನೇ ಕೇಳಿ ಅಂತ ಹೇಳಿದ್ದೆ. ಸಂಶಯ ಬಂದು ಆ ನಂಬರ್ ಬಗ್ಗೆ ಪರಿಶೀಲಿಸಿದಾಗ ಅದು ಇಂಟೆಲಿಜೆನ್ಸ್‌ ನವರದ್ದು ಎಂದು ಗೊತ್ತಾಯಿತು ಎಂದು ವಿವರಿಸಿದರು.
ಪತ್ರಕರ್ತರ ಹೆಸರಿನಲ್ಲಿ ಇವರು ಯಾಕೆ ಫೋನ್ ಮಾಡಬೇಕು ಎಂದು ಪ್ರಶ್ನಿಸಿದ ಅವರು, ಪ್ರತಿಪಕ್ಷದವರನ್ನು ಮಣಿಸಲು ಇಂಟೆಲಿಜೆನ್ಸ್ ನವರನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ, ಪೊಲೀಸರು ಇದುವರೆಗೂ ಎಫ್ ಐಆರ್ ದಾಖಲಿಸಿಲ್ಲ. ಹಾಗಾಗಿ, ತನಿಖೆಗೆ ಆದೇಶಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದು ಆಗ್ರಹಿಸಿದ್ದೇನೆ ಎಂದು ಹೇಳಿದರು.
ಇನ್ನು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿರೋದೇ ತಪ್ಪು. ಹಲವಾರು ಪ್ರಕರಣಗಳಲ್ಲಿ ಸಿಬಿಐ ಪ್ರತಿವಾದಿಯಾಗಿದೆ. ಹೀಗಿರುವಾಗ ತನಿಖೆ ನಡೆಸಲು ಸಿಬಿಐಗೆ ಕೊಡೋಕೆ ಹೇಗೆ ಸಾಧ್ಯ. ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಮಾನದಂಡ ರಚನೆ ಮಾಡಬೇಕೆಂದು ಹಿಂದೆಯೇ ನಿರ್ದೇಶನ ನೀಡಿದೆ. ಆದರೆ ಯಾವುದೇ ಸರ್ಕಾರ ಸಮಿತಿ ರಚನೆ ಮಾಡಿ ಗೈಡ್ ಲೈನ್ ಮಾಡಿಲ್ಲ ಎಂದರು.
ನಿವೃತ್ತ ನ್ಯಾ. ಸಂತೋಷ್ ಹೆಗ್ಡೆಯವರ ಫೋನ್ ಕೂಡ ಟ್ಯಾಪಿಂಗ್ ಆಗಿತ್ತು. ಆಗ ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ದವೇ ನೇರವಾಗಿ ಆರೋಪ ಮಾಡಿದ್ರು ಎಂದ ರಮೇಶ್ ಬಾಬು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಕೊಡೋದು ಬೇಡ. ಈ ಬಗ್ಗೆ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದು ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು.
ಕೈಗಾ ಅಣುಸ್ಥಾವರದಲ್ಲಿರುವ ಇಂಟೆಲಿಜೆನ್ಸ್ ವಿಭಾಗಕ್ಕೆ ಎಡಿಜಿಪಿ ರ್ಯಾಂಕ್ ನ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಅವರು ಬರೀ ಫೋನ್ ಕದ್ದಾಲಿಕೆ ಮಾಡುವುದರಲ್ಲಿ ತೊಡಗಿದ್ದಾರೆ ಎಂದು ಇದೇ ವೇಳೆ ರಮೇಶ್ ಬಾಬು ಗಂಭೀರ ಆರೋಪ ಮಾಡಿದರು.
ಮಾಜಿ ಶಾಸಕ ಕೋನರೆಡ್ಡಿ, ಜೆಡಿಎಸ್ ನ ಬೆಂಗಳೂರು ನಗರ ಘಟಕದ ಅಧ್ಯಕ್ಷ ಪ್ರಕಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.