ETV Bharat / city

ತೈಲ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐಸಿ ಪ್ರತಿಭಟನೆ - SUCIC protests

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಎಸ್‌ಯುಸಿಐಸಿ ವತಿಯಿಂದ ಡೀಸೆಲ್​, ಪೆಟ್ರೋಲ್ ಹಾಗೂ ಅಡುಗೆ ಅನಿಲ ದರ ಸತತವಾಗಿ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಪ್ರತಿಭಟಿಸಲಾಯಿತು.

sucic-protests-against-oil-price-hike
ತೈಲ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐಸಿ ವತಿಯಿಂದ ಪ್ರತಿಭಟನೆ
author img

By

Published : Dec 21, 2020, 2:49 PM IST

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಅನಿಲ ದರ ಸತತವಾಗಿ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಎಸ್‌ಯುಸಿಐಸಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ತೈಲ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐಸಿ ವತಿಯಿಂದ ಪ್ರತಿಭಟನೆ

ಈ ವೇಳೆ ಮಾತನಾಡಿದ ಎಸ್‌ಯುಸಿಐಸಿ ರಾಮಮೂರ್ತಿ, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಡೀಸೆಲ್​, ಪೆಟ್ರೋಲ್ ಹಾಗೂ ಅಡುಗೆ ಅನಿಲ ದರವನ್ನು ಸತತವಾಗಿ ಏರಿಸುತ್ತಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಎರಡು ವರ್ಷದ ಅಂತ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಗರಿಷ್ಠ ಮಟ್ಟಕ್ಕೆ ಮುಟ್ಟಿದೆ. ಕಳೆದ 15 ದಿನಗಳಲ್ಲಿ ಅಡುಗೆ ಅನಿಲ ದರ 100 ರೂಪಾಯಿ ಹೆಚ್ಚಳವಾಗಿದೆ.

ಓದಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು : ಸ್ಥಳದಲ್ಲೇ ಇಬ್ಬರು ಸಾವು

ನವೆಂಬರ್‌ ತಿಂಗಳಲ್ಲೇ 30 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಏಪ್ರಿಲ್ ಮತ್ತು ಜುಲೈ ನಡುವೆ 18 ದಶ ಲಕ್ಷಕ್ಕೂ ಹೆಚ್ವಿನ ಉದ್ಯೋಗಗಳು ನೆಲಕಚ್ಚಿವೆ. ಇದರಿಂದಾಗಿ ಕೂಲಿ ಕಾರ್ಮಿಕರು, ಮಧ್ಯಮ ವರ್ಗವರು ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ಕೊರೊನಾ ಕಾರಣದಿಂದ ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಜನತೆಗೆ, ಸತತ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಅನಿಲ ದರ ಸತತವಾಗಿ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಎಸ್‌ಯುಸಿಐಸಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ತೈಲ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐಸಿ ವತಿಯಿಂದ ಪ್ರತಿಭಟನೆ

ಈ ವೇಳೆ ಮಾತನಾಡಿದ ಎಸ್‌ಯುಸಿಐಸಿ ರಾಮಮೂರ್ತಿ, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಡೀಸೆಲ್​, ಪೆಟ್ರೋಲ್ ಹಾಗೂ ಅಡುಗೆ ಅನಿಲ ದರವನ್ನು ಸತತವಾಗಿ ಏರಿಸುತ್ತಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಎರಡು ವರ್ಷದ ಅಂತ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಗರಿಷ್ಠ ಮಟ್ಟಕ್ಕೆ ಮುಟ್ಟಿದೆ. ಕಳೆದ 15 ದಿನಗಳಲ್ಲಿ ಅಡುಗೆ ಅನಿಲ ದರ 100 ರೂಪಾಯಿ ಹೆಚ್ಚಳವಾಗಿದೆ.

ಓದಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು : ಸ್ಥಳದಲ್ಲೇ ಇಬ್ಬರು ಸಾವು

ನವೆಂಬರ್‌ ತಿಂಗಳಲ್ಲೇ 30 ಲಕ್ಷಕ್ಕೂ ಹೆಚ್ಚು ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಏಪ್ರಿಲ್ ಮತ್ತು ಜುಲೈ ನಡುವೆ 18 ದಶ ಲಕ್ಷಕ್ಕೂ ಹೆಚ್ವಿನ ಉದ್ಯೋಗಗಳು ನೆಲಕಚ್ಚಿವೆ. ಇದರಿಂದಾಗಿ ಕೂಲಿ ಕಾರ್ಮಿಕರು, ಮಧ್ಯಮ ವರ್ಗವರು ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ಕೊರೊನಾ ಕಾರಣದಿಂದ ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಜನತೆಗೆ, ಸತತ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.