ETV Bharat / city

ವಿದ್ಯಾರ್ಥಿಗಳಿಗೆ ಹಲ್ಲೆ ಮಾಡಿದ್ರೆ ಶಾಲಾ ಮಾನ್ಯತೆ ರದ್ದು: ಸಚಿವ ಸುರೇಶ್ ಕುಮಾರ್‌ ಎಚ್ಚರಿಕೆ

author img

By

Published : Dec 21, 2019, 7:39 PM IST

ಕೋರಮಂಗಲದ ಆಡುಗೋಡಿಯಲ್ಲಿರುವ ಖಾಸಗಿ ಶಾಲೆಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿದರು.

Education Minister S. Suresh Kumar visit
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ

ಬೆಂಗಳೂರು: ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಶಾಲೆಯಿಂದ ಹೊರ ಹಾಕುತ್ತೇವೆ ಎಂದು ಆತನ ಸಹೋದರಿಯನ್ನು ಬೆದರಿಸಿದ್ದ ಘಟನೆಗೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ದಿಢೀರ್ ಭೇಟಿ ಕೊಟ್ಟು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ಕೋರಮಂಗಲದ ಆಡುಗೋಡಿಯಲ್ಲಿರುವ ಖಾಸಗಿ ಶಾಲೆಗೆ ಭೇಟಿ ನೀಡಿದ ಸಚಿವರು, ಇಂತಹ ಘಟನೆ ಮರುಕಳಿಸಿದರೆ ಶಾಲೆಯ ಮಾನ್ಯತೆಯನ್ನೇ ರದ್ದುಪಡಿಸುವುದಾಗಿ ಎಚ್ಚರಿಸಿದರು.

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ

ಘಟನೆ ಏನು?

ಶಿಕ್ಷಕಿಯೊಬ್ಬರು 7ನೇ ತರಗತಿ ವಿದ್ಯಾರ್ಥಿ ತಲೆಗೆ ಡಸ್ಟರ್​​ನಿಂದ ಹೊಡೆದು ಹಲ್ಲೆ ನಡೆಸಲಾಗಿತ್ತು. ಅದೇ ಶಾಲೆಯಲ್ಲಿ ಆತನ ಸಹೋದರಿಯೂ ಓದುತ್ತಿದ್ದಳು. ಇಬ್ಬರೂ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಶಾಲೆಯಿಂದ ಹೊರ ಹಾಕುವುದಾಗಿ ಶಾಲಾ ಆಡಳಿತ ವರ್ಗ ಅವರನ್ನು ಬೆದರಿಸಿತ್ತು. ಹೀಗಾಗಿ ಸಂಬಂಧ ಸಚಿವರು ಇಂದು ಶಾಲೆಗೆ ಭೇಟಿ ನೀಡಿದರು.

ಹಲ್ಲೆಗೊಳಗಾದ ವಿದ್ಯಾರ್ಥಿ ಸಹೋದರಿಯೊಂದಿಗೆ ಅಶ್ಲೀಲವಾಗಿ ಮಾತಾನಾಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಆ ಶಿಕ್ಷಕನನ್ನು ಕೂಡಲೇ ಕೆಲಸದಿಂದ ವಜಾ ಮಾಡಬೇಕೆಂದು ಆಡಳಿತ ಮಂಡಳಿಗೆ ಸೂಚಿಸಿದರು. ಮತ್ತೆ ಇದೇ ರೀತಿ ಮುಂದುವರಿದರೆ ಶಾಲೆ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಸೂಚಿಸಿದರು.

ಬೆಂಗಳೂರು: ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಶಾಲೆಯಿಂದ ಹೊರ ಹಾಕುತ್ತೇವೆ ಎಂದು ಆತನ ಸಹೋದರಿಯನ್ನು ಬೆದರಿಸಿದ್ದ ಘಟನೆಗೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ದಿಢೀರ್ ಭೇಟಿ ಕೊಟ್ಟು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ಕೋರಮಂಗಲದ ಆಡುಗೋಡಿಯಲ್ಲಿರುವ ಖಾಸಗಿ ಶಾಲೆಗೆ ಭೇಟಿ ನೀಡಿದ ಸಚಿವರು, ಇಂತಹ ಘಟನೆ ಮರುಕಳಿಸಿದರೆ ಶಾಲೆಯ ಮಾನ್ಯತೆಯನ್ನೇ ರದ್ದುಪಡಿಸುವುದಾಗಿ ಎಚ್ಚರಿಸಿದರು.

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ

ಘಟನೆ ಏನು?

ಶಿಕ್ಷಕಿಯೊಬ್ಬರು 7ನೇ ತರಗತಿ ವಿದ್ಯಾರ್ಥಿ ತಲೆಗೆ ಡಸ್ಟರ್​​ನಿಂದ ಹೊಡೆದು ಹಲ್ಲೆ ನಡೆಸಲಾಗಿತ್ತು. ಅದೇ ಶಾಲೆಯಲ್ಲಿ ಆತನ ಸಹೋದರಿಯೂ ಓದುತ್ತಿದ್ದಳು. ಇಬ್ಬರೂ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಶಾಲೆಯಿಂದ ಹೊರ ಹಾಕುವುದಾಗಿ ಶಾಲಾ ಆಡಳಿತ ವರ್ಗ ಅವರನ್ನು ಬೆದರಿಸಿತ್ತು. ಹೀಗಾಗಿ ಸಂಬಂಧ ಸಚಿವರು ಇಂದು ಶಾಲೆಗೆ ಭೇಟಿ ನೀಡಿದರು.

ಹಲ್ಲೆಗೊಳಗಾದ ವಿದ್ಯಾರ್ಥಿ ಸಹೋದರಿಯೊಂದಿಗೆ ಅಶ್ಲೀಲವಾಗಿ ಮಾತಾನಾಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಆ ಶಿಕ್ಷಕನನ್ನು ಕೂಡಲೇ ಕೆಲಸದಿಂದ ವಜಾ ಮಾಡಬೇಕೆಂದು ಆಡಳಿತ ಮಂಡಳಿಗೆ ಸೂಚಿಸಿದರು. ಮತ್ತೆ ಇದೇ ರೀತಿ ಮುಂದುವರಿದರೆ ಶಾಲೆ ಮಾನ್ಯತೆ ರದ್ದುಪಡಿಸಲಾಗುವುದು ಎಂದು ಸೂಚಿಸಿದರು.

Intro:ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ : ಸಚಿವ ಸುರೇಶ್ ಕುಮಾರ್ ಎಚ್ಚರಿಕೆ..

ಬೆಂಗಳೂರು: ಶಾಲಾ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಅವನ ಸಹೋದರಿ ಅದೇ ಶಾಲೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಘಟನೆ ನಡೆದಿತ್ತು.. ಕೋರಮಂಗಲದ ಆಡುಗೋಡಿಯ ಖಾಸಗಿ ಶಾಲೆಗೆ ಇಂದು
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ದಿಢೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು..‌
ಇಂತಹ ಘಟನೆ ಮರುಕಳಿಸಿದರೆ ಶಾಲೆಯ ಮಾನ್ಯತೆಯನ್ನೇ ರದ್ದುಪಡಿಸಿ, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಚ್ಚರಿಕೆ ನೀಡಿದರು..

ಘಟನೆ ಏನು???
ಶಿಕ್ಷಕಿಯೊಬ್ಬರು 7 ನೇ ತರಗತಿ ವಿದ್ಯಾರ್ಥಿಯ ತಲೆಗೆ ಡಸ್ಟರ್ ನಿಂದ ಹೊಡೆದಿದ್ದಲ್ಲದೇ, ಅದೇ ಶಾಲೆಯಲ್ಲಿ ಓದುತ್ತಿರುವ ಆತನ ಅಕ್ಕನಿಗೆ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಶಾಲೆಯಿಂದ ಹೊರಹಾಕುವುದಾಗಿ ಶಾಲಾ ಆಡಳಿತ ವರ್ಗ ಬೆದರಿಕೆ ಹಾಕಲಾಗಿತ್ತಂತೆ.. ಹೀಗಾಗಿ ಈ ಸಂಬಂಧ ಸುದ್ದಿ ತಿಳಿಯುತ್ತಿದ್ದಂತೆ ಸಚಿವರು ಇಂದು ಶಾಲೆಗೆ ಭೇಟಿ ನೀಡಿದರು..

ಇನ್ನು ಹಲ್ಲೆಗೊಳಗಾದ ವಿದ್ಯಾರ್ಥಿಯ ಸಹೋದರಿಯೊಂದಿಗೆ ಅಶ್ಲೀಲವಾಗಿ ಮಾತಾನಾಡಿದ್ದನ್ನ ಗಂಭೀರವಾಗಿ ಪರಿಗಣಿಸಿದ ಸಚಿವರು, ಆ ಶಿಕ್ಷಕನನ್ನು ಕೂಡಲೇ ಕೆಲಸದಿಂದ ವಜಾ ಮಾಡಬೇಕೆಂದು ಆಡಳಿತ ಮಂಡಳಿಗೆ ಸೂಚಿಸಿದರು.. ‌ಇನ್ನು ಮುಂದಿನ ದಿನದಲ್ಲಿ ವಿದ್ಯಾರ್ಥಿ ಗಳ ಮೇಲೆ ಪ್ರತೀಕಾರದ ಕ್ರಮಗಳನ್ನು ಕೈಗೊಂಡರೆ, ಅಂತಹ ಘಟನೆ ನಡೆದರೆ ಶಾಲೆಯ ಮಾನ್ಯತೆ ರದ್ದುಪಡಿಸಲಾಗುವುದು ಅಂತ ಎಚ್ಚರಿಕೆ ನೀಡಿದರು..‌

KN_BNG_6_MINISTER_SURESHKUAMR_SCRIPT_7201801
Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.