ETV Bharat / city

60 ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿದ ಸಿಸಿಬಿ: ಆಯುಕ್ತರ ಸುದ್ದಿಗೋಷ್ಠಿ - ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 60 ಬಾಂಗ್ಲಾ ವಲಸಿಗರ ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರಿನ ರಾಮಮೂರ್ತಿ ನಗರ, ಬೆಳ್ಳಂದೂರು, ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಿಸಿಬಿ ವಿಶೇಷ ಕಾರ್ಯಾಚರಣೆಯಲ್ಲಿ ಅನಧಿಕೃತವಾಗಿ ನೆಲೆಸಿದ್ದ 60 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ
author img

By

Published : Oct 26, 2019, 4:41 PM IST

ಬೆಂಗಳೂರು: ಭಾರತಕ್ಕೆ ಅಕ್ರಮವಾಗಿ ನುಸುಳುವ ಬಾಂಗ್ಲಾದೇಶಿಗರನ್ನು ಹೊರಗೆ ಅಟ್ಟಬೇಕೆಂಬ ತೀವ್ರ ಚರ್ಚೆ ಬೆನ್ನಲೇ ನಗರದ ಸಿಸಿಬಿ ಪೊಲೀಸರು ಸದ್ದಿಲ್ಲದೇ ರಾಜಧಾನಿಯಲ್ಲಿ ಬೇರೂರಿದ್ದ 60 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ

ಬೆಂಗಳೂರಿನ ರಾಮಮೂರ್ತಿ ನಗರ, ಬೆಳ್ಳಂದೂರು, ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಿಸಿಬಿ ವಿಶೇಷ ಕಾರ್ಯಾಚರಣೆಯಲ್ಲಿ ಅನಧಿಕೃತವಾಗಿ ನೆಲೆಸಿದ್ದ 29 ಮಂದಿ ಪುರುಷರು, 22 ಮಂದಿ ಮಹಿಳೆಯರು, 9 ಯುವತಿಯರು ಸೇರಿದಂತೆ 60 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ. ಬಂಧಿತರನ್ನು ಅವರ ದೇಶಗಳಿಗೆ ವಾಪಸ್ ಕಳುಹಿಸಲು ಡಿಪೋರ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದರು.

ನಗರದಲ್ಲಿ ಇವರೆಲ್ಲ ಗುತ್ತಿಗೆ ಆಧಾರದ ಮೇಲೆ ಕಸ ಹಾಯುವುದು, ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ಬಂಧಿತ ಹೆಣ್ಣು ಮಕ್ಕಳನ್ನು ಹಾಗೂ ಮಕ್ಕಳನ್ನು ನಿರಾಶ್ರಿತ ಕೇಂದ್ರಕ್ಕೆ ಕಳುಹಿಸಲಾಗಿದೆ. ಪುರುಷರನ್ನು ಠಾಣೆಯಲ್ಲಿ ಇರಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಅಕ್ರಮ ವಲಸಿಗರನ್ನು ಬಾಂಗ್ಲಾ ಗಡಿಗೆ ಕರೆದುಕೊಂಡು ಹೋಗಿ ಬಿಡುತ್ತೇವೆ. ದೆಹಲಿ ಬಾಂಗ್ಲಾ ರಾಯಭಾರಿ ಕಚೇರಿಯನ್ನೂ ಸಂಪರ್ಕಿಸಿ ಗಡಿ ಭದ್ರತಾ ಪಡೆ ನೇತೃತ್ವದಲ್ಲಿ ರೈಲಿನ ಮೂಲಕ ಬಾಂಗ್ಲಾ ಮೂಲದವರನ್ನು ವಾಪಸ್ ಕಳುಹಿಸಿ ಕೊಡುತ್ತೇವೆ‌. ಬಾಂಗ್ಲಾದವರನ್ನು ಕರೆದುಕೊಂಡು ಬಂದವರ ಬೆನ್ನು ಹತ್ತುವುದು ನಮ್ಮ ಉದ್ದೇಶವಾಗಿದೆ ಎಂದರು.

ಐಬಿ, ಎನ್ಐಎ ಜೊತೆ ಸೇರಿಕೊಂಡು ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬಾಂಗ್ಲಾ ವಲಸಿಗರು ಭಯೋತ್ಪಾದಕರಿಗೆ ಸಹಾಯ ಮಾಡ್ತಿದ್ದಾರಾ ಎಂದು ಪರಿಶೀಲನೆ ನಡೆಸುತ್ತಿದ್ದೇವೆ.‌ ಬಾಂಗ್ಲಾ ವಲಸಿಗರಿಗೆ ಬೆಂಗಳೂರಿನಲ್ಲಿ ಮನೆ ಬಾಡಿಗೆಗೆ ಕೊಟ್ಟು ಆಶ್ರಯ ನೀಡಿದವರ ಮೇಲೂ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ.‌ ಮನೆ ಕೊಡುವ ಮುಂಚೆ ದಾಖಲೆಗಳನ್ನು ಪರಿಶೀಲಿಸಿ ಕೊಡಬೇಕು ಎಂದು ಭಾಸ್ಕರ್ ರಾವ್ ಹೇಳಿದರು.

ಬೆಂಗಳೂರು: ಭಾರತಕ್ಕೆ ಅಕ್ರಮವಾಗಿ ನುಸುಳುವ ಬಾಂಗ್ಲಾದೇಶಿಗರನ್ನು ಹೊರಗೆ ಅಟ್ಟಬೇಕೆಂಬ ತೀವ್ರ ಚರ್ಚೆ ಬೆನ್ನಲೇ ನಗರದ ಸಿಸಿಬಿ ಪೊಲೀಸರು ಸದ್ದಿಲ್ಲದೇ ರಾಜಧಾನಿಯಲ್ಲಿ ಬೇರೂರಿದ್ದ 60 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ

ಬೆಂಗಳೂರಿನ ರಾಮಮೂರ್ತಿ ನಗರ, ಬೆಳ್ಳಂದೂರು, ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಿಸಿಬಿ ವಿಶೇಷ ಕಾರ್ಯಾಚರಣೆಯಲ್ಲಿ ಅನಧಿಕೃತವಾಗಿ ನೆಲೆಸಿದ್ದ 29 ಮಂದಿ ಪುರುಷರು, 22 ಮಂದಿ ಮಹಿಳೆಯರು, 9 ಯುವತಿಯರು ಸೇರಿದಂತೆ 60 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ. ಬಂಧಿತರನ್ನು ಅವರ ದೇಶಗಳಿಗೆ ವಾಪಸ್ ಕಳುಹಿಸಲು ಡಿಪೋರ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದರು.

ನಗರದಲ್ಲಿ ಇವರೆಲ್ಲ ಗುತ್ತಿಗೆ ಆಧಾರದ ಮೇಲೆ ಕಸ ಹಾಯುವುದು, ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ಬಂಧಿತ ಹೆಣ್ಣು ಮಕ್ಕಳನ್ನು ಹಾಗೂ ಮಕ್ಕಳನ್ನು ನಿರಾಶ್ರಿತ ಕೇಂದ್ರಕ್ಕೆ ಕಳುಹಿಸಲಾಗಿದೆ. ಪುರುಷರನ್ನು ಠಾಣೆಯಲ್ಲಿ ಇರಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಅಕ್ರಮ ವಲಸಿಗರನ್ನು ಬಾಂಗ್ಲಾ ಗಡಿಗೆ ಕರೆದುಕೊಂಡು ಹೋಗಿ ಬಿಡುತ್ತೇವೆ. ದೆಹಲಿ ಬಾಂಗ್ಲಾ ರಾಯಭಾರಿ ಕಚೇರಿಯನ್ನೂ ಸಂಪರ್ಕಿಸಿ ಗಡಿ ಭದ್ರತಾ ಪಡೆ ನೇತೃತ್ವದಲ್ಲಿ ರೈಲಿನ ಮೂಲಕ ಬಾಂಗ್ಲಾ ಮೂಲದವರನ್ನು ವಾಪಸ್ ಕಳುಹಿಸಿ ಕೊಡುತ್ತೇವೆ‌. ಬಾಂಗ್ಲಾದವರನ್ನು ಕರೆದುಕೊಂಡು ಬಂದವರ ಬೆನ್ನು ಹತ್ತುವುದು ನಮ್ಮ ಉದ್ದೇಶವಾಗಿದೆ ಎಂದರು.

ಐಬಿ, ಎನ್ಐಎ ಜೊತೆ ಸೇರಿಕೊಂಡು ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬಾಂಗ್ಲಾ ವಲಸಿಗರು ಭಯೋತ್ಪಾದಕರಿಗೆ ಸಹಾಯ ಮಾಡ್ತಿದ್ದಾರಾ ಎಂದು ಪರಿಶೀಲನೆ ನಡೆಸುತ್ತಿದ್ದೇವೆ.‌ ಬಾಂಗ್ಲಾ ವಲಸಿಗರಿಗೆ ಬೆಂಗಳೂರಿನಲ್ಲಿ ಮನೆ ಬಾಡಿಗೆಗೆ ಕೊಟ್ಟು ಆಶ್ರಯ ನೀಡಿದವರ ಮೇಲೂ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ.‌ ಮನೆ ಕೊಡುವ ಮುಂಚೆ ದಾಖಲೆಗಳನ್ನು ಪರಿಶೀಲಿಸಿ ಕೊಡಬೇಕು ಎಂದು ಭಾಸ್ಕರ್ ರಾವ್ ಹೇಳಿದರು.

Intro:Body:ಅಕ್ರಮವಾಗಿ ಗಡಿ ನುಸುಳಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ನೆಲೆಸಿದ್ದ 60 ಬಾಂಗ್ಲಾ ವಲಸಿಗರು ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರು: ಭಾರತಕ್ಕೆ ಅಕ್ರಮವಾಗಿ ನುಸುಳುವ ಬಾಂಗ್ಲಾದೇಶಿಯರನ್ನು ಹೊರಗೆ ಅಟ್ಟಬೇಕೆಂಬ ತೀವ್ರ ಚರ್ಚೆ ಬೆನ್ನಲೇ ನಗರದ ಸಿಸಿಬಿ ಪೊಲೀಸರು ಸದ್ದಿಲ್ಲದೆ ರಾಜಧಾನಿಯಲ್ಲಿ ಬೇರೂರಿದ್ದ 60 ಮಂದಿಯನ್ನು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ರಾಮಮೂರ್ತಿ ನಗರ, ಬೆಳ್ಳಂದೂರು, ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಿಸಿಬಿ ವಿಶೇಷ ಕಾರ್ಯಾಚರಣೆಯಲ್ಲಿ ಅನಧಿಕೃತವಾಗಿ ನೆಲೆಸಿದ್ದ 29 ಮಂದಿ ಪುರುಷರು, 22 ಮಂದಿ ಮಹಿಳೆಯರು, 9 ಯುವತಿಯರು ಸೇರಿದಂತೆ 60 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ.
ಬಂಧಿತರನ್ನು ಅವರ ದೇಶಗಳಿಗೆ ವಾಪಸ್ ಕಳುಹಿಸಲು ಡಿಪೋರ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದರು.

ಸಿಸಿಬಿ ಪೊಲೀಸರು ಅಕ್ರಮ ಬಾಂಗ್ಲಾ ನಿವಾಸಿಗಳ ವಿರುದ್ಧ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ರಾಮಮೂರ್ತಿ ನಗರ, ಬೆಳ್ಳಂದೂರು ಹಾಗೂ ಮಾರತ್ ಹಳ್ಳಿ ಹಾಗೂ ಪೂರ್ವ ಭಾಗದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ವಾಸಿಸುತ್ತಿದ್ದರು. ನಗರದಲ್ಲಿ ಗುತ್ತಿಗೆ ಆಧಾರದ ಮೇಲೆ ಕಸ ಹಾಯುವುದು..‌ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ಕಂಡುಬಂದಿದೆ.
ಬಂಧಿತ ಹೆಣ್ಣು ಮಕ್ಕಳನ್ನು ಹಾಗೂ ಮಕ್ಕಳನ್ನು ನಿರಾಶ್ರಿತ ಕೇಂದ್ರಕ್ಕೆ ಕಳುಹಿಸಲಾಗಿದೆ. ಪುರುಷರನ್ನು ಠಾಣೆಯಲ್ಲಿ ಇರಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಅಕ್ರಮ ವಲಸಿಗರನ್ನು ಬಾಂಗ್ಲಾ ಗಡಿಗೆ ಕರೆದುಕೊಂಡು ಹೋಗಿ ಬಿಡುತ್ತೇವೆ. ದೆಹಲಿ ಬಾಂಗ್ಲಾ ರಾಯಭಾರಿ ಕಚೇರಿಯನ್ನೂ ಸಂಪರ್ಕಸಿ ಗಡಿ ಭದ್ರತಾ ಪಡೆ ನೇತೃತ್ವದಲ್ಲಿ ರೈಲಿನ ಮೂಲಕ ಬಾಂಗ್ಲಾ ಮೂಲದವರನ್ನು ವಾಪಸ್ ಕಳುಹಿಸಿ ಕೊಡುತ್ತೇವೆ‌. ನಮ್ಮ ಗುರಿ ಬಾಂಗ್ಲಾದವರನ್ನು ಕರೆದುಕೊಂಡು ಬಂದವರ ಬೆನ್ನು ಹತ್ತುವುದು ನಮ್ಮ ಉದ್ದೇಶವಾಗಿದೆ.

ಐಬಿ,ಎನ್ಐಎ ಜೊತೆ ಸೇರಿಕೊಂಡು ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬಾಂಗ್ಲಾ ವಲಸಿಗರು ಟೆರರಿಸ್ಟ್ ಗಳಿಗೆ ಸಹಾಯ ಮಾಡ್ತಿದ್ದಾರಾ ಎಂದು ಪರಿಶೀಲನೆ ನಡೆಸುತ್ತಿದ್ದೇವೆ.‌ಬಾಂಗ್ಲಾನ್ನರಿಗೆ ಬೆಂಗಳೂರಿನಲ್ಲಿ ಆಶ್ರಯವನ್ನೂ ನೀಡಿದ್ದಾರೆ.‌ಮನೆ ಬಾಡಿಗೆಗೆ ಕೊಟ್ಟವರ ಮೇಲೂ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ.‌ಮನೆ ಕೊಡೊ ಮುಂಚೆ ದಾಖಲೆಗಳನ್ನು ಪರಿಶೀಲಿಸಿ ಕೊಡಬೇಕು ಎಂದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.