ETV Bharat / city

ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವಿನ ಗುರಿ

author img

By

Published : Sep 6, 2019, 8:10 PM IST

ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸಿದ್ಧತೆ ನಡೆಸಿ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಅನರ್ಹ ಶಾಸಕರ ಕ್ಷೇತ್ರ ಈ ಬಾರಿ ಗೆಲ್ಲಬೇಕು..ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸಿದ್ಧತೆ ನಡೆಸಿ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಇಂದು ಕೋರ್ ಕಮಿಟಿ ಸಭೆ ನಡೆಯಿತು.‌ ನಳೀನ್​ಕುಮಾರ್ ಕಟೀಲ್ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ ನಡೆದ ಮೊದಲ‌ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಈಶ್ವರಪ್ಪ, ಸಿ.ಟಿ ರವಿ, ಜಗದೀಶ್ ಶೆಟ್ಟರ್, ಸಿಎಂ ಉದಾಸಿ, ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು. ಸಭೆಯಲ್ಲಿ ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಕಾಯ್ದುಕೊಳ್ಳುವುದು, ಪದಾಧಿಕಾರಿಗಳ ನೇಮಕ, ಉಪ ಚುನಾವಣೆಗೆ ಸಿದ್ಧತೆ,‌ ಪರಿಷತ್ ಚುನಾವಣೆ ತಯಾರಿ, ಸದಸ್ಯತಾ ಅಭಿಯಾನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾ‌ನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಸಭೆಯಲ್ಲಿ ಮೂರು ವಿಚಾರಗಳು ಚರ್ಚೆಯಾಗಿವೆ. 17 ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಅನರ್ಹ ಶಾಸಕರು ಕೋರ್ಟ್​ನಲ್ಲಿ ಹೋರಾಟ ಮುಂದುವರಿಸಿದ್ದರೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೆಲಸ ಆರಂಭವಾಗುತ್ತದೆ. ಆದರೆ 17 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಯಾರಾಗುತ್ತಾರೆ ಎಂಬುದು ಇನ್ನೂ ನಿರ್ಧಾರ ಆಗಿಲ್ಲ ಎಂದರು.

ಮುಂದಿನ‌ ಜೂನ್​ನಲ್ಲಿ ವಿಧಾನ ಪರಿಷತ್​ನ ನಾಲ್ಕು ಕ್ಷೇತ್ರಗಳ ಚುನಾವಣಾ ಸಿದ್ಧತಾ ಸಭೆಗಳ ಬಗ್ಗೆ ಚರ್ಚೆಯಾಗಿದೆ. ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯತೆ ಬಗ್ಗೆಯೂ ಚರ್ಚೆಯಾಗಿದೆ. ಸಂಘಟನಾತ್ಮಕ ಚಟುವಟಿಕೆಗಳು ನಡೆಯುತ್ತಿವೆ. ಸದಸ್ಯತ್ವ ಅಭಿಯಾನ ಮತ್ತು ಸಕ್ರಿಯ ಸದಸ್ಯತ್ವ ಬಗ್ಗೆ ಚರ್ಚಿಸಲಾಗಿದೆ. ಈ ವರ್ಷ ಸದಸ್ಯರನ್ನು 50 ಲಕ್ಷಕ್ಕೆ ತಲುಪಿಸುವ ಪ್ರಯತ್ನದ ಬಗ್ಗೆ ಚರ್ಚಿಸಲಾಗಿದೆ. ಸೆ. 8ರಂದು ರಾಜ್ಯದಲ್ಲಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ತಿಳಿಸಲಾಗಿದ್ದು, ಒಂದು ಲಕ್ಷ ಸಕ್ರಿಯ ಸದಸ್ಯರನ್ನು ನೋಂದಣಿ ಮಾಡುತ್ತೇವೆ. ನಂತರ ರಾಜ್ಯಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪ್ರವಾಸ ಮಾಡಲಿದ್ದಾರೆ. ಜೊತೆಗೆ ಜನೋಪಯೋಗಿ ಕೆಲಸ ಆಗಬೇಕು. ಪ್ರವಾಹ ಪೀಡಿತ ಪ್ರದೇಶದ ಸಮಸ್ಯೆ ಪರಿಹಾರಕ್ಕೆ ಸರ್ಕಾರಕ್ಕೆ, ಪಕ್ಷ ಪೂರ್ಣ ಬೆಂಬಲ ಕೊಡಬೇಕು ಎಂದು ತೀರ್ಮಾನವಾಗಿದೆ ಎಂದು ಲಿಂಬಾವಳಿ ಮಾಹಿತಿ ನೀಡಿದ್ರು.

ಇನ್ನು, ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾದ ನಂತರ ನಡೆದ ಮೊದಲ ಕೋರ್ ಕಮಿಟಿ ಸಭೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಗೈರಾಗಿದ್ದರು.

ಬೆಂಗಳೂರು: ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸಿದ್ಧತೆ ನಡೆಸಿ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಇಂದು ಕೋರ್ ಕಮಿಟಿ ಸಭೆ ನಡೆಯಿತು.‌ ನಳೀನ್​ಕುಮಾರ್ ಕಟೀಲ್ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ ನಡೆದ ಮೊದಲ‌ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಈಶ್ವರಪ್ಪ, ಸಿ.ಟಿ ರವಿ, ಜಗದೀಶ್ ಶೆಟ್ಟರ್, ಸಿಎಂ ಉದಾಸಿ, ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು. ಸಭೆಯಲ್ಲಿ ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಕಾಯ್ದುಕೊಳ್ಳುವುದು, ಪದಾಧಿಕಾರಿಗಳ ನೇಮಕ, ಉಪ ಚುನಾವಣೆಗೆ ಸಿದ್ಧತೆ,‌ ಪರಿಷತ್ ಚುನಾವಣೆ ತಯಾರಿ, ಸದಸ್ಯತಾ ಅಭಿಯಾನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾ‌ನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಸಭೆಯಲ್ಲಿ ಮೂರು ವಿಚಾರಗಳು ಚರ್ಚೆಯಾಗಿವೆ. 17 ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಅನರ್ಹ ಶಾಸಕರು ಕೋರ್ಟ್​ನಲ್ಲಿ ಹೋರಾಟ ಮುಂದುವರಿಸಿದ್ದರೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೆಲಸ ಆರಂಭವಾಗುತ್ತದೆ. ಆದರೆ 17 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಯಾರಾಗುತ್ತಾರೆ ಎಂಬುದು ಇನ್ನೂ ನಿರ್ಧಾರ ಆಗಿಲ್ಲ ಎಂದರು.

ಮುಂದಿನ‌ ಜೂನ್​ನಲ್ಲಿ ವಿಧಾನ ಪರಿಷತ್​ನ ನಾಲ್ಕು ಕ್ಷೇತ್ರಗಳ ಚುನಾವಣಾ ಸಿದ್ಧತಾ ಸಭೆಗಳ ಬಗ್ಗೆ ಚರ್ಚೆಯಾಗಿದೆ. ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯತೆ ಬಗ್ಗೆಯೂ ಚರ್ಚೆಯಾಗಿದೆ. ಸಂಘಟನಾತ್ಮಕ ಚಟುವಟಿಕೆಗಳು ನಡೆಯುತ್ತಿವೆ. ಸದಸ್ಯತ್ವ ಅಭಿಯಾನ ಮತ್ತು ಸಕ್ರಿಯ ಸದಸ್ಯತ್ವ ಬಗ್ಗೆ ಚರ್ಚಿಸಲಾಗಿದೆ. ಈ ವರ್ಷ ಸದಸ್ಯರನ್ನು 50 ಲಕ್ಷಕ್ಕೆ ತಲುಪಿಸುವ ಪ್ರಯತ್ನದ ಬಗ್ಗೆ ಚರ್ಚಿಸಲಾಗಿದೆ. ಸೆ. 8ರಂದು ರಾಜ್ಯದಲ್ಲಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ತಿಳಿಸಲಾಗಿದ್ದು, ಒಂದು ಲಕ್ಷ ಸಕ್ರಿಯ ಸದಸ್ಯರನ್ನು ನೋಂದಣಿ ಮಾಡುತ್ತೇವೆ. ನಂತರ ರಾಜ್ಯಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪ್ರವಾಸ ಮಾಡಲಿದ್ದಾರೆ. ಜೊತೆಗೆ ಜನೋಪಯೋಗಿ ಕೆಲಸ ಆಗಬೇಕು. ಪ್ರವಾಹ ಪೀಡಿತ ಪ್ರದೇಶದ ಸಮಸ್ಯೆ ಪರಿಹಾರಕ್ಕೆ ಸರ್ಕಾರಕ್ಕೆ, ಪಕ್ಷ ಪೂರ್ಣ ಬೆಂಬಲ ಕೊಡಬೇಕು ಎಂದು ತೀರ್ಮಾನವಾಗಿದೆ ಎಂದು ಲಿಂಬಾವಳಿ ಮಾಹಿತಿ ನೀಡಿದ್ರು.

ಇನ್ನು, ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾದ ನಂತರ ನಡೆದ ಮೊದಲ ಕೋರ್ ಕಮಿಟಿ ಸಭೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಗೈರಾಗಿದ್ದರು.

Intro:



ಬೆಂಗಳೂರು: ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸಿದ್ದತೆ ನಡೆಸಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಾರ್ಯತಂತ್ರ ರೂಪಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು.‌ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾದ ನಂತರ ನಡೆದ ಮೊದಲ‌ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ,ಪ್ರಹ್ಲಾದ್ ಜೋಶಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಈಶ್ವರಪ್ಪ, ಸಿ.ಟಿ ರವಿ,ಜಗದೀಶ್ ಶೆಟ್ಟರ್, ಸಿಎಂ ಉದಾಸಿ, ಅರವಿಂದ ಲಿಂಬಾವಳಿ ಆಹ್ವಾನಿತರಾಗಿ ಪುರಂದೇಶ್ವರಿ ಭಾಗಿಯಾಗಿದ್ದರು.

ಪಕ್ಷ ಹಾಗು ಸರ್ಕಾರದ ನಡುವೆ ಸಮನ್ವಯ ಕಾಯ್ದುಕೊಳ್ಳುವುದು, ಪದಾಧಿಕಾರಿಗಳ ನೇಮಕ,ಉಪ ಚುನಾವಣೆಗೆ ಸಿದ್ದತೆ,‌ಪರಿಷತ್ ಚುನಾವಣೆಗೂ ತಯಾರಿ,ಸದಸ್ಯತಾ ಅಭಿಯಾನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಅರವಿಂದ ಲಿಂಬಾವಳಿ,ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮೂರು ವಿಚಾರ ಚರ್ಚೆ ಆಗಿದೆ.17 ಕ್ಷೇತ್ರದಲ್ಲಿ ಉಪಚುನಾವಣೆಗೆ ಪಕ್ಷವನ್ನು ಸನ್ನದ್ದಗೊಳಿಸುವ ಬಗ್ಗೆ ಚರ್ಚೆಯಾಗಿದೆ.ಅನರ್ಹ ಶಾಸಕರು ಕೋರ್ಟ್ ನಲ್ಲಿ ಹೋರಾಟ ಮುಂದುವರಿಸಿದ್ದರೂ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕೆಲಸ ಆರಂಭವಾಗುತ್ತದೆ ಆದರೆ 17 ಕ್ಷೇತ್ರಗಳಲ್ಲಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಇನ್ನೂ ನಿರ್ಧಾರ ಆಗಿಲ್ಲ, ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಎಂದು ನಿರ್ಧಾರ ಮಾಡಲಾಗಿದೆ ಎಂದರು.

ಮುಂದಿನ‌ ಜೂನ್ ನಲ್ಲಿ ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳ ಚುನಾವಣಾ ಸಿದ್ಧತಾ ಸಭೆಗಳ ಬಗ್ಗೆ ಚರ್ಚೆ ಆಗಿದೆ ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯತೆ ಬಗ್ಗೆಯೂ ಚರ್ಚೆ ಆಗಿದೆ ಎಂದರು.

ಸಂಘಟನಾತ್ಮಕ ಚಟುವಟಿಕೆಗಳು ನಡೆಯುತ್ತಿವೆ, ಸದಸ್ಯತ್ವ ಅಭಿಯಾನ ಮತ್ತು ಸಕ್ರೀಯ ಸದಸ್ಯತ್ವ ಬಗ್ಗೆ ಚರ್ಚಿಸಲಾಗಿದೆ ಈ ವರ್ಷದ ಸದಸ್ಯರನ್ನು ಐವತ್ತು ಲಕ್ಷಕ್ಕೆ ತಲುಪಿಸುವ ಪ್ರಯತ್ನದ ಬಗ್ಗೆ ಚರ್ಚಿಸಲಾಗಿದೆ. ಸೆ. 8 ರಂದು ರಾಜ್ಯದಲ್ಲಿ ಸಕ್ರೀಯ ಸದಸ್ಯತ್ವ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವ ಚರ್ಚೆಯಾಗಿದೆ ಒಂದು ಲಕ್ಷ ಸಕ್ರೀಯ ಸದಸ್ಯರನ್ನು ನೋಂದಾವಣೆ ಮಾಡುತ್ತೇವೆ ನಂತರ ರಾಜ್ಯಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದರು.

ಜನೋಪಯೋಗಿ ಕೆಲಸ ಆಗಬೇಕು, ಪ್ರವಾಹ ಪೀಡಿತ ಪ್ರದೇಶದಲ್ಲಿ ಸಮಸ್ಯೆ ಪರಿಹಾರಕ್ಕೆ ಸರ್ಕಾರಕ್ಕೆ ಪಕ್ಷ ಪೂರ್ಣ ಬೆಂಬಲ ಕೊಡಬೇಕು ಎಂದು ತೀರ್ಮಾನ ಆಗಿದೆ ಎಂದು ಮಾಹಿತಿ ನೀಡಿದರು.

ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದು ಕೇವಲ ಆರೋಪ ಅಷ್ಟೇ ಅದರಲ್ಲಿ ಸತ್ಯ ಇಲ್ಲ ಎಂದರು.

ಸಂತೋಷ್,ಅಶೋಕ್ ಗೈರು:

ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾದ ನಂತರ ನಡೆದ ಮೊದಲ ಕೋರ್ ಕಮಿಟಿ ಸಭೆಯಲ್ಲಿ ಇಬ್ಬರು ಸದಸ್ಯರು‌ ಗೈರಾಗುದ್ದಾರೆ.ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಆಗಿ ನೇಮಕಗೊಂಡಿರುವ ಹಿನ್ನಲೆಯಲ್ಲಿ ಬಿ.ಎಲ್ ಸಂತೋಷ್ ಗೈರಾಗಿದ್ದರೆ ಕಂದಾಯ ಸಚಿವ ಆರ್.ಅಶೋಕ್ ಗೈರು ಎದ್ದು ಕಾಣುತ್ತಿತ್ತು. ನಿನ್ನೆಯಷ್ಟೇ ಅಶೋಕ್ ನಿವಾಸಕ್ಕೆ ತೆರಳಿದ್ದ ಕಟೀಲ್ ಮನವೊಲಿಕೆ ಕಾರ್ಯ ನಡೆಸಿದ್ದರು ಆದರೂ ಇಂದಿನ ಸಭೆಗೆ ಅಶೋಕ್ ಗೈರಾಗಿರುವುದು ಅಶೋಕ್ ಅಸಮಧಾನ ಇನ್ನೂ ಶಮನವಾಗಿಲ್ಲ ಎನ್ನುವುದಕ್ಕೆ ಪುಷ್ಟಿ ನೀಡಿದೆ.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.