ETV Bharat / city

ಲಾಕ್​​ಡೌನ್​​ ಪಾಲನೆ ಕಟ್ಟುನಿಟ್ಟಾಗದಿದ್ರೆ ರಾಜ್ಯದ ರಸ್ತೆಗಿಳಿಯಲಿದೆ ಅರೆಸೇನಾ ಪಡೆ?

ವಿದ್ಯಾವಂತರೇ ಲಾಖ್​ಡೌನ್​ ನಿಯಮ ಉಲ್ಲಂಘಿಸುತ್ತಿದ್ದು ಅತ್ಯಂತ ಬೇಸರದ ಸಂಗತಿ. ಅವರಿಗೆ ತರಾಟೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಪೆಟ್ರೋಲ್ ಬಂಕ್ ಬಂದ್ ಮಾಡಲಾಗಿದೆ. ಸಂಚಾರಕ್ಕೆ ವಿನಾಯಿತಿ ಪಡೆದ ವಾಹನಗಳಿಗೆ ಮಾತ್ರ ಬೆಂಗಳೂರು ಪೊಲೀಸರು ಅವಕಾಶ ನೀಡಿದ್ದಾರೆ. ಇಷ್ಟೆಲ್ಲದರ ನಡುವೆಯೂ ಕೊರೊನಾ ವೈರಸ್​​ 3ನೇ ಹಂತ ತಲುಪುತ್ತಿದೆ ಎನ್ನುವ ಆತಂಕ ಖುದ್ದು ಜನರಿಗೆ ಬಂದಿದೆ.

author img

By

Published : Mar 31, 2020, 5:22 PM IST

Paramilitary force
ಅರೆಸೇನಾ ಪಡೆ

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್​​ಡೌನ್ ಘೋಷಿಸಲಾಗಿದ್ದು, ಅದು​ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿಲ್ಲ ಎನ್ನುವುದಕ್ಕೆ ಬೆಂಗಳೂರು ಮಹಾನಗರ ಸಾಕ್ಷಿಯಾಗುತ್ತಿದೆ. ಲಾಕ್​ಡೌನ್​ ಘೋಷಣೆಯಾದಾಗಿನಿಂದ ಇಲ್ಲಿಯವರೆಗೂ ಸಂಪೂರ್ಣ ಬೆಂಬಲ ಸಿಕ್ಕಿಲ್ಲ. ಹೀಗಾಗಿ ಮನೆಯಿಂದ ಹೊರ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಇದು ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಯಿತು.

ಅಷ್ಟೊಂದು ಕಟ್ಟುನಿಟ್ಟಾಗಿ ನಿಯಮ ಪಾಲನೆ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಈ ಹೇಳಿಕೆ ಜನ ದೊಡ್ಡ ಸಂಖ್ಯೆಯಲ್ಲಿ ರಸ್ತೆಗಿಳಿಯಲು ಅವಕಾಶ ಮಾಡಿಕೊಟ್ಟಂತಾಯಿತು. ಇದು ಬಿಜೆಪಿ ಹೈಕಮಾಂಡ್​​ ಸಿಟ್ಟಿಗೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಖುದ್ದು ರಾಜ್ಯದ ಲಾಕ್​​ಡೌನ್ ವೈಫಲ್ಯದ ವಿರುದ್ಧ ಕಿಡಿಕಾರಿದ್ದಾರೆ.

Paramilitary force
ಅರೆಸೇನಾ ಪಡೆ ವಾಹನ

ಇಲ್ಲಿ ನಿಯಮ ಸೂಕ್ತವಾಗಿ ಜಾರಿಯಾಗಿಲ್ಲ. ಜನ ಬೇಕಾಬಿಟ್ಟಿ ರಸ್ತೆಯಲ್ಲಿ ಅಲೆಯುತ್ತಿದ್ದಾರೆ. ನಿಮ್ಮಿಂದ ನಿಯಂತ್ರಣ ಸಾಧ್ಯವಾಗದಿದ್ದರೆ ಸೇನೆಯ ಸಹಕಾರ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ. ಅದಕ್ಕಾಗಿ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಕೊಂಚ ಕಠಿಣ ಕ್ರಮಕ್ಕೆ ಮುಂದಾಗಿದೆ. ಅನಗತ್ಯವಾಗಿ ಓಡಾಡುವ ವಾಹನ ಚಾಲಕರನ್ನು ಬಂಧಿಸಿ ಹೋಮ್​ ಕ್ವಾರಂಟೈನ್​​​ನಲ್ಲಿ ಇರಿಸುವ ತೀರ್ಮಾನಕ್ಕೆ ಬಂದಿದೆ. ವಾಹನಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದೆ.

Paramilitary force
ಅರೆಸೇನಾ ಪಡೆ

ಸದ್ಯದ ಮಟ್ಟಿಗೆ ಬೆಳಗ್ಗೆ 10 ಗಂಟೆಯವರೆಗೆ ಹಾಗೂ ಸಂಜೆ 6ರ ನಂತರ ಒಂದಿಷ್ಟು ವಾಹನಗಳು ಓಡಾಡುತ್ತಿವೆ. ಈಗ ಅದನ್ನೂ ನಿಯಂತ್ರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಷ್ಟಾದರೂ ಜನ ಮಾತು ಕೇಳದಿದ್ದರೆ ರಾಜ್ಯಕ್ಕೆ ಸೇನೆ ಅಥವಾ ಅರೆಸೇನಾ ಪಡೆಯನ್ನು ಕರೆಸಿಕೊಳ್ಳುವ ಸಾಧ್ಯತೆ ಇದೆ. ಸೇನೆ ಒಮ್ಮೆ ರಸ್ತೆಗಿಳಿದರೆ ಲಾಕ್​​ಡೌನ್​ ಪರಿಣಾಮ ಮತ್ತೊಂದು ಮಗ್ಗುಲಿಗೆ ಹೋಗಲಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಲಾಕ್​ಡೌನ್​ ಸ್ಪಂದನೆ ಆಧರಿಸಿ ಸೇನೆ ಇಳಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ದೇಶದ ವಿವಿಧ ರಾಜ್ಯಗಳಿಗೆ ಅರೆಸೇನಾ ಪಡೆ ಕಳುಹಿಸುವ ಸಿದ್ಧತೆ ಕೇಂದ್ರ ಸರ್ಕಾರ ನಡೆಸಿದೆ. ಇದರಲ್ಲಿ ಕರ್ನಾಟಕದ ಹೆಸರೂ ಮೇಲ್ಪಂಕ್ತಿಯಲ್ಲಿದೆ. ಹೀಗಾಗಿ ಕೇಂದ್ರ ಸರ್ಕಾರ ಇನ್ನೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಹೋಮ್​​​ ಕ್ವಾರಂಟೈನ್ ಸಂಖ್ಯೆ ಹೆಚ್ಚಿರುವ ಬೆಂಗಳೂರು, ತುಮಕೂರು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಅರೆಸೇನಾ ಪಡೆ ನಿಯೋಜಿಸುವ ಸಾಧ್ಯತೆ ಇದೆ.

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್​​ಡೌನ್ ಘೋಷಿಸಲಾಗಿದ್ದು, ಅದು​ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿಲ್ಲ ಎನ್ನುವುದಕ್ಕೆ ಬೆಂಗಳೂರು ಮಹಾನಗರ ಸಾಕ್ಷಿಯಾಗುತ್ತಿದೆ. ಲಾಕ್​ಡೌನ್​ ಘೋಷಣೆಯಾದಾಗಿನಿಂದ ಇಲ್ಲಿಯವರೆಗೂ ಸಂಪೂರ್ಣ ಬೆಂಬಲ ಸಿಕ್ಕಿಲ್ಲ. ಹೀಗಾಗಿ ಮನೆಯಿಂದ ಹೊರ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಇದು ದೊಡ್ಡ ಪ್ರಮಾಣದಲ್ಲಿ ಸುದ್ದಿಯಾಯಿತು.

ಅಷ್ಟೊಂದು ಕಟ್ಟುನಿಟ್ಟಾಗಿ ನಿಯಮ ಪಾಲನೆ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಈ ಹೇಳಿಕೆ ಜನ ದೊಡ್ಡ ಸಂಖ್ಯೆಯಲ್ಲಿ ರಸ್ತೆಗಿಳಿಯಲು ಅವಕಾಶ ಮಾಡಿಕೊಟ್ಟಂತಾಯಿತು. ಇದು ಬಿಜೆಪಿ ಹೈಕಮಾಂಡ್​​ ಸಿಟ್ಟಿಗೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಖುದ್ದು ರಾಜ್ಯದ ಲಾಕ್​​ಡೌನ್ ವೈಫಲ್ಯದ ವಿರುದ್ಧ ಕಿಡಿಕಾರಿದ್ದಾರೆ.

Paramilitary force
ಅರೆಸೇನಾ ಪಡೆ ವಾಹನ

ಇಲ್ಲಿ ನಿಯಮ ಸೂಕ್ತವಾಗಿ ಜಾರಿಯಾಗಿಲ್ಲ. ಜನ ಬೇಕಾಬಿಟ್ಟಿ ರಸ್ತೆಯಲ್ಲಿ ಅಲೆಯುತ್ತಿದ್ದಾರೆ. ನಿಮ್ಮಿಂದ ನಿಯಂತ್ರಣ ಸಾಧ್ಯವಾಗದಿದ್ದರೆ ಸೇನೆಯ ಸಹಕಾರ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ. ಅದಕ್ಕಾಗಿ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಕೊಂಚ ಕಠಿಣ ಕ್ರಮಕ್ಕೆ ಮುಂದಾಗಿದೆ. ಅನಗತ್ಯವಾಗಿ ಓಡಾಡುವ ವಾಹನ ಚಾಲಕರನ್ನು ಬಂಧಿಸಿ ಹೋಮ್​ ಕ್ವಾರಂಟೈನ್​​​ನಲ್ಲಿ ಇರಿಸುವ ತೀರ್ಮಾನಕ್ಕೆ ಬಂದಿದೆ. ವಾಹನಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದೆ.

Paramilitary force
ಅರೆಸೇನಾ ಪಡೆ

ಸದ್ಯದ ಮಟ್ಟಿಗೆ ಬೆಳಗ್ಗೆ 10 ಗಂಟೆಯವರೆಗೆ ಹಾಗೂ ಸಂಜೆ 6ರ ನಂತರ ಒಂದಿಷ್ಟು ವಾಹನಗಳು ಓಡಾಡುತ್ತಿವೆ. ಈಗ ಅದನ್ನೂ ನಿಯಂತ್ರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಷ್ಟಾದರೂ ಜನ ಮಾತು ಕೇಳದಿದ್ದರೆ ರಾಜ್ಯಕ್ಕೆ ಸೇನೆ ಅಥವಾ ಅರೆಸೇನಾ ಪಡೆಯನ್ನು ಕರೆಸಿಕೊಳ್ಳುವ ಸಾಧ್ಯತೆ ಇದೆ. ಸೇನೆ ಒಮ್ಮೆ ರಸ್ತೆಗಿಳಿದರೆ ಲಾಕ್​​ಡೌನ್​ ಪರಿಣಾಮ ಮತ್ತೊಂದು ಮಗ್ಗುಲಿಗೆ ಹೋಗಲಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ ಲಾಕ್​ಡೌನ್​ ಸ್ಪಂದನೆ ಆಧರಿಸಿ ಸೇನೆ ಇಳಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ದೇಶದ ವಿವಿಧ ರಾಜ್ಯಗಳಿಗೆ ಅರೆಸೇನಾ ಪಡೆ ಕಳುಹಿಸುವ ಸಿದ್ಧತೆ ಕೇಂದ್ರ ಸರ್ಕಾರ ನಡೆಸಿದೆ. ಇದರಲ್ಲಿ ಕರ್ನಾಟಕದ ಹೆಸರೂ ಮೇಲ್ಪಂಕ್ತಿಯಲ್ಲಿದೆ. ಹೀಗಾಗಿ ಕೇಂದ್ರ ಸರ್ಕಾರ ಇನ್ನೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಹೋಮ್​​​ ಕ್ವಾರಂಟೈನ್ ಸಂಖ್ಯೆ ಹೆಚ್ಚಿರುವ ಬೆಂಗಳೂರು, ತುಮಕೂರು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಅರೆಸೇನಾ ಪಡೆ ನಿಯೋಜಿಸುವ ಸಾಧ್ಯತೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.