ETV Bharat / city

ರಾಜ್ಯಕ್ಕಿಂದು ಮಧುಸೂದನ್ ಮಿಸ್ತ್ರಿ ಆಗಮನ ; ಪ್ರತಿಪಕ್ಷದ ನಾಯಕರ ಆಯ್ಕೆಗೆ ನಾಳೆ ಮಹತ್ವದ ಸಭೆ

ರಾಜ್ಯ ಸರ್ಕಾರದ ಪ್ರತಿಪಕ್ಷದ ನಾಯಕರ ಆಯ್ಕೆ ನಾಳೆ (ಭಾನುವಾರ) ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.

author img

By

Published : Oct 5, 2019, 11:19 PM IST

tomorrow-is-an-important-meeting-for-the-selection-of-opposition-leaders

ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಪಕ್ಷದ ನಾಯಕರ ಆಯ್ಕೆ ನಾಳೆ (ಭಾನುವಾರ) ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ. ಅದಕ್ಕಾಗಿಯೇ ಇಂದು ರಾತ್ರಿ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಮಧುಸೂಧನ್ ಮಿಸ್ತ್ರಿ ಆಗಮಿಸಲಿದ್ದು, ಕುಮಾರಕೃಪ ಅತಿಥಿಗೃಹದಲ್ಲಿ ತಂಗಲಿದ್ದಾರೆ.

ಸಭೆಯಲ್ಲಿ ಅವರು ಪ್ರತಿಯೊಬ್ಬ ನಾಯಕರ ಅಭಿಪ್ರಾಯ ಪಡೆಯಲಿದ್ದಾರೆ. ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಬಲ್ಲ ಹಾಗೂ ಪಕ್ಷದ ವರ್ಚಸ್ಸನ್ನು ಹೆಚ್ಚಿಸಬಲ್ಲ ವ್ಯಕ್ತಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದ ಬಳಿಕ ಮಧುಸೂದನ್ ಸಂಜೆ ದೆಹಲಿಗೆ ತೆರಳಲಿದ್ದಾರೆ. ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿವರಿಸಲಿದ್ದಾರೆ.

ದಿನೇಶ್ ಅನುಪಸ್ಥಿತಿ:

ವಿದೇಶದಲ್ಲಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಗೈರಾಗಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂಬಿ ಪಾಟೀಲ್, ಆರ್.ವಿ.ದೇಶಪಾಂಡೆ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್​ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಇದರಿಂದಾಗಿ ನಾಳೆಯ ಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆಯ್ಕೆ ಅಂತಿಮವಾಗಲಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಪಕ್ಷದ ನಾಯಕರ ಆಯ್ಕೆ ನಾಳೆ (ಭಾನುವಾರ) ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ. ಅದಕ್ಕಾಗಿಯೇ ಇಂದು ರಾತ್ರಿ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಮಧುಸೂಧನ್ ಮಿಸ್ತ್ರಿ ಆಗಮಿಸಲಿದ್ದು, ಕುಮಾರಕೃಪ ಅತಿಥಿಗೃಹದಲ್ಲಿ ತಂಗಲಿದ್ದಾರೆ.

ಸಭೆಯಲ್ಲಿ ಅವರು ಪ್ರತಿಯೊಬ್ಬ ನಾಯಕರ ಅಭಿಪ್ರಾಯ ಪಡೆಯಲಿದ್ದಾರೆ. ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಬಲ್ಲ ಹಾಗೂ ಪಕ್ಷದ ವರ್ಚಸ್ಸನ್ನು ಹೆಚ್ಚಿಸಬಲ್ಲ ವ್ಯಕ್ತಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದ ಬಳಿಕ ಮಧುಸೂದನ್ ಸಂಜೆ ದೆಹಲಿಗೆ ತೆರಳಲಿದ್ದಾರೆ. ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿವರಿಸಲಿದ್ದಾರೆ.

ದಿನೇಶ್ ಅನುಪಸ್ಥಿತಿ:

ವಿದೇಶದಲ್ಲಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಗೈರಾಗಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂಬಿ ಪಾಟೀಲ್, ಆರ್.ವಿ.ದೇಶಪಾಂಡೆ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.

ಅಕ್ಟೋಬರ್​ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಇದರಿಂದಾಗಿ ನಾಳೆಯ ಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆಯ್ಕೆ ಅಂತಿಮವಾಗಲಿದೆ.

Intro:newsBody:ಇಂದು ತಡರಾತ್ರಿ ನಗರಕ್ಕೆ ಮಧುಸೂದನ್ ಮಿಸ್ತ್ರಿ; ಪ್ರತಿಪಕ್ಷದ ನಾಯಕರ ಆಯ್ಕೆಗೆ ನಾಳೆ ಮಹತ್ವದ ಸಭೆ

ಕಾಂಗ್ರೆಸ್ ಪ್ರತಿಪಕ್ಷದ ನಾಯಕರ ಆಯ್ಕೆಗೆ ನಾಳೆ ನಗರದಲ್ಲಿ ಸಭೆ ನಡೆಸಲಿದ್ದಾರೆ ಮಧುಸೂದನ್ ಮಿಸ್ತ್ರಿ

ಬೆಂಗಳೂರು: ರಾಜ್ಯ ಸರ್ಕಾರದ ಪ್ರತಿಪಕ್ಷದ ನಾಯಕರ ಆಯ್ಕೆ ನಾಳೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.
ಈ ಆಯ್ಕೆ ಗಾಗಿಯೇ ನಗರಕ್ಕೆ ಇಂದು ರಾಷ್ಟ್ರೀಯ ಕಾಂಗ್ರೆಸ್ ನಾಯಕ ಮಧುಸೂದನ್ ಮಿಸ್ತ್ರಿ ಆಗಮಿಸುತ್ತಿದ್ದಾರೆ. ತಡರಾತ್ರಿ 12ಗಂಟೆಗೆ ಬೆಂಗಳೂರಿಗೆ ಆಗಮಿಸುವ ಅವರು ಕುಮಾರಕೃಪ ಅತಿಥಿಗೃಹದಲ್ಲಿ ತಂಗಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷದ ನಾಯಕರ ಆಯ್ಕೆ ಸಂಬಂಧ ಸಭೆ ನಡೆಯಲಿದ್ದು ಇದರಲ್ಲಿ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಪ್ರತಿಯೊಬ್ಬ ನಾಯಕರನ್ನು ಪ್ರತ್ಯೇಕವಾಗಿ ಮಾತನಾಡಿಸಲಿರುವ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸಮರ್ಥವಾಗಿ ಹೋರಾಡಬಲ್ಲ ಹಾಗೂ ಪಕ್ಷದ ವರ್ಚಸ್ಸನ್ನು ಹೆಚ್ಚಿಸಬಲ್ಲ ವ್ಯಕ್ತಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರೆ.
ನಾಳೆ ಸಭೆಯಲ್ಲಿ ಕೈಗೊಳ್ಳುವ ಚರ್ಚೆ ಹಾಗೂ ಮಾಹಿತಿಯನ್ನು ಹೈಕಮಾಂಡ್ ನಾಯಕರಿಗೆ ವಿವರಿಸಲಿರುವವರು, ರಾಜ್ಯ ಸರ್ಕಾರದ ಪ್ರತಿಪಕ್ಷದ ನಾಯಕರ ಆಯ್ಕೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ.
ದಿನೇಶ್ ಅನುಪಸ್ಥಿತಿ
ವಿದೇಶದಲ್ಲಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಉಪಸ್ಥಿತರಿರುತ್ತಾರೆ. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವರಾದ ಹೆಚ್ ಕೆ ಪಾಟೀಲ್, ಎಂಬಿ ಪಾಟೀಲ್, ಆರ್ ವಿ ದೇಶಪಾಂಡೆ ಮತ್ತಿತರ ನಾಯಕರು, ಮಾಜಿ ಸಚಿವರು ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಹಿರಿಯ ಮುಖಂಡರು ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ಮಧುಸೂದನ್ ಮಿಸ್ತ್ರಿ ಅವರಿಗೆ ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ ಎಲ್ಲ ನಾಯಕರ ಅಭಿಪ್ರಾಯ ಸಂಗ್ರಹಿಸುವ ಮಧುಸೂದನ್ ಮಿಸ್ತ್ರಿ ಅವರು ಸಂಜೆ ದೆಹಲಿಗೆ ತೆರಳಲಿದ್ದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಲಿದ್ದಾರೆ. ಅ.10ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಉಳಿದಿರುವ ಐದು ದಿನದಲ್ಲಿ ಪ್ರತಿಪಕ್ಷದ ನಾಯಕರ ಆಯ್ಕೆ ಅಂತಿಮ ಆಗಬೇಕಿದೆ. ಇದರಿಂದ ನಾಳೆಯ ಸಭೆಯ ನಂತರ ತರಾತುರಿಯಲ್ಲಿ ಪ್ರತಿಪಕ್ಷದ ನಾಯಕರ ಆಯ್ಕೆ ಅಂತಿಮವಾಗಲಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.