ETV Bharat / city

'ಬಹುರೂಪಿ ಪ್ರಕಾಶನ'ಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ ಗರಿ

author img

By

Published : Mar 30, 2022, 10:44 PM IST

ಬಹುರೂಪಿ ಪ್ರಕಾಶನದ 'ಅಕ್ಕಯ್' ಕೃತಿಗೆ ಪ್ರಕಟಣೆಯ ಉತ್ಕೃಷ್ಟತೆಗಾಗಿ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳು ಅರಸಿ ಬಂದಿವೆ.

two-national-award-feathers-for-bahuroopi-publishing
'ಬಹುರೂಪಿ ಪ್ರಕಾಶನ'ಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಯ ಗರಿ

ಬೆಂಗಳೂರು: ಬಹುರೂಪಿ ಪ್ರಕಾಶನದ 'ಅಕ್ಕಯ್' ಕೃತಿಗೆ ಪ್ರಕಟಣೆಯ ಉತ್ಕೃಷ್ಟತೆಗಾಗಿ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪಬ್ಲಿಷಿಂಗ್ ನೆಕ್ಸ್ಟ್ ಆಯೋಜಿಸಿದ್ದ ವಾರ್ಷಿಕ ಸ್ಪರ್ಧೆಯಲ್ಲಿ ಈ ಕೃತಿಯು ಪ್ರಕಟಣೆಯ ಉತ್ಕೃಷ್ಟತೆಗೆ ಹಾಗೂ 'ಕುಪ್ಪಳಿ ಡೈರಿ' ಕೃತಿ ಮುಖಪುಟ ವಿನ್ಯಾಸಕ್ಕಾಗಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ದೇಶ-ವಿದೇಶದ ಪ್ರತಿಷ್ಠಿತ ಪ್ರಕಟಣಾ ಸಂಸ್ಥೆಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಅಂತಿಮವಾಗಿ 'ಅಕ್ಕಯ್' ಕೃತಿ ದ್ವಿತೀಯ ಸ್ಥಾನ ಗಳಿಸಿದೆ.

two-national-award-feathers-for-bahuroopi-publishing

ದೇಶದ ಸಾರ್ವಜನಿಕ ಸಂಪರ್ಕ ಕ್ಷೇತ್ರದ ಪ್ರಾತಿನಿಧಿಕ ಸಂಸ್ಥೆ 'ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ' (ಪಿ ಆರ್ ಸಿ ಐ) ನಡೆಸುವ ಸಾರ್ವಜನಿಕ ರಂಗದ ವಾರ್ಷಿಕ ಪ್ರಶಸ್ತಿ ಸ್ಪರ್ಧೆಯಲ್ಲಿ ಪುಸ್ತಕ ಪ್ರಕಟಣಾ ವಿಭಾಗದಲ್ಲಿ 'ಅಕ್ಕಯ್' ಕೃತಿ ಬೆಳ್ಳಿ ಪದಕ ಗಳಿಸಿದೆ. ಈ ಕೃತಿಯ ವಿನ್ಯಾಸದ ಹಿಂದೆ ಎಸ್.ಎಂ.ಸಾಗರ್, ಅರುಣ್ ಕುಮಾರ್ ಜಿ, ಛಾಯಾಗ್ರಾಹಕ ಮನುಕುಮಾರ್, ರೀಗಲ್ ಪ್ರಿಂಟರ್ಸ್ ವೆಂಕಟೇಶ್ ಶ್ರಮವಿದೆ. 'ಅಕ್ಕಯ್' ಮೂಲತಃ ಸಾಮಾಜಿಕ ಹೋರಾಟಗಾರರೂ, ಲೈಂಗಿಕ ಅಲ್ಪಸಂಖ್ಯಾತರಾದ ಅಕ್ಕಯ್ ಪದ್ಮಶಾಲಿ ಅವರ ಆತ್ಮಕಥೆಯಾಗಿದ್ದು ಪ್ರೊ.ಡೊಮಿನಿಕ್ ಡಿ ಅವರು ನಿರೂಪಿಸಿದ್ದಾರೆ.

ಇದನ್ನೂ ಓದಿ: ಶ್ರೀಗಂಧ ಬೆಳೆ ನಷ್ಟ: ಪರಿಹಾರಕ್ಕಾಗಿ ಸರ್ಕಾರಕ್ಕೆ ರಕ್ತದಲ್ಲಿ ಪತ್ರ

ಬೆಂಗಳೂರು: ಬಹುರೂಪಿ ಪ್ರಕಾಶನದ 'ಅಕ್ಕಯ್' ಕೃತಿಗೆ ಪ್ರಕಟಣೆಯ ಉತ್ಕೃಷ್ಟತೆಗಾಗಿ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪಬ್ಲಿಷಿಂಗ್ ನೆಕ್ಸ್ಟ್ ಆಯೋಜಿಸಿದ್ದ ವಾರ್ಷಿಕ ಸ್ಪರ್ಧೆಯಲ್ಲಿ ಈ ಕೃತಿಯು ಪ್ರಕಟಣೆಯ ಉತ್ಕೃಷ್ಟತೆಗೆ ಹಾಗೂ 'ಕುಪ್ಪಳಿ ಡೈರಿ' ಕೃತಿ ಮುಖಪುಟ ವಿನ್ಯಾಸಕ್ಕಾಗಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ದೇಶ-ವಿದೇಶದ ಪ್ರತಿಷ್ಠಿತ ಪ್ರಕಟಣಾ ಸಂಸ್ಥೆಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಅಂತಿಮವಾಗಿ 'ಅಕ್ಕಯ್' ಕೃತಿ ದ್ವಿತೀಯ ಸ್ಥಾನ ಗಳಿಸಿದೆ.

two-national-award-feathers-for-bahuroopi-publishing

ದೇಶದ ಸಾರ್ವಜನಿಕ ಸಂಪರ್ಕ ಕ್ಷೇತ್ರದ ಪ್ರಾತಿನಿಧಿಕ ಸಂಸ್ಥೆ 'ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ' (ಪಿ ಆರ್ ಸಿ ಐ) ನಡೆಸುವ ಸಾರ್ವಜನಿಕ ರಂಗದ ವಾರ್ಷಿಕ ಪ್ರಶಸ್ತಿ ಸ್ಪರ್ಧೆಯಲ್ಲಿ ಪುಸ್ತಕ ಪ್ರಕಟಣಾ ವಿಭಾಗದಲ್ಲಿ 'ಅಕ್ಕಯ್' ಕೃತಿ ಬೆಳ್ಳಿ ಪದಕ ಗಳಿಸಿದೆ. ಈ ಕೃತಿಯ ವಿನ್ಯಾಸದ ಹಿಂದೆ ಎಸ್.ಎಂ.ಸಾಗರ್, ಅರುಣ್ ಕುಮಾರ್ ಜಿ, ಛಾಯಾಗ್ರಾಹಕ ಮನುಕುಮಾರ್, ರೀಗಲ್ ಪ್ರಿಂಟರ್ಸ್ ವೆಂಕಟೇಶ್ ಶ್ರಮವಿದೆ. 'ಅಕ್ಕಯ್' ಮೂಲತಃ ಸಾಮಾಜಿಕ ಹೋರಾಟಗಾರರೂ, ಲೈಂಗಿಕ ಅಲ್ಪಸಂಖ್ಯಾತರಾದ ಅಕ್ಕಯ್ ಪದ್ಮಶಾಲಿ ಅವರ ಆತ್ಮಕಥೆಯಾಗಿದ್ದು ಪ್ರೊ.ಡೊಮಿನಿಕ್ ಡಿ ಅವರು ನಿರೂಪಿಸಿದ್ದಾರೆ.

ಇದನ್ನೂ ಓದಿ: ಶ್ರೀಗಂಧ ಬೆಳೆ ನಷ್ಟ: ಪರಿಹಾರಕ್ಕಾಗಿ ಸರ್ಕಾರಕ್ಕೆ ರಕ್ತದಲ್ಲಿ ಪತ್ರ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.