ಬೆಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪಶ್ಚಿಮ ವಿಭಾಗದ ಬ್ಯಾಟರಾಯನಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3.20 ಲಕ್ಷ ರೂಪಾಯಿ ಬೆಲೆ ಬಾಳುವ 74 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
![two thieves are arrested in Bangalore](https://etvbharatimages.akamaized.net/etvbharat/prod-images/14699160_vgdscftrgwe.jpg)
ಮೈಸೂರು ರಸ್ತೆಯ ಬ್ಯಾಟರಾಯನಪುರ ಶಾಮಣ್ಣ ಗಾರ್ಡನ್ನಲ್ಲಿರುವ ಮನೆಯೊಂದರ ಮಂದಿ ಮಾ. 1ರಂದು ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಮನೆ ಬಾಗಿಲು ಹಾಕಿ ಪಕ್ಕದ ರಸ್ತೆಗೆ ಹೋಗಿದ್ದರು. ಬರುವಷ್ಟರಲ್ಲಿ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಎಸಿಬಿ ದಾಳಿ: ನ್ಯಾಯಾಲಯದ ಸಿಬ್ಬಂದಿ ಬಂಧನ
ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಶಂಕರ್ ನಾಯಕ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ..