ನೆಲಮಂಗಲ: ಕಾಡು ಪ್ರಾಣಿಗಳ ಬೇಟೆಯಾಡಿದ್ದಲ್ಲದೇ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಬಹಿರಂಗವಾಗಿ ಹರಾಜು ಕೂಗಿ ಸಂಭ್ರಮಿಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ನಡೆದಿದೆ.
ಕಾಡು ಪ್ರಾಣಿಗಳ ಬೇಟೆ ನಿಷೇಧದ ನಡುವೆಯೂ ಯಂಟಗಾನಹಳ್ಳಿ ಜನರು ಮೊಲ, ಕಾಡು ಕೋಳಿ, ಕೊಕ್ಕರೆಗಳನ್ನು ಭೇಟೆಯಾಡಿದ್ದಾರೆ. ಗ್ರಾಮದಲ್ಲಿ ತಮಟೆ ಬಾರಿಸಿಕೊಂಡು ಮೆರವಣಿಗೆ ಮಾಡಿ, ಹರಾಜು ನಡೆಸಿ ಕೋವಿಡ್ ನಿಯಮಗಳಿಗೆ ತಿಲಾಂಜಲಿ ಹಾಡಿದ್ದಾರೆ.
ಇದನ್ನೂ ಓದಿ: ಕೊರಗಜ್ಜನ ವೇಷ ಹಾಕಿ ವಿಕೃತಿ ಮೆರೆದ ವರ: ಆರೋಪಿಗಳ ವಿರುದ್ಧ ದೂರು ದಾಖಲು
ಕೊರೊನಾ ನಿಯಮ ಉಲ್ಲಂಘಿಸಿದ ಹಿನ್ನೆಲೆ ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.