ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಹಾಗೂ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಓದಿ-ಕೆಎಸ್ಆರ್ಟಿಸಿ ಬಸ್-ಕಾರು ಮುಖಾಮುಖಿ: ಮಹಿಳಾ PSI ಸೇರಿ ನಾಲ್ವರ ದುರ್ಮರಣ
ಉಸಿರಾಟ ನಾರ್ಮಲ್ ಆಗಿದೆ. ಜ್ವರ ಇಳಿದಿದ್ದು, ಕೃತಕ ಉಸಿರಾಟ ವ್ಯವಸ್ಥೆ ಮುಂದುವರೆಸಲಾಗಿದೆ. ಈ ಮೂಲಕ ಕೊರೊನಾ ಸೋಂಕಿನ ಗುಣಲಕ್ಷಣಗಳು ಕ್ಷೀಣಿಸಿವೆ. ಆಸ್ಪತ್ರೆಯಿಂದ ನೀಡಲಾಗುವ ಆಹಾರ ಸೇವನೆ ಮಾಡಿ ಕೊರೊನಾ ಐಸಿಯು ವಾರ್ಡ್ನಲ್ಲಿ ವಾಕ್ ಮಾಡುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.