ಬೆಂಗಳೂರು : ಕರ್ತವ್ಯನಿರತ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಗರದ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಗಸ್ವಾಮಯ್ಯ ಮೃತ ಎಎಸ್ಐ. ಇಂದು ಸಂಜೆ 4 ಗಂಟೆ ವೇಳೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಇದ್ದಕ್ಕಿದ್ದ ಹಾಗೆ ಮೂರ್ಚೆ ಹೋಗಿದ್ದರು.
ಕೂಡಲೇ ಸಹೋದ್ಯೋಗಿ ಪೊಲೀಸ್ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ರಂಗಸ್ವಾಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ದೃಢಪಡಿಸಿದ್ದಾರೆ.