ETV Bharat / city

ದೊಡ್ಡಬಳ್ಳಾಪುರ: ಒತ್ತಡ ನಿವಾರಣೆಗೆ ಯೋಗದ ಮೊರೆ ಹೋದ ಪೊಲೀಸರು

author img

By

Published : Mar 24, 2022, 2:43 PM IST

ಪೊಲೀಸರ ಒತ್ತಡ ಕಡಿಮೆ ಮಾಡುವ ಸಲುವಾಗಿ ದೊಡ್ಡಬಳ್ಳಾಪುರ ಉಪವಿಭಾಗಧಿಕಾರಿ ವ್ಯಾಪ್ತಿಯಲ್ಲಿನ ಪೊಲೀಸ್ ಸಿಬ್ಬಂದಿಗೆ 5 ದಿನಗಳ ಯೋಗ, ಧ್ಯಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ.

ಯೋಗ, ಧ್ಯಾನ ಶಿಬಿರ
ಯೋಗ, ಧ್ಯಾನ ಶಿಬಿರ

ದೊಡ್ಡಬಳ್ಳಾಪುರ: ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಅಪರಾಧ ಚಟುವಟಿಕೆಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸರು ಸದಾ ಒತ್ತಡದಲ್ಲಿ ಬದುಕುತ್ತಾರೆ. ಪೊಲೀಸರ ಒತ್ತಡ ಕಡಿಮೆ ಮಾಡುವ ಸಲುವಾಗಿ ದೊಡ್ಡಬಳ್ಳಾಪುರ ನಗರದ ಬಾಬು ಜಗಜೀವನ್ ರಾಂ ಭವನದಲ್ಲಿ ಯೋಗ ಶಿಬಿರವನ್ನು ಅಯೋಜನೆ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನಾ ವಂಶಿಕೃಷ್ಣ, ದೊಡ್ಡಬಳ್ಳಾಪುರ ಉಪವಿಭಾಗಧಿಕಾರಿ ವ್ಯಾಪ್ತಿಯಲ್ಲಿನ ಪೊಲೀಸ್ ಸಿಬ್ಬಂದಿಗೆ 5 ದಿನಗಳ ಯೋಗ, ಧ್ಯಾನ ಶಿಬಿರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ನವರು ಪೊಲೀಸರಿಗೆ ಒತ್ತಡ ಮುಕ್ತ ಬದುಕಿನ ಬಗ್ಗೆ ತರಬೇತಿ ಕೊಡುತ್ತಿದ್ದಾರೆ. ಪೊಲೀಸ್ ಕೆಲಸವೇ ಸದಾ ಒತ್ತಡದಲ್ಲಿರುವ ಕೆಲಸ. ಸಿಬ್ಬಂದಿಗೆ ಸಾರ್ವಜನಿಕರ ಜೊತೆ ಬೆರೆತು, ಠಾಣೆಗಳಿಗೆ ಬರುವ ದೂರುಗಳನ್ನು ನೋಡಿ ಕೆಲವರು ಮಾನಸಿಕವಾಗಿಯೂ ಕುಗ್ಗಿದ್ದಾರೆ. ಹೀಗಾಗಿ, ಪೊಲೀಸ್ ಸಿಬ್ಬಂದಿ ಒತ್ತಡ ನಿವಾರಣೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ಯೋಗ ಹಾಗೂ ಧ್ಯಾನದ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ಯೋಗ ಶಿಬಿರ ಆಯೋಜನೆ

ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿಯೂ ಒತ್ತಡಕ್ಕೆ ಒಳಗಾಗುತ್ತಿದ್ದಾರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಇಲಾಖೆಯಲ್ಲಿ ನೇಮಕಾತಿ ಕೆಲಸ ಕಾರ್ಯಗಳು ಅತ್ಯಂತ ವೇಗವಾಗಿ ನಡೆಯುತ್ತಿದೆ. ಪ್ರತಿನಿತ್ಯವೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿದೆ. ಇದರ ಮಧ್ಯೆ ಮುಂದಿನ ಒಂದೂವರೆ ವರ್ಷದಲ್ಲಿ ಸಿಬ್ಬಂದಿ ಕೊರತೆ ನಿಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಸ್ಯಾಂಡಲ್​ವುಡ್ ಆ್ಯಕ್ಷನ್​ ಕ್ವೀನ್​ಗೆ​ ಮಾಲಾಶ್ರೀ ಎಂದು ಹೆಸರಿಟ್ಟವರಾರು?: ತೆಲುಗು ಶೋನಲ್ಲಿ ಸ್ವಾರಸ್ಯಕರ ವಿಚಾರ ಬಹಿರಂಗ

ದೊಡ್ಡಬಳ್ಳಾಪುರ: ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಅಪರಾಧ ಚಟುವಟಿಕೆಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸರು ಸದಾ ಒತ್ತಡದಲ್ಲಿ ಬದುಕುತ್ತಾರೆ. ಪೊಲೀಸರ ಒತ್ತಡ ಕಡಿಮೆ ಮಾಡುವ ಸಲುವಾಗಿ ದೊಡ್ಡಬಳ್ಳಾಪುರ ನಗರದ ಬಾಬು ಜಗಜೀವನ್ ರಾಂ ಭವನದಲ್ಲಿ ಯೋಗ ಶಿಬಿರವನ್ನು ಅಯೋಜನೆ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನಾ ವಂಶಿಕೃಷ್ಣ, ದೊಡ್ಡಬಳ್ಳಾಪುರ ಉಪವಿಭಾಗಧಿಕಾರಿ ವ್ಯಾಪ್ತಿಯಲ್ಲಿನ ಪೊಲೀಸ್ ಸಿಬ್ಬಂದಿಗೆ 5 ದಿನಗಳ ಯೋಗ, ಧ್ಯಾನ ಶಿಬಿರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ನವರು ಪೊಲೀಸರಿಗೆ ಒತ್ತಡ ಮುಕ್ತ ಬದುಕಿನ ಬಗ್ಗೆ ತರಬೇತಿ ಕೊಡುತ್ತಿದ್ದಾರೆ. ಪೊಲೀಸ್ ಕೆಲಸವೇ ಸದಾ ಒತ್ತಡದಲ್ಲಿರುವ ಕೆಲಸ. ಸಿಬ್ಬಂದಿಗೆ ಸಾರ್ವಜನಿಕರ ಜೊತೆ ಬೆರೆತು, ಠಾಣೆಗಳಿಗೆ ಬರುವ ದೂರುಗಳನ್ನು ನೋಡಿ ಕೆಲವರು ಮಾನಸಿಕವಾಗಿಯೂ ಕುಗ್ಗಿದ್ದಾರೆ. ಹೀಗಾಗಿ, ಪೊಲೀಸ್ ಸಿಬ್ಬಂದಿ ಒತ್ತಡ ನಿವಾರಣೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ಯೋಗ ಹಾಗೂ ಧ್ಯಾನದ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ಯೋಗ ಶಿಬಿರ ಆಯೋಜನೆ

ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿಯೂ ಒತ್ತಡಕ್ಕೆ ಒಳಗಾಗುತ್ತಿದ್ದಾರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಇಲಾಖೆಯಲ್ಲಿ ನೇಮಕಾತಿ ಕೆಲಸ ಕಾರ್ಯಗಳು ಅತ್ಯಂತ ವೇಗವಾಗಿ ನಡೆಯುತ್ತಿದೆ. ಪ್ರತಿನಿತ್ಯವೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿದೆ. ಇದರ ಮಧ್ಯೆ ಮುಂದಿನ ಒಂದೂವರೆ ವರ್ಷದಲ್ಲಿ ಸಿಬ್ಬಂದಿ ಕೊರತೆ ನಿಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಸ್ಯಾಂಡಲ್​ವುಡ್ ಆ್ಯಕ್ಷನ್​ ಕ್ವೀನ್​ಗೆ​ ಮಾಲಾಶ್ರೀ ಎಂದು ಹೆಸರಿಟ್ಟವರಾರು?: ತೆಲುಗು ಶೋನಲ್ಲಿ ಸ್ವಾರಸ್ಯಕರ ವಿಚಾರ ಬಹಿರಂಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.