ETV Bharat / city

ದಾವಣಗೆರೆ ವಿವಿಯಲ್ಲಿ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಆರಂಭ: ಸ್ಪರ್ಧಾರ್ಥಿಗಳ ಸಂತಸ - ದಾವಣಗೆರೆಯಲ್ಲಿ ಸ್ಪರ್ಧಾತ್ಮಕ ತರಬೇತಿ ಕೇಂದ್ರ

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಾಂಕೇತಿಕವಾಗಿ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಆರಂಭವಾಗಿದೆ.

competitive training centre
ಸ್ಪರ್ಧಾತ್ಮಕ ತರಬೇತಿ ಕೇಂದ್ರ ಆರಂಭ
author img

By

Published : Jan 3, 2020, 9:33 AM IST

Updated : Jan 3, 2020, 11:35 AM IST

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಸ್ಪರ್ಧಾತ್ಮಕ ಬಹುದಿನದ ಕನಸು ನನಸಾಗಿದೆ. ಬೆಣ್ಣೆನಗರಿಗೆ ಮತ್ತೊಂದು ಹೆಸರಾದ ಶಿಕ್ಷಣ ನಗರಿಯಲ್ಲಿ‌ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಶುರುವಾಗಿದ್ದು, ಉದ್ಯೋಗ ಆಕಾಂಕ್ಷಿಗಳಿಗೆ ಖುಷಿ ತಂದಿದೆ.

ತೋಳಹುಣಸೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಜಿಲ್ಲಾಧಿಕಾರಿ ವೈಯುಕ್ತಿಕವಾಗಿ ₹ 3 ಲಕ್ಷ ನೀಡುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ. ಸದ್ಯದ ಮಟ್ಟಿಗೆ ತರಬೇತಿಗೆ ಕಡಿಮೆ ಶುಲ್ಕ ನಿಗದಿಗೊಳಿಸಲಾಗಿದೆ ಎಂದು ಉಪಕುಲಪತಿ ಡಾ. ವಿಎಸ್ ಹಲಸೆ ಮಾಹಿತಿ ನೀಡಿದ್ದಾರೆ.

ಸ್ಪರ್ಧಾತ್ಮಕ ತರಬೇತಿ ಕೇಂದ್ರ
ಈ ಸ್ಪರ್ಧಾತ್ಮಕ ತರಬೇತಿ ಕೇಂದ್ರ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಪಕ್ಕದ ಜಿಲ್ಲೆಗಳ ಆಸಕ್ತ ಬಡ ವಿದ್ಯಾರ್ಥಿಗಳಿಗೆ ಉಪಕಾರಿಯಾಗಿದೆ. ಶಿಬಿರದಲ್ಲಿ ಪ್ರತ್ಯೇಕ ಗ್ರಂಥಾಲಯ, ಅಧ್ಯಯನ‌ ಕೊಠಡಿ ತೆರೆಯಲಾಗಿದೆ. 60 ವಿದ್ಯಾರ್ಥಿಗಳಿಗೆ ಪ್ರವೇಶ ವ್ಯವಸ್ಥೆ ಮಾಡಿದ್ದು, ಸಂಜೆ ಮಾತ್ರ ತರಗತಿಗಳು ನಡೆಯಲಿವೆ.

ಯುಪಿಎಸ್​​​ಸಿ ಮತ್ತು ಕೆಪಿಎಸ್​ಸಿ ಪರೀಕ್ಷೆಗಳಿಗೆ ಆದ್ಯತೆ ನೀಡಲಾಗಿದ್ದು, ಅಂಕಗಳ ಆಧಾರದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಶೇ. 50ರಷ್ಟು ಸ್ಥಾನ‌ ಮೀಸಲಿಡಲಾಗಿದೆ. ಪ್ರವೇಶ ಪರೀಕ್ಷೆ ಮೂಲಕ ಇದೇ 12ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಸ್ಪರ್ಧಾತ್ಮಕ ಬಹುದಿನದ ಕನಸು ನನಸಾಗಿದೆ. ಬೆಣ್ಣೆನಗರಿಗೆ ಮತ್ತೊಂದು ಹೆಸರಾದ ಶಿಕ್ಷಣ ನಗರಿಯಲ್ಲಿ‌ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಶುರುವಾಗಿದ್ದು, ಉದ್ಯೋಗ ಆಕಾಂಕ್ಷಿಗಳಿಗೆ ಖುಷಿ ತಂದಿದೆ.

ತೋಳಹುಣಸೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಜಿಲ್ಲಾಧಿಕಾರಿ ವೈಯುಕ್ತಿಕವಾಗಿ ₹ 3 ಲಕ್ಷ ನೀಡುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ. ಸದ್ಯದ ಮಟ್ಟಿಗೆ ತರಬೇತಿಗೆ ಕಡಿಮೆ ಶುಲ್ಕ ನಿಗದಿಗೊಳಿಸಲಾಗಿದೆ ಎಂದು ಉಪಕುಲಪತಿ ಡಾ. ವಿಎಸ್ ಹಲಸೆ ಮಾಹಿತಿ ನೀಡಿದ್ದಾರೆ.

ಸ್ಪರ್ಧಾತ್ಮಕ ತರಬೇತಿ ಕೇಂದ್ರ
ಈ ಸ್ಪರ್ಧಾತ್ಮಕ ತರಬೇತಿ ಕೇಂದ್ರ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಪಕ್ಕದ ಜಿಲ್ಲೆಗಳ ಆಸಕ್ತ ಬಡ ವಿದ್ಯಾರ್ಥಿಗಳಿಗೆ ಉಪಕಾರಿಯಾಗಿದೆ. ಶಿಬಿರದಲ್ಲಿ ಪ್ರತ್ಯೇಕ ಗ್ರಂಥಾಲಯ, ಅಧ್ಯಯನ‌ ಕೊಠಡಿ ತೆರೆಯಲಾಗಿದೆ. 60 ವಿದ್ಯಾರ್ಥಿಗಳಿಗೆ ಪ್ರವೇಶ ವ್ಯವಸ್ಥೆ ಮಾಡಿದ್ದು, ಸಂಜೆ ಮಾತ್ರ ತರಗತಿಗಳು ನಡೆಯಲಿವೆ.

ಯುಪಿಎಸ್​​​ಸಿ ಮತ್ತು ಕೆಪಿಎಸ್​ಸಿ ಪರೀಕ್ಷೆಗಳಿಗೆ ಆದ್ಯತೆ ನೀಡಲಾಗಿದ್ದು, ಅಂಕಗಳ ಆಧಾರದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಶೇ. 50ರಷ್ಟು ಸ್ಥಾನ‌ ಮೀಸಲಿಡಲಾಗಿದೆ. ಪ್ರವೇಶ ಪರೀಕ್ಷೆ ಮೂಲಕ ಇದೇ 12ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Intro:ದಾವಣಗೆರೆ; ಮಧ್ಯ ಕರ್ನಾಟಕದ ಕೇಂದ್ರಬಿಂದು ದಾವಣಗೆರೆಯ ಬಹುದಿನದ ಕನಸು ನನಸಾಗಿದೆ, ಬೆಣ್ಣೆನಗರಿಗೆ ಮತ್ತೊಂದು ಹೆಸರಾದ ಶಿಕ್ಷಣ ನಗರಿಯಲ್ಲಿ‌ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಶುರುವಾಗಿದ್ದು, ವಿದ್ಯಾರ್ಥಿಗಳಿಗೆ, ಉದ್ಯೋಗ ಆಕಾಂಕ್ಷಿಗಳಿಗೆ ಪೂರಕವಾಗಿದೆ...



Body:ವಾಯ್ಸ್ ೧: ಹೌದು..‌ ಶಿಕ್ಷಣ ನಗರಿ ದಾವಣಗೆರೆಯಲ್ಲಿ ಸ್ಪರ್ಧಾತ್ಮಕ ತರಬೇತಿ‌ ಕೇಂದ್ರ ಪ್ರಾರಂಭಗೊಂಡಿದೆ.. ತೋಳಹುಣಸೆಯಲ್ಲಿರುವ ದಾವಣಗೆರೆ ವಿಶ್ವಾವಿದ್ಯಾಲಯದಲ್ಲಿ ಈಗಾಗಲೇ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಿದ್ದು, ಡಿಸಿಯವರು ವೈಯುಕ್ತಿಕವಾಗಿ ಮೂರು ಲಕ್ಷ ರೂಪಾಯಿ ನೀಡುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ. ಇನ್ನೂ ತರಬೇತಿಗೆ ಕಡಿಮೆ ಶುಲ್ಕ ನಿಗಧಿಗೊಳಿಸಲಾಗಿದೆ ಎಂದು ಉಪಕುಲಪತಿ ಡಾ. ವಿಎಸ್ ಹಲಸೆ ಮಾಹಿತಿ ನೀಡಿದ್ದಾರೆ...

ಬೈಟ್; ಡಾ. ವಿಎಸ್ ಹಲಸೆ. ದಾವಣಗೆರೆ ವಿವಿ ಉಪಕುಲಪತಿ( ಕೂತು ಮಾತನಾಡಿರುವವರು)

ವಾಯ್ಸ್ ೨: ಪ್ರಸ್ತುತ ಯೋಜನೆಯಿಂದ ಮಧ್ಯಕರ್ನಾಟಕ ಭಾಗದ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಪಕ್ಕದ ಜಿಲ್ಲೆಗಳಿಗೆ ಅನುಕೂಲವಾಗಲಿದೆ.. ಆಸಕ್ತ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ನೆರವು ನೀಡುವ ಉದ್ದೇಶ ಹೊಂದಲಾಗಿದೆ. ಶಿಬಿರದಲ್ಲಿ ಪ್ರತ್ಯೇಕ ಗ್ರಂಥಾಲಯ, ಅಧ್ಯಯನ‌ ಕೊಠಡಿ ತೆರೆಯಲಾಗಿದೆ. ಸದ್ಯಕ್ಕೆ ಸುಮಾರು 60 ವಿದ್ಯಾರ್ಥಿಗಳಿಗೆ ಪ್ರವೇಶ ವ್ಯವಸ್ಥೆ ಮಾಡಿದ್ದು, ಸಂಜೆ ತರಗತಿಗಳು ನಡೆಯಲಿವೆ, ಯುಪಿಎಸ್ ಸಿ ಮತ್ತು ಕೆಪಿಎಸ್ ಸಿ ಪರೀಕ್ಷೆಗಳಿಗೆ ಆದ್ಯತೆ ನೀಡಲಾಗಿದ್ದು, ಅಂಕಗಳ ಆಧಾರದ ಮೇಲೆ ದಾವಣಗೆರೆ ವಿವಿ ವಿದ್ಯಾರ್ಥಿಗಳಿಗೆ 50% ರಷ್ಟು ಸ್ಥಾನ‌ ಮೀಸಲಿಡಲಾಗಿದೆ. ಪ್ರವೇಶ ಪರೀಕ್ಷೆ ಮೂಲಕ ಇದೇ 12 ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಬೈಟ್; ಜಯಪ್ರಕಾಶ್ ಕೊಂಡಜ್ಜಿ.. ಸಿಂಡಿಕೇಟ್ ಸದಸ್ಯರು. ( ನಿಂತು ಮಾತನಾಡಿರುವವರು)


Conclusion:ವಾಯ್ಸ್ ೩: ಒಟ್ಟಾರೆ ಬಹುದಿನದ ಬೇಡಿಕೆಯಾಗಿದ್ದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಶುರುವಾಗಿದ್ದು, ಆಸಕ್ತ ಹಾಗೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ..

- ಮಧುನಾಗರಾಜ್ ಈಟಿವಿ ಭಾರತ್ ದಾವಣಗೆರೆ..
Last Updated : Jan 3, 2020, 11:35 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.