ETV Bharat / city

ಪ್ರತಿಷ್ಠೆಯ ಕಣವಾದ ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆ: ಇಂದು ಹೈಕೋರ್ಟ್ ತೀರ್ಪು

author img

By

Published : Feb 17, 2021, 10:25 AM IST

ಸಚಿವ ಆರ್.ಶಂಕರ್ ಹೆಸರು ದಾವಣಗೆರೆಯ ಮತದಾರರ ಪಟ್ಟಿಯಲ್ಲಿರುವುದನ್ನು ಅಸಿಂಧು ಮಾಡಿ ಎಂದು ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್ ಹಾಗೂ ಕಾಂಗ್ರೆಸ್ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಹೈಕೋರ್ಟ್​ನಿಂದ ತೀರ್ಪು ಪ್ರಕಟವಾಗಲಿದೆ.

Davangere Munciple Mayor election
ಪ್ರತಿಷ್ಠೆಯ ಕಣವಾದ ದಾವಣಗೆರೆ ಪಾಲಿಕೆ ಮೇಯರ್ ಚುನಾವಣೆ

ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಮೇಯರ್ ಚುನಾವಣೆ ಬೆನ್ನಲ್ಲೇ ಮತದಾರರ ಪಟ್ಟಿಯಲ್ಲಿ ಸಚಿವ ಆರ್.ಶಂಕರ್ ಹೆಸರು ಅಕ್ರಮವಾಗಿ ಸೇರ್ಪಡೆ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದ್ದು, ಇಂದು ಹೈಕೋರ್ಟ್​ ತೀರ್ಪು ಹೊರಬೀಳಲಿದೆ.

Davangere Munciple Mayor election
ಪ್ರತಿಷ್ಠೆಯ ಕಣವಾದ ದಾವಣಗೆರೆ ಪಾಲಿಕೆ ಮೇಯರ್ ಚುನಾವಣೆ: ಇಂದು ಹೈಕೋರ್ಟ್ ತೀರ್ಪು

ಪಾಲಿಕೆಯ 45 ವಾರ್ಡ್​ಗಳ ಪೈಕಿ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 1, ಪಕ್ಷೇತರರು 5 ಸದಸ್ಯರ ಗೆಲುವು ಸಾಧಿಸಿದ್ದರು. ಈ ಪೈಕಿ 4 ಜನ ಪಕ್ಷೇತರರು ಬಿಜೆಪಿಗೆ ಬೆಂಬಲಿಸಿದ್ದು, ಬಿಜೆಪಿಯ ಸದಸ್ಯರ ಸಂಖ್ಯೆ 21 ಏರಿಕೆಯಾಗಿದೆ.

ಓದಿ: ಎಫ್​ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಬಂಧನ

ರಾಣೆಬೆನ್ನೂರಿನ ಮತದಾರರ ಪಟ್ಟಿಯಲ್ಲಿ ಸಚಿವ ಆರ್.ಶಂಕರ್ ಹೆಸರಿದ್ದರೂ ಕೂಡ ದಾವಣಗೆರೆಯಲ್ಲಿ ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಸಚಿವ ಆರ್.ಶಂಕರ್ ಹೆಸರು ದಾವಣಗೆರೆಯ ಮತದಾರರ ಪಟ್ಟಿಯಲ್ಲಿರುವುದನ್ನು ಅಸಿಂಧು ಮಾಡಿ ಎಂದು ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್ ಹಾಗೂ ಕಾಂಗ್ರೆಸ್ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೆಲವೇ ಕ್ಷಣಗಳಲ್ಲಿ ಹೈಕೋರ್ಟ್​ನಿಂದ ತೀರ್ಪು ಪ್ರಕಟವಾಗಲಿದೆ.

ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಮೇಯರ್ ಚುನಾವಣೆ ಬೆನ್ನಲ್ಲೇ ಮತದಾರರ ಪಟ್ಟಿಯಲ್ಲಿ ಸಚಿವ ಆರ್.ಶಂಕರ್ ಹೆಸರು ಅಕ್ರಮವಾಗಿ ಸೇರ್ಪಡೆ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದ್ದು, ಇಂದು ಹೈಕೋರ್ಟ್​ ತೀರ್ಪು ಹೊರಬೀಳಲಿದೆ.

Davangere Munciple Mayor election
ಪ್ರತಿಷ್ಠೆಯ ಕಣವಾದ ದಾವಣಗೆರೆ ಪಾಲಿಕೆ ಮೇಯರ್ ಚುನಾವಣೆ: ಇಂದು ಹೈಕೋರ್ಟ್ ತೀರ್ಪು

ಪಾಲಿಕೆಯ 45 ವಾರ್ಡ್​ಗಳ ಪೈಕಿ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 1, ಪಕ್ಷೇತರರು 5 ಸದಸ್ಯರ ಗೆಲುವು ಸಾಧಿಸಿದ್ದರು. ಈ ಪೈಕಿ 4 ಜನ ಪಕ್ಷೇತರರು ಬಿಜೆಪಿಗೆ ಬೆಂಬಲಿಸಿದ್ದು, ಬಿಜೆಪಿಯ ಸದಸ್ಯರ ಸಂಖ್ಯೆ 21 ಏರಿಕೆಯಾಗಿದೆ.

ಓದಿ: ಎಫ್​ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಬಂಧನ

ರಾಣೆಬೆನ್ನೂರಿನ ಮತದಾರರ ಪಟ್ಟಿಯಲ್ಲಿ ಸಚಿವ ಆರ್.ಶಂಕರ್ ಹೆಸರಿದ್ದರೂ ಕೂಡ ದಾವಣಗೆರೆಯಲ್ಲಿ ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಸಚಿವ ಆರ್.ಶಂಕರ್ ಹೆಸರು ದಾವಣಗೆರೆಯ ಮತದಾರರ ಪಟ್ಟಿಯಲ್ಲಿರುವುದನ್ನು ಅಸಿಂಧು ಮಾಡಿ ಎಂದು ಪಾಲಿಕೆ ಸದಸ್ಯ ದೇವರಮನಿ ಶಿವಕುಮಾರ್ ಹಾಗೂ ಕಾಂಗ್ರೆಸ್ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದು, ಕೆಲವೇ ಕ್ಷಣಗಳಲ್ಲಿ ಹೈಕೋರ್ಟ್​ನಿಂದ ತೀರ್ಪು ಪ್ರಕಟವಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.