ETV Bharat / city

ಕುರುಬರ ಎಸ್​ಟಿ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆ: ನಿರಂಜನಾನಂದಪುರಿ ಶ್ರೀ ಭಾಗಿ

author img

By

Published : Dec 5, 2020, 2:33 PM IST

ದಾವಣಗೆರೆ ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಬೀರೇಶ್ವರ ಭವನಲ್ಲಿ ಇಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀ ಹಾಗು ಹೊಸದುರ್ಗ ಶಾಖ ಮಠದ ಈಶ್ವರಾನಂದಪುರಿ ಶ್ರೀ ನೇತೃತ್ವದಲ್ಲಿ ಕುರುಬರ ಎಸ್ ಟಿ​ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆ ನಡೆಸಲಾಯಿತು.

ಕುರುಬ ಸಮುದಾಯದವರಿಂದ ಪೂರ್ವಭಾವಿ ಸಭೆ
ಕುರುಬ ಸಮುದಾಯದವರಿಂದ ಪೂರ್ವಭಾವಿ ಸಭೆ

ದಾವಣಗೆರೆ: ಕುರುಬ ಸಮುದಾಯವನ್ನು ಎಸ್​ಟಿ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ನಡೆಸುವ ಹೋರಾಟದ ಕುರಿತು ಪೂರ್ವಭಾವಿ ಸಭೆಯನ್ನು ಕುರುಬ ವಿದ್ಯಾವರ್ಧಕ ಸಂಘದಿಂದ ಇಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು‌.

ಕುರುಬ ಸಮುದಾಯದವರಿಂದ ಪೂರ್ವಭಾವಿ ಸಭೆ

ದಾವಣಗೆರೆ ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಬೀರೇಶ್ವರ ಭವನಲ್ಲಿ ನಡೆದ ಸಭೆಯಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ ಬಗ್ಗೆ ರೂಪರೇಷೆಗಳನ್ನು ಹಾಕಿಕೊಳ್ಳಲಾಯಿತು. ಸಭೆಯಲ್ಲಿ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀ ಹಾಗು ಹೊಸದುರ್ಗ ಶಾಖ ಮಠದ ಈಶ್ವರಾನಂದಪುರಿ ಶ್ರೀ ಭಾಗಿಯಾಗಿ ಸಮಾಜದ ಮುಖಂಡರೊಂದಿಗೆ ಚರ್ಚಿಸಿದರು.

ಕುರುಬರನ್ನು ಎಸ್​ಟಿಗೆ ಸೇರಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಕುರುಬ ಸಮಾಜದಿಂದ ಎಸ್​ಟಿ ಮೀಸಲಾತಿಗಾಗಿ 24 ದಿನಗಳ ಕಾಲ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಜನವರಿ 15 ರಿಂದ‌ ಮೀಸಲಾತಿಗಾಗಿ ಪಾದಯಾತ್ರೆ ಆರಂಭವಾಗಿ, ಫೆ 07 ರಂದು ಪಾದಯಾತ್ರೆ ಮುಕ್ತಾಯವಾಗಲಿದೆ. ಫೆ 07 ಕ್ಕೆ‌ ಬೆಂಗಳೂರಿನಲ್ಲಿ ಎಸ್​ಟಿ ಮೀಸಲಾತಿ ಕುರಿತು ರಾಜ್ಯ ಮಟ್ಟದ ಬೃಹತ್‌ ಸಮಾವೇಶ ಕೂಡ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ 10 ಲಕ್ಷ ಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ‌ ಇದೆ. ಕಾಗಿನೆಲೆಯಿಂದ‌ ಬೆಂಗಳೂರಿಗೆ ಸುಮಾರು 340 ಕಿ.ಮೀ. ಪಾದಯಾತ್ರೆ‌ ಮಾಡುವುದಾಗಿ ಶ್ರೀ ನಿರಂಜನಾನಂದ ಪುರಿ ಸ್ವಾಮಿಗಳು ನಿರ್ಧರಿಸಿದ್ದು, ಸಮಾಜದ ಮುಖಂಡರು ಶ್ರೀಯವರಿಗೆ ಸಾಥ್‌ ನೀಡಲಿದ್ದಾರೆ.

ದಾವಣಗೆರೆ: ಕುರುಬ ಸಮುದಾಯವನ್ನು ಎಸ್​ಟಿ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ನಡೆಸುವ ಹೋರಾಟದ ಕುರಿತು ಪೂರ್ವಭಾವಿ ಸಭೆಯನ್ನು ಕುರುಬ ವಿದ್ಯಾವರ್ಧಕ ಸಂಘದಿಂದ ಇಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು‌.

ಕುರುಬ ಸಮುದಾಯದವರಿಂದ ಪೂರ್ವಭಾವಿ ಸಭೆ

ದಾವಣಗೆರೆ ನಗರದ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಬೀರೇಶ್ವರ ಭವನಲ್ಲಿ ನಡೆದ ಸಭೆಯಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ ಬಗ್ಗೆ ರೂಪರೇಷೆಗಳನ್ನು ಹಾಕಿಕೊಳ್ಳಲಾಯಿತು. ಸಭೆಯಲ್ಲಿ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀ ಹಾಗು ಹೊಸದುರ್ಗ ಶಾಖ ಮಠದ ಈಶ್ವರಾನಂದಪುರಿ ಶ್ರೀ ಭಾಗಿಯಾಗಿ ಸಮಾಜದ ಮುಖಂಡರೊಂದಿಗೆ ಚರ್ಚಿಸಿದರು.

ಕುರುಬರನ್ನು ಎಸ್​ಟಿಗೆ ಸೇರಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಕುರುಬ ಸಮಾಜದಿಂದ ಎಸ್​ಟಿ ಮೀಸಲಾತಿಗಾಗಿ 24 ದಿನಗಳ ಕಾಲ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಜನವರಿ 15 ರಿಂದ‌ ಮೀಸಲಾತಿಗಾಗಿ ಪಾದಯಾತ್ರೆ ಆರಂಭವಾಗಿ, ಫೆ 07 ರಂದು ಪಾದಯಾತ್ರೆ ಮುಕ್ತಾಯವಾಗಲಿದೆ. ಫೆ 07 ಕ್ಕೆ‌ ಬೆಂಗಳೂರಿನಲ್ಲಿ ಎಸ್​ಟಿ ಮೀಸಲಾತಿ ಕುರಿತು ರಾಜ್ಯ ಮಟ್ಟದ ಬೃಹತ್‌ ಸಮಾವೇಶ ಕೂಡ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ 10 ಲಕ್ಷ ಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ‌ ಇದೆ. ಕಾಗಿನೆಲೆಯಿಂದ‌ ಬೆಂಗಳೂರಿಗೆ ಸುಮಾರು 340 ಕಿ.ಮೀ. ಪಾದಯಾತ್ರೆ‌ ಮಾಡುವುದಾಗಿ ಶ್ರೀ ನಿರಂಜನಾನಂದ ಪುರಿ ಸ್ವಾಮಿಗಳು ನಿರ್ಧರಿಸಿದ್ದು, ಸಮಾಜದ ಮುಖಂಡರು ಶ್ರೀಯವರಿಗೆ ಸಾಥ್‌ ನೀಡಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.