ದಾವಣಗೆರೆ: ಕೊರೊನಾ ಸೋಂಕಿತರಿಗೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇರುವವರಿಗೆ ಮತ್ತಷ್ಟು ಪೌಷ್ಟಿಕ ಆಹಾರ ಪೂರೈಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದಕ್ಕೆ ಆಯುಷ್ ಇಲಾಖೆಯೂ ಕೈ ಜೋಡಿಸಿದೆ.
ಮೈಸೂರು ಸಿಎಫ್ಟಿಆರ್ಐನಿಂದ ವಿಟಮಿನ್ ಮ್ಯಾಂಗೊ ಬಾರ್ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸ್ಪಿರುಲಿನಾ ಚಿಕ್ಕಿಗಳನ್ನು ತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದರು.
ದಾವಣಗೆರೆಯಲ್ಲಿ 65 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ ಮೂವರಿಗೆ ಮಾತ್ರ ಸ್ವಲ್ಪ ಮಟ್ಟಿನ ತೊಂದರೆ ಕಂಡು ಬಂದಿದೆ. ಉಳಿದವರು ಆರೋಗ್ಯವಾಗಿದ್ದಾರೆ ಎಂದರು.
ರೋಗಿ-533 ಚಿಕಿತ್ಸೆ 14 ದಿನ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆ ಎರಡನೇ ಬಾರಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದ ಅವರು, ಎಲ್ಲಾ ರೋಗಿಗಳು ಗುಣಮುಖರಾಗುವ ವಿಶ್ವಾಸವಿದೆ ಎಂದು ಭರವಸೆ ನೀಡಿದರು.