ETV Bharat / city

ಪಠ್ಯ ಪುಸ್ತಕ ವಿವಾದ: ಸಿಎಂ, ಶಿಕ್ಷಣ ಸಚಿವರಿಗೆ ಸಾಣೇಹಳ್ಳಿ ಶ್ರೀ ಪತ್ರ

author img

By

Published : May 31, 2022, 8:01 PM IST

ಪಠ್ಯ ಪುಸಕ್ತ ವಿವಾದ ಇದೀಗ ಸ್ವಾಮೀಜಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.

ಸಾಣೇಹಳ್ಳಿ ಶ್ರೀ ಪತ್ರ
ಸಾಣೇಹಳ್ಳಿ ಶ್ರೀ ಪತ್ರ

ದಾವಣಗೆರೆ: ಪಠ್ಯಪುಸ್ತಕ ವಿವಾದ ಸಾಹಿತಿಗಳ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಇದೀಗ ಮಠಾಧೀಶರ ಕೆಂಗಣ್ಣಿಗೆ ಗುರಿಯಾಗಿದೆ. ಹೌದು 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದಲ್ಲಿ ಬಸವಣ್ಣನವರ ಬಗ್ಗೆ ಸೇರಿಸಿರುವ ಪಠ್ಯವನ್ನು ಪರಿಷ್ಕರಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದಿದ್ದಾರೆ. ಇದೀಗ ಅ ಪತ್ರದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಕಾರಕ್ಕೆ ಶ್ರೀಗಳು ಬರೆದ ಪತ್ರದಲ್ಲಿ ಏನಿದೆ...? 'ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳಿಗೆ ಎಂದು ಆರಂಭಿಸಿರುವ ಅವರು ಪಠ್ಯಪುಸ್ತಕ ರಚನಾ ಸಮಿತಿ ಮತ್ತು ಅದು ಬದಲಾಯಿಸಿರುವ ಪಠ್ಯ ಕುರಿತು ಸಾಕಷ್ಟು ಆಕ್ಷೇಪ ಮತ್ತು ಆಪಾದನೆ ಕೇಳಿಬರುತ್ತಿವೆ. ಯಾವ ಹಂತದಲ್ಲಿ ಏನೇನು ಬದಲಾಯಿಸಿದ್ದಾರೆ, ಸೇರಿಸಿದ್ದಾರೆ ಎನ್ನುವುದನ್ನು ಗಮನಿಸೋಣ ಎಂದರೆ ಪಠ್ಯಪುಸ್ತಕಗಳೇ ಎಲ್ಲೂ ದೊರೆಯುತ್ತಿಲ್ಲ. ಈಗಾಗಲೇ ಶಾಲೆಗಳು ಪ್ರಾರಂಭವಾಗಿ 15 ದಿನಗಳಾಗಿವೆ. ಆದರೂ ಪಠ್ಯಪುಸ್ತಕಗಳಿಲ್ಲ ಎಂದರೆ ಶಿಕ್ಷಕರು ಏನು ಪಾಠ ಮಾಡಬೇಕು? ಈಗಿನ ಪಠ್ಯಸಮಿತಿಯಲ್ಲಿರುವವರು ಒಂದು ವರ್ಗಕ್ಕೆ ಸೇರಿದವರೆಂಬುದು ಮೇಲ್ನೋಟಕ್ಕೆ ಎದ್ದು ತೋರುವುದು. ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಪಠ್ಯ ರಚನಾ ಸಮಿತಿಯಲ್ಲಿರಬೇಕಾದದ್ದು ಅಪೇಕ್ಷಣೀಯ. ಅಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು.

ಸಾಣೇಹಳ್ಳಿ ಶ್ರೀ ಪತ್ರ
ಸಾಣೇಹಳ್ಳಿ ಶ್ರೀ ಪತ್ರ

ವಾಟ್ಸಾಪ್‌ನಲ್ಲಿ ನಾವು ನೋಡಿರುವಂತೆ 9ನೆಯ ತರಗತಿಯ 'ಸಮಾಜ ವಿಜ್ಞಾನ ಪಠ್ಯಪುಸ್ತಕ (ಪರಿಷ್ಕೃತ-2022) ಭಾಗ-1 ರಲ್ಲಿ ಬಸವಣ್ಣನವರ ಕುರಿತ ಪಾಠವಿದೆ. ಕಳೆದ ವರ್ಷವೂ ಈ ಪಾಠವಿತ್ತು. ಆದರೆ ಅದರಲ್ಲಿನ ಪ್ರಮುಖ ಸಾಲುಗಳನ್ನು ತೆಗೆದು ತಮಗೆ ಬೇಕಾದವುಗಳನ್ನು ಸೇರಿಸಿದ್ದಾರೆ. ಕಳೆದ ವರ್ಷದ ಪಾಠದಲ್ಲಿ 'ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ: ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು. ಜಾತಿ ವ್ಯವಸ್ಥೆಯ ಕಡು ವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಯೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ 'ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ವೇತನಕ್ಕೆ ಟೊಂಕಕಟ್ಟಿದರು'. 'ಸ್ವಾವಲಂಬನೆಯ ತತ್ವವನ್ನು, 'ದೇಹವೇ ದೇಗುಲ', 'ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ.

ಸಾಣೇಹಳ್ಳಿ ಶ್ರೀ ಪತ್ರ
ಸಾಣೇಹಳ್ಳಿ ಶ್ರೀ ಪತ್ರ

ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಇಂಥ ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ. ಈ ಬದಲಾವಣೆ ನಿಜಕ್ಕೂ ಖಂಡನಾರ್ಹ, ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ, 'ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು' ಎನ್ನುವುದು ಶುದ್ಧ ಸುಳ್ಳು. ಅವರು 'ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು' ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು' ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಎಚ್ಚರಿಸಿದ್ದಾರೆ.

(ಇದನ್ನೂ ಓದಿ: ಪಠ್ಯ ಪರಿಷ್ಕರಣೆಯ ಪ್ರಮಾದಗಳ ಬಗ್ಗೆ ಪ್ರತಿರೋಧ ತೀವ್ರ.. ಸರ್ಕಾರದ ವಿರುದ್ಧ ಸಾಹಿತಿಗಳಿಂದ ದೊಡ್ಡ ಸಂಘರ್ಷ!?)

ದಾವಣಗೆರೆ: ಪಠ್ಯಪುಸ್ತಕ ವಿವಾದ ಸಾಹಿತಿಗಳ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಇದೀಗ ಮಠಾಧೀಶರ ಕೆಂಗಣ್ಣಿಗೆ ಗುರಿಯಾಗಿದೆ. ಹೌದು 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದಲ್ಲಿ ಬಸವಣ್ಣನವರ ಬಗ್ಗೆ ಸೇರಿಸಿರುವ ಪಠ್ಯವನ್ನು ಪರಿಷ್ಕರಿಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದಿದ್ದಾರೆ. ಇದೀಗ ಅ ಪತ್ರದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಕಾರಕ್ಕೆ ಶ್ರೀಗಳು ಬರೆದ ಪತ್ರದಲ್ಲಿ ಏನಿದೆ...? 'ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳಿಗೆ ಎಂದು ಆರಂಭಿಸಿರುವ ಅವರು ಪಠ್ಯಪುಸ್ತಕ ರಚನಾ ಸಮಿತಿ ಮತ್ತು ಅದು ಬದಲಾಯಿಸಿರುವ ಪಠ್ಯ ಕುರಿತು ಸಾಕಷ್ಟು ಆಕ್ಷೇಪ ಮತ್ತು ಆಪಾದನೆ ಕೇಳಿಬರುತ್ತಿವೆ. ಯಾವ ಹಂತದಲ್ಲಿ ಏನೇನು ಬದಲಾಯಿಸಿದ್ದಾರೆ, ಸೇರಿಸಿದ್ದಾರೆ ಎನ್ನುವುದನ್ನು ಗಮನಿಸೋಣ ಎಂದರೆ ಪಠ್ಯಪುಸ್ತಕಗಳೇ ಎಲ್ಲೂ ದೊರೆಯುತ್ತಿಲ್ಲ. ಈಗಾಗಲೇ ಶಾಲೆಗಳು ಪ್ರಾರಂಭವಾಗಿ 15 ದಿನಗಳಾಗಿವೆ. ಆದರೂ ಪಠ್ಯಪುಸ್ತಕಗಳಿಲ್ಲ ಎಂದರೆ ಶಿಕ್ಷಕರು ಏನು ಪಾಠ ಮಾಡಬೇಕು? ಈಗಿನ ಪಠ್ಯಸಮಿತಿಯಲ್ಲಿರುವವರು ಒಂದು ವರ್ಗಕ್ಕೆ ಸೇರಿದವರೆಂಬುದು ಮೇಲ್ನೋಟಕ್ಕೆ ಎದ್ದು ತೋರುವುದು. ಶಿಕ್ಷಣ ಕ್ಷೇತ್ರದಲ್ಲಿ ದುಡಿದವರು, ಶಿಕ್ಷಣ ತಜ್ಞರು, ಸಾಮಾಜಿಕ ಕಾಳಜಿಯುಳ್ಳ ದೂರದೃಷ್ಟಿಯುಳ್ಳವರು ಪಠ್ಯ ರಚನಾ ಸಮಿತಿಯಲ್ಲಿರಬೇಕಾದದ್ದು ಅಪೇಕ್ಷಣೀಯ. ಅಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು.

ಸಾಣೇಹಳ್ಳಿ ಶ್ರೀ ಪತ್ರ
ಸಾಣೇಹಳ್ಳಿ ಶ್ರೀ ಪತ್ರ

ವಾಟ್ಸಾಪ್‌ನಲ್ಲಿ ನಾವು ನೋಡಿರುವಂತೆ 9ನೆಯ ತರಗತಿಯ 'ಸಮಾಜ ವಿಜ್ಞಾನ ಪಠ್ಯಪುಸ್ತಕ (ಪರಿಷ್ಕೃತ-2022) ಭಾಗ-1 ರಲ್ಲಿ ಬಸವಣ್ಣನವರ ಕುರಿತ ಪಾಠವಿದೆ. ಕಳೆದ ವರ್ಷವೂ ಈ ಪಾಠವಿತ್ತು. ಆದರೆ ಅದರಲ್ಲಿನ ಪ್ರಮುಖ ಸಾಲುಗಳನ್ನು ತೆಗೆದು ತಮಗೆ ಬೇಕಾದವುಗಳನ್ನು ಸೇರಿಸಿದ್ದಾರೆ. ಕಳೆದ ವರ್ಷದ ಪಾಠದಲ್ಲಿ 'ಮಧ್ಯಕಾಲದ ಕರ್ನಾಟಕದ ಸಮಾಜವನ್ನು ಸುಧಾರಿಸಲು ಹೋರಾಡಿದ ಪ್ರವರ್ತಕರಲ್ಲಿ ಬಸವೇಶ್ವರರು ಒಬ್ಬರಾಗಿದ್ದಾರೆ. ವೈದಿಕ ಮೂಲ ಧರ್ಮದಲ್ಲಿ ಬೇರೂರಿದ್ದ ಅಸಂಖ್ಯ ಧಾರ್ಮಿಕ ಆಚರಣಾ ವಿಧಿ ವಿಧಾನಗಳನ್ನು ಬದಿಗೊತ್ತಿ ಮಾನವೀಯ ಮೌಲ್ಯ ಆಧಾರಿತ ಸರಳ: ವೀರಶೈವ ಸಿದ್ಧಾಂತವನ್ನು ಬಸವೇಶ್ವರರು ಹಾಗೂ ಅವರ ಅನುಯಾಯಿಗಳಾದ ಶರಣರು ಪ್ರಚಾರಪಡಿಸಿದರು. ಜಾತಿ ವ್ಯವಸ್ಥೆಯ ಕಡು ವಿರೋಧಿಯಾಗಿದ್ದ ಬಸವೇಶ್ವರರು ತಮ್ಮ ಉಪನಯನದ ನಂತರ ಯಜ್ಯೋಪವೀತವನ್ನು ಕಿತ್ತೆಸೆದು ಕೂಡಲಸಂಗಮಕ್ಕೆ 'ಉನ್ನತಾಧಿಕಾರದಲ್ಲಿದ್ದರೂ ಹಣ, ಅಧಿಕಾರ, ಅಧಿಪತ್ಯ ಇವ್ಯಾವುದರಿಂದಲೂ ಇವರು ವಿಚಲಿತರಾಗಲಿಲ್ಲ. ತಮ್ಮ ಇಡೀ ಜೀವನವನ್ನು ಸಮಾಜ ಮತ್ತು ಧರ್ಮದಲ್ಲಿನ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಮೀಸಲಿರಿಸಿದರು. ಸಮಾಜ, ಧರ್ಮದ ಪುನಶ್ವೇತನಕ್ಕೆ ಟೊಂಕಕಟ್ಟಿದರು'. 'ಸ್ವಾವಲಂಬನೆಯ ತತ್ವವನ್ನು, 'ದೇಹವೇ ದೇಗುಲ', 'ಈ ಬಗೆಯ ಸಂವೇದನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪಗಳಾಗಿವೆ.

ಸಾಣೇಹಳ್ಳಿ ಶ್ರೀ ಪತ್ರ
ಸಾಣೇಹಳ್ಳಿ ಶ್ರೀ ಪತ್ರ

ಅವರು ಸರಳ ಕನ್ನಡವನ್ನು ಬಳಸುವ ಮೂಲಕ ತಮ್ಮ ಚಳವಳಿಯನ್ನು ಜನಮುಖಿಯಾಗಿಸಿದರು. ಇಂಥ ಅನೇಕ ಮಹತ್ವದ ಅಂಶಗಳನ್ನೇ ತೆಗೆದುಹಾಕಿ ತಮಗೆ ಬೇಕಾದಂತೆ ತಿರುಚಿದ್ದಾರೆ. ಬಸವಣ್ಣನವರ ಮತ್ತು ಅವರು ಪ್ರತಿಪಾದಿಸಿದ ಲಿಂಗಾಯತ ಧರ್ಮದ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ. ಈ ಬದಲಾವಣೆ ನಿಜಕ್ಕೂ ಖಂಡನಾರ್ಹ, ಬಸವಣ್ಣನವರ ಶುದ್ಧ, ಪಾರದರ್ಶಕ ಬದುಕಿಗೆ ಕಳಂಕ ತಂದಂತೆ, 'ವಚನಕಾರರು ವೀರಶೈವ ಮತವನ್ನು ಸುಧಾರಿಸಿದರು' ಎನ್ನುವುದು ಶುದ್ಧ ಸುಳ್ಳು. ಅವರು 'ಲಿಂಗಾಯತ ಧರ್ಮವನ್ನು ಜಾರಿಯಲ್ಲಿ ತಂದರು' ಎಂದಾಗಬೇಕಿತ್ತು. ಇಂತಹ ಹಲವು ದೋಷಗಳಾಗಿವೆ. ಆದುದರಿಂದ ತಕ್ಷಣ ಇಡೀ ಪಠ್ಯವನ್ನೇ ತಡೆಹಿಡಿದು ಎಲ್ಲಿಯೂ ದೋಷವಾಗದಂತೆ ಪರಿಷ್ಕರಣೆ ಮಾಡಬೇಕು. ಇಲ್ಲವೇ ಹಿಂದಿನ ಪಠ್ಯವನ್ನೇ ಮುಂದುವರಿಸಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸದಿದ್ದರೆ ನಾಡಿನಾದ್ಯಂತ ಹೋರಾಟ ನಡೆಯುವುದು ಅನಿವಾರ್ಯವಾಗಬಹುದು' ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಎಚ್ಚರಿಸಿದ್ದಾರೆ.

(ಇದನ್ನೂ ಓದಿ: ಪಠ್ಯ ಪರಿಷ್ಕರಣೆಯ ಪ್ರಮಾದಗಳ ಬಗ್ಗೆ ಪ್ರತಿರೋಧ ತೀವ್ರ.. ಸರ್ಕಾರದ ವಿರುದ್ಧ ಸಾಹಿತಿಗಳಿಂದ ದೊಡ್ಡ ಸಂಘರ್ಷ!?)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.