ETV Bharat / city

ವರದಕ್ಷಿಣೆ ಕಿರುಕುಳ: ನೇಣಿಗೆ ಶರಣಾದ ನವ ವಿವಾಹಿತೆ

author img

By

Published : Jun 30, 2021, 5:03 PM IST

ವರದಕ್ಷಿಣೆ ಕಿರುಕುಳ ತಾಳದೇ ನವ ವಿವಾಹಿತೆ ನೇಣು ಬಿಗಿದುಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

Woman committed suicide
ನವ ವಿವಾಹಿತೆ

ದಾವಣಗೆರೆ: ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಪತಿಯೇ ಕೊಲೆ ಮಾಡಿದ್ದಾನೆ ಎಂದು ಯುವತಿಯ ಪೋಷಕರು ಆರೋಪ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವರದಕ್ಷಿಣೆ ಕಿರುಕುಳಕ್ಕೆ ನಲುಗಿ ನವ ವಿವಾಹಿತೆ ನೇಣಿಗೆ ಶರಣು

ದಾವಣಗೆರೆ ಹೊಸ ಕುಂದವಾಡ ಗ್ರಾಮದ ನಿವಾಸಿಯಾಗಿರುವ ರೂಪಾ ವರದಕ್ಷಿಣೆ ಕಿರುಕುಳಕ್ಕೆ ನಲುಗಿ ನೇಣಿಗೆ ಶರಣಾಗಿದ್ದಾಳೆ‌. 10 ತೊಲ ಬಂಗಾರ ಸೇರಿದಂತೆ ಲಕ್ಷಾಂತರ ರೂ. ವರದಕ್ಷಿಣೆ ನೀಡಿ ರೂಪಾಳ ಪೋಷಕರು ಕಳೆದ ಡಿಸೆಂಬರ್ 10 ರಂದು ದಾವಣಗೆರೆ ತಾಲೂಕಿನ ಹನುಮನಹಳ್ಳಿ ಗ್ರಾಮದ ಜಯಪ್ರಕಾಶ್ ಎನ್ನುವ ಯುವಕನೊಂದಿಗೆ ಅದ್ಧೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾಗಿ ಆರು ತಿಂಗಳ ಬಳಿಕ ಜಯಪ್ರಕಾಶ್​ಗೆ ರೂಪಾ ಮೇಲೆ ಅನುಮಾನ ಮೂಡಲು ಆರಂಭಿಸಿದ್ದು, ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ರೂಪಾ ಪೋಷಕರಿಗೆ ಕರೆ ಮಾಡಿ, ಬೇರೊಬ್ಬನ ಜೊತೆ ಮಾತನಾಡುತ್ತಿದ್ದೀಯಾ ಎಂದು ನನ್ನ ಗಂಡ ಆರೋಪ ಮಾಡುತ್ತಿದ್ದಾರೆ. ಅನುಮಾನ ಪಡುತ್ತಿದ್ದಾರೆ. ಆದರೆ, ನಾನು ಯಾವುದೇ ಕಾರಣಕ್ಕೂ ಸಾಯುವುದಿಲ್ಲ. ಧೈರ್ಯವಾಗಿ ಎದುರಿಸಿ ನನ್ನ ಕಳಂಕವನ್ನು ನಾನೇ ತೊಡೆದು ಹಾಕುತ್ತೇನೆ ಎಂದು ತಾಯಿ ನಿರ್ಮಲಾಗೆ ಕರೆ ಮಾಡಿ ಹೇಳಿದ್ದಳಂತೆ. ವರದಕ್ಷಿಣೆ ಕಿರುಕುಳ ನೀಡಿ ನಮ್ಮ ಮಗಳನ್ನು ಹೊಡೆದು ಕೊಲೆ ಮಾಡಿ ಈಗ ನೇಣು ಹಾಕಿದ್ದಾರೆ ಎಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

ಇನ್ನು ವಿಷಯ ತಿಳಿದು ತಹಶೀಲ್ದಾರ್ ಗಿರೀಶ್ ಶವಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಹಿತಿ ಕಲೆ ಹಾಕಿದ್ದಾರೆ. ಒಂದು ವೇಳೆ ಆರೋಪ ಸಾಬೀತಾದರೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ತಹಶೀಲ್ದಾರ್ ತಿಳಿಸಿದ್ದಾರೆ.

ದಾವಣಗೆರೆ: ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಪತಿಯೇ ಕೊಲೆ ಮಾಡಿದ್ದಾನೆ ಎಂದು ಯುವತಿಯ ಪೋಷಕರು ಆರೋಪ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವರದಕ್ಷಿಣೆ ಕಿರುಕುಳಕ್ಕೆ ನಲುಗಿ ನವ ವಿವಾಹಿತೆ ನೇಣಿಗೆ ಶರಣು

ದಾವಣಗೆರೆ ಹೊಸ ಕುಂದವಾಡ ಗ್ರಾಮದ ನಿವಾಸಿಯಾಗಿರುವ ರೂಪಾ ವರದಕ್ಷಿಣೆ ಕಿರುಕುಳಕ್ಕೆ ನಲುಗಿ ನೇಣಿಗೆ ಶರಣಾಗಿದ್ದಾಳೆ‌. 10 ತೊಲ ಬಂಗಾರ ಸೇರಿದಂತೆ ಲಕ್ಷಾಂತರ ರೂ. ವರದಕ್ಷಿಣೆ ನೀಡಿ ರೂಪಾಳ ಪೋಷಕರು ಕಳೆದ ಡಿಸೆಂಬರ್ 10 ರಂದು ದಾವಣಗೆರೆ ತಾಲೂಕಿನ ಹನುಮನಹಳ್ಳಿ ಗ್ರಾಮದ ಜಯಪ್ರಕಾಶ್ ಎನ್ನುವ ಯುವಕನೊಂದಿಗೆ ಅದ್ಧೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾಗಿ ಆರು ತಿಂಗಳ ಬಳಿಕ ಜಯಪ್ರಕಾಶ್​ಗೆ ರೂಪಾ ಮೇಲೆ ಅನುಮಾನ ಮೂಡಲು ಆರಂಭಿಸಿದ್ದು, ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ರೂಪಾ ಪೋಷಕರಿಗೆ ಕರೆ ಮಾಡಿ, ಬೇರೊಬ್ಬನ ಜೊತೆ ಮಾತನಾಡುತ್ತಿದ್ದೀಯಾ ಎಂದು ನನ್ನ ಗಂಡ ಆರೋಪ ಮಾಡುತ್ತಿದ್ದಾರೆ. ಅನುಮಾನ ಪಡುತ್ತಿದ್ದಾರೆ. ಆದರೆ, ನಾನು ಯಾವುದೇ ಕಾರಣಕ್ಕೂ ಸಾಯುವುದಿಲ್ಲ. ಧೈರ್ಯವಾಗಿ ಎದುರಿಸಿ ನನ್ನ ಕಳಂಕವನ್ನು ನಾನೇ ತೊಡೆದು ಹಾಕುತ್ತೇನೆ ಎಂದು ತಾಯಿ ನಿರ್ಮಲಾಗೆ ಕರೆ ಮಾಡಿ ಹೇಳಿದ್ದಳಂತೆ. ವರದಕ್ಷಿಣೆ ಕಿರುಕುಳ ನೀಡಿ ನಮ್ಮ ಮಗಳನ್ನು ಹೊಡೆದು ಕೊಲೆ ಮಾಡಿ ಈಗ ನೇಣು ಹಾಕಿದ್ದಾರೆ ಎಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

ಇನ್ನು ವಿಷಯ ತಿಳಿದು ತಹಶೀಲ್ದಾರ್ ಗಿರೀಶ್ ಶವಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾಹಿತಿ ಕಲೆ ಹಾಕಿದ್ದಾರೆ. ಒಂದು ವೇಳೆ ಆರೋಪ ಸಾಬೀತಾದರೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ತಹಶೀಲ್ದಾರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.