ETV Bharat / city

ಪ್ರೇಮ ವೈಫಲ್ಯ.. ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

author img

By

Published : Aug 11, 2021, 4:01 PM IST

ರೈಲಿಗೆ ತಲೆಕೊಡುವ ಮುನ್ನ 'ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿಯೇ ಕಾರಣ' ಎಂದು ವಾಟ್ಸ್‌ಆ್ಯಪ್​​​ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Youth commit suicide
ಮಹಾಂತೇಶ್

ದಾವಣಗೆರೆ : ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ನಗರದ ಹೆಚ್‌ಕೆಆರ್ ವೃತ್ತದ ಹೊಸ ಲೆನಿನ್‌ ನಗರದ ನಿವಾಸಿ ಮಹಾಂತೇಶ್ (24) ಮೃತ ಯುವಕ. ಕರೂರು ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ಇಡೀ ಕುಟುಂಬಕ್ಕೆ ಆಧಾರವಾಗಿದ್ದ.

ಆದರೆ, ಮಹಾಂತೇಶ್​ ಕೆಲಸ ಮಾಡುತ್ತಿದ್ದ ಗಾರ್ಮೆಂಟ್ಸ್​​ನಲ್ಲಿನ ಯುವತಿಯೊಬ್ಬಳ ಪರಿಚಯವಾಗಿ ಬಳಿಕ ಅದು ಪ್ರೇಮಕ್ಕೆ ತಿರುಗಿತ್ತು. ಆದರೆ, ಯುವತಿ ಮದುವೆಗೆ ನಿರಾಕರಿಸಿದ ಬೆನ್ನಲ್ಲೇ ಮಹಾಂತೇಶ್ ಸಾವಿಗೆ ಶರಣಾಗಿದ್ದಾನೆ.

Youth commit suicide
ಮಹಾಂತೇಶ್ ಮೃತದೇಹ

ರೈಲಿಗೆ ತಲೆಕೊಡುವ ಮುನ್ನ 'ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿಯೇ ಕಾರಣ' ಎಂದು ವಾಟ್ಸ್‌ಆ್ಯಪ್​​​ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ : ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ನಗರದ ಹೆಚ್‌ಕೆಆರ್ ವೃತ್ತದ ಹೊಸ ಲೆನಿನ್‌ ನಗರದ ನಿವಾಸಿ ಮಹಾಂತೇಶ್ (24) ಮೃತ ಯುವಕ. ಕರೂರು ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ಇಡೀ ಕುಟುಂಬಕ್ಕೆ ಆಧಾರವಾಗಿದ್ದ.

ಆದರೆ, ಮಹಾಂತೇಶ್​ ಕೆಲಸ ಮಾಡುತ್ತಿದ್ದ ಗಾರ್ಮೆಂಟ್ಸ್​​ನಲ್ಲಿನ ಯುವತಿಯೊಬ್ಬಳ ಪರಿಚಯವಾಗಿ ಬಳಿಕ ಅದು ಪ್ರೇಮಕ್ಕೆ ತಿರುಗಿತ್ತು. ಆದರೆ, ಯುವತಿ ಮದುವೆಗೆ ನಿರಾಕರಿಸಿದ ಬೆನ್ನಲ್ಲೇ ಮಹಾಂತೇಶ್ ಸಾವಿಗೆ ಶರಣಾಗಿದ್ದಾನೆ.

Youth commit suicide
ಮಹಾಂತೇಶ್ ಮೃತದೇಹ

ರೈಲಿಗೆ ತಲೆಕೊಡುವ ಮುನ್ನ 'ನನ್ನ ಸಾವಿಗೆ ನಾನು ಪ್ರೀತಿಸಿದ ಹುಡುಗಿಯೇ ಕಾರಣ' ಎಂದು ವಾಟ್ಸ್‌ಆ್ಯಪ್​​​ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.