ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲೂ ವರುಣ ಅಬ್ಬರಿಸಿದ್ದಾನೆ. ಭಾನುವಾರ ಸಿಡಿಲು ಬಡಿದು 14 ಕುರಿಗಳು ಮತ್ತು ಒಂದು ಕುದುರೆ ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಸಿದ್ಯಾವನೂರು ಗ್ರಾಮದಲ್ಲಿ ನಡೆದಿದೆ. ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆ ಮರದ ಬಳಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗ್ತಿದೆ.
ಗ್ರಾಮದ ವಿಠಲ ಲಟ್ಟಣ್ಣವರ ಎಂಬುವರಿಗೆ ಸೇರಿದ ಕುರಿಗಳಾಗಿವೆ. ಇವರು ಊರೂರು ಸುತ್ತುತ್ತ ಜೀವನ ಸಾಗಿಸುವ ಸಂಚಾರಿ ಕುರಿಗಾಹಿಗಳಾಗಿದ್ದು, ಈ ಆಘಾತದಿಂದ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ: ವೈಯಕ್ತಿಕ ಕಾರಣಕ್ಕೆ ಯುವಕನ ಎದೆಗೆ ಚಾಕು ಇರಿತ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ