ಹುಬ್ಬಳ್ಳಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳನ್ನು ರಾಮ ಮಂದಿರ ನಿರ್ಮಾಣ ಕಮಿಟಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಸಿಪಿಎಂ ಪಕ್ಷದ ಕೇರಳದ ಮಾಜಿ ಸಚಿವ ಎಂ.ಎ.ಬೇಬಿ ಗಂಭೀರ ಆರೋಪ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಬ್ರಿ ಮಸೀದಿ ಕೆಡವಿದ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ನೃತ್ಯಗೋಪಾಲ್ ದಾಸ್ ಹಾಗೂ ಸಂಪತ್ ರಾಜ್ ಹೆಸರಿದೆ. ಇಷ್ಟಾದರೂ ಕೂಡ ಅವರನ್ನು ರಾಮ ಮಂದಿರ ನಿರ್ಮಾಣ ಕಮಿಟಿಯಲ್ಲಿ ಸ್ಥಾನ ಪಡೆದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇನ್ನು ಬೆಂಗಳೂರಿನಲ್ಲಿ ಪಾಕ್ ಪರ ಅಮೂಲ್ಯ ಎಂಬ ಯುವತಿ ಘೋಷಣೆ ಕೂಗಿದ್ದು ಖಂಡನೀಯ. ಭಾರತ ದೇಶಕ್ಕೆ ಬೇಕಾಗಿರುವುದು ಪೌರತ್ವ ತಿದ್ದುಪಡಿ ಕಾಯ್ದೆಯಲ್ಲ. ದೇಶದಲ್ಲಿರುವ ನಿರುದ್ಯೋಗವನ್ನು ಹೋಗಲಾಡಿಸುವ ಅಭಿವೃದ್ಧಿ ಕಾರ್ಯಗಳು ಬೇಕಾಗಿವೆ ಎಂದರು.