ETV Bharat / city

ಶಾಮಿಯಾನ ಉದ್ಯಮ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ - ರಾಜ್ಯ ಶಾಮಿಯಾನ ಡೆಕೋರೇಷನ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘ

ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಶಾಮಿಯಾನ ಉದ್ಯಮ ನೆಲಕಚ್ಚಿದೆ. ರಾಜ್ಯದಲ್ಲಿ ಸಾವಿರಾರು ಶಾಮಿಯಾನ ಮಾಲೀಕರು ಹಾಗೂ ಕಾರ್ಮಿಕರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಹೀಗಾಗಿ, ಸರ್ಕಾರ ಖಾಸಗಿ ಕಾರ್ಯಕ್ರಮಗಳನ್ನು ಎಂದಿನಂತೆ ನಡೆಸಲು ಅನುಮತಿ ನೀಡಬೇಕೆಂದು ರಾಜ್ಯ ಶಾಮಿಯಾನ ಡೆಕೋರೇಷನ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಮನವಿ ಮಾಡಿದ್ದಾರೆ.

Appeal to allow the Shamiyana industry to run
ಶಾಮಿಯಾನ ಉದ್ಯಮ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ
author img

By

Published : Apr 7, 2021, 9:11 AM IST

ಹುಬ್ಬಳ್ಳಿ: ಖಾಸಗಿ ಕಾರ್ಯಕ್ರಮಗಳನ್ನು ಎಂದಿನಂತೆ ನಡೆಸಲು ಅನುಮತಿ ನೀಡುವ ಮೂಲಕ ಶಾಮಿಯಾನ ಉದ್ಯಮ ನಡೆಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಶಾಮಿಯಾನ ಡೆಕೋರೇಷನ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಕುಮಾರ್ ಹಿರೇಮಠ ಸರ್ಕಾರವನ್ನು ಒತ್ತಾಯಿಸಿದರು.

ಶಾಮಿಯಾನ ಉದ್ಯಮ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದುವೆ ಕಾರ್ಯಕ್ರಮಗಳ ಸೀಜನ್ ಆಗಿರುವ ಕಾರಣ ಅಡುಗೆಯವರು, ಲೈಟಿಂಗ್, ಶಾಮಿಯಾನ, ಫೋಟೋ, ವಿಡಿಯೋಗ್ರಾಫರ್, ಪುರೋಹಿತರು, ಮದುವೆ ಪತ್ರಿಕೆ ಪ್ರಿಂಟರ್ಸ್​, ಮಾರಾಟಗಾರರು ಹಾಗೂ ಹೂವು ಮಾರುವವರು ಮದುವೆ ಸಮಾರಂಭಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಏಕಾಏಕಿ ಸಭೆ-ಸಮಾರಂಭಗಳಿಗೆ ನಿರ್ಬಂಧ ಹಾಕಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.

ಸರ್ಕಾರ ಎಲ್ಲ ಉದ್ಯಮಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ಶ್ಯಾಮಿಯಾನ ಉದ್ಯಮಕ್ಕೆ ಯಾವುದೇ ಅನುಕೂಲ ಮಾಡಿಲ್ಲ. ಈ ಬಗ್ಗೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಹಾಗಾಗಿ, ಸರ್ಕಾರ ಸಂಕಷ್ಟದಲ್ಲಿರುವ ಶ್ಯಾಮಿಯಾನ ಕೆಲಸಗಾರರಿಗೆ ಕಾರ್ಯಕ್ರಮ ನಡೆಸಲು ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ, ಪರ್ಯಾಯ ವ್ಯವಸ್ಥೆ ಹೀಗಿದೆ..

ಹುಬ್ಬಳ್ಳಿ: ಖಾಸಗಿ ಕಾರ್ಯಕ್ರಮಗಳನ್ನು ಎಂದಿನಂತೆ ನಡೆಸಲು ಅನುಮತಿ ನೀಡುವ ಮೂಲಕ ಶಾಮಿಯಾನ ಉದ್ಯಮ ನಡೆಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಶಾಮಿಯಾನ ಡೆಕೋರೇಷನ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಕುಮಾರ್ ಹಿರೇಮಠ ಸರ್ಕಾರವನ್ನು ಒತ್ತಾಯಿಸಿದರು.

ಶಾಮಿಯಾನ ಉದ್ಯಮ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದುವೆ ಕಾರ್ಯಕ್ರಮಗಳ ಸೀಜನ್ ಆಗಿರುವ ಕಾರಣ ಅಡುಗೆಯವರು, ಲೈಟಿಂಗ್, ಶಾಮಿಯಾನ, ಫೋಟೋ, ವಿಡಿಯೋಗ್ರಾಫರ್, ಪುರೋಹಿತರು, ಮದುವೆ ಪತ್ರಿಕೆ ಪ್ರಿಂಟರ್ಸ್​, ಮಾರಾಟಗಾರರು ಹಾಗೂ ಹೂವು ಮಾರುವವರು ಮದುವೆ ಸಮಾರಂಭಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಏಕಾಏಕಿ ಸಭೆ-ಸಮಾರಂಭಗಳಿಗೆ ನಿರ್ಬಂಧ ಹಾಕಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.

ಸರ್ಕಾರ ಎಲ್ಲ ಉದ್ಯಮಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ಶ್ಯಾಮಿಯಾನ ಉದ್ಯಮಕ್ಕೆ ಯಾವುದೇ ಅನುಕೂಲ ಮಾಡಿಲ್ಲ. ಈ ಬಗ್ಗೆ ಹಲವಾರು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಹಾಗಾಗಿ, ಸರ್ಕಾರ ಸಂಕಷ್ಟದಲ್ಲಿರುವ ಶ್ಯಾಮಿಯಾನ ಕೆಲಸಗಾರರಿಗೆ ಕಾರ್ಯಕ್ರಮ ನಡೆಸಲು ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ, ಪರ್ಯಾಯ ವ್ಯವಸ್ಥೆ ಹೀಗಿದೆ..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.